Homeಮುಖಪುಟಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

- Advertisement -
- Advertisement -

ಮುಂಬರುವ ಹಣಕಾಸು ವರ್ಷದಲ್ಲಿ (2025-26) ಭಾರತದ ಜಿಡಿಪಿ ಬೆಳವಣಿಗೆ ದರ ಶೇಕಡ 6.3 ರಿಂದ ಶೇಕಡ 6.8 ಇರಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ (ಜ.31) ಮಂಡಿಸಿದ ಕೇಂದ್ರ ಸರ್ಕಾರದ ವಾರ್ಷಿಕ ಆರ್ಥಿಕ ಸಮೀಕ್ಷೆ ವರದಿ ಅಂದಾಜಿಸಿದೆ.

ಇದರರ್ಥ ಸತತ ಎರಡನೇ ಹಣಕಾಸು ವರ್ಷವೂ ಜಿಡಿಪಿ ಬೆಳವಣಿಗೆ ದರ ಶೇಖಡ 7ಕ್ಕಿಂತ ಕಡಿಮೆ ಇರುತ್ತದೆ ಎಂದಾಗಿದೆ.

ಜನವರಿ 7ರಂದು ರಾಷ್ಟ್ರೀಯ ಅಂಕಿ ಅಂಶ ಕಚೇರಿ ಬಿಡುಗಡೆ ಮಾಡಿದ್ದ ಸರ್ಕಾರದ ಆರಂಭಿಕ ಅಂದಾಜಿನ ಪ್ರಕಾರ, 2024-25ರ ಹಣಕಾಸು ವರ್ಷದಲ್ಲಿ ದೇಶದ ನೈಜ ಜಿಡಿಪಿ ನಾಲ್ಕು ವರ್ಷಗಳ ಕನಿಷ್ಠ ಮಟ್ಟವಾದ ಶೇಖಡ 6.4ಕ್ಕೆ ಇಳಿಯಲಿದೆ ಎಂದಿತ್ತು.

2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆಗೆ ಒಂದು ದಿನ ಮೊದಲು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆರ್ಥಿಕ ಸಮೀಕ್ಷೆ ವರದಿಯು ದೇಶದ ಆರ್ಥಿಕತೆಯ ಸ್ಥಿತಿಯನ್ನು ವಿವರಿಸುತ್ತದೆ ಮತ್ತು ಬೆಳವಣಿಗೆಯನ್ನು ಹೆಚ್ಚಿಸುವ ಕ್ರಮಗಳನ್ನು ಸೂಚಿಸುತ್ತದೆ.

ಆರ್ಥಿಕ ವ್ಯವಹಾರಗಳ ಇಲಾಖೆ ಸಿದ್ದಪಡಿಸಿದ ಈ ಸಮೀಕ್ಷೆ ವರದಿಯು ಜಾಗತಿಕ ಅಡೆತಡೆಗಳನ್ನು ನಿವಾರಿಸಲು “ಕಾರ್ಯತಂತ್ರದ, ವಿವೇಕಯುತ ನೀತಿ ನಿರ್ವಹಣೆ ಮತ್ತು ದೇಶೀಯ ಮೂಲಭೂತ ಅಂಶಗಳನ್ನು ಬಲಪಡಿಸುವ” ಅಗತ್ಯವಿದೆ ಎಂದು ಹೇಳಿದೆ.

ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ನಿರೀಕ್ಷೆಗಳು ಸಮತೋಲಿತವಾಗಿವೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ವರದಿಯಲ್ಲಿ ತಿಳಿಸಿದ್ದಾರೆ.

“ಆರ್ಥಿಕ ಬೆಳವಣಿಗೆಗೆ ಎದುರಾಗುವ ಪ್ರಮುಖ ಕಾರಣಗಳಲ್ಲಿ ಭೌಗೋಳಿಕ, ರಾಜಕೀಯ ವ್ಯಾಪಾರ ಅನಿಶ್ಚಿತತೆಗಳು ಮತ್ತು ಸರಕು ಬೆಲೆಗಳ ಆಘಾತಗಳು ಸೇರಿವೆ” ಎಂದು ನಾಗೇಶ್ವರನ್ ಹೇಳಿದ್ದಾರೆ. “ದೇಶೀಯವಾಗಿ, ಖಾಸಗಿ ಬಂಡವಾಳ ಸರಕುಗಳ ವಲಯದ ನಿರಂತರ ಹೂಡಿಕೆ ಏರಿಕೆ, ಗ್ರಾಹಕರ ವಿಶ್ವಾಸದಲ್ಲಿ ಸುಧಾರಣೆಗಳು ಮತ್ತು ಕಾರ್ಪೊರೇಟ್ ವೇತನ ಏರಿಕೆ ಬೆಳವಣಿಗೆಯನ್ನು ಉತ್ತೇಜಿಸುವ ಪ್ರಮುಖ ಅಂಶಗಳಾಗಿವೆ” ಎಂದು ತಿಳಿಸಿದ್ದಾರೆ.

“ಕೃಷಿ ಉತ್ಪಾದನೆಯಲ್ಲಿನ ಚೇತರಿಕೆ, ಆಹಾರ ಹಣದುಬ್ಬರದಲ್ಲಿ ನಿರೀಕ್ಷಿತ ಇಳಿಕೆ ಮತ್ತು ಸ್ಥಿರವಾದ ಸ್ಥೂಲ-ಆರ್ಥಿಕ ವಾತಾವರಣದಿಂದ ಬೆಂಬಲಿತವಾದ ಗ್ರಾಮೀಣ ಬೇಡಿಕೆಯು ಅಲ್ಪಾವಧಿಯ ಬೆಳವಣಿಗೆಯಲ್ಲಿ ಸಾಧಿಸುತ್ತದೆ” ಎಂದು ಅವರು ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಶೇ.5.4ರಷ್ಟಿದ್ದ ಚಿಲ್ಲರೆ ಹಣದುಬ್ಬರವು, ಪ್ರಸಕ್ತ ಹಣಕಾಸು ವರ್ಷದಲ್ಲಿ (ಡಿಸೆಂಬರ್ ವರೆಗೆ) ಶೇ.4.9ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ಇಂಧನ ಬೆಲೆ ಹಣದುಬ್ಬರದಲ್ಲಿನ ಇಳಿಕೆಯೇ ಈ ಇಳಿಕೆಗೆ ಪ್ರಮುಖ ಕಾರಣ ಎಂದು ಅದು ಹೇಳಿದೆ.

2024-25ನೇ ಸಾಲಿನ ಪ್ರಸಕ್ತ ಹಣಕಾಸು ವರ್ಷವೂ ಕೃಷಿ ಮತ್ತು ಸೇವಾ ವಲಯಗಳ ಬೆಳವಣಿಗೆಗೆ ಬೆಂಬಲ ನೀಡಿವೆ. ಖಾರಿಫ್ ಉತ್ಪಾದನೆ ಮತ್ತು ಅನುಕೂಲಕರ ಕೃಷಿ ಪರಿಸ್ಥಿತಿಗಳಿಂದಾಗಿ ಗ್ರಾಮೀಣ ಬೇಡಿಕೆ ಸುಧಾರಿಸಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರರು ತಿಳಿಸಿದ್ದಾರೆ.

ದೇಶೀಯ ಋತುಮಾನದ ಪರಿಸ್ಥಿತಿಗಳು ಮತ್ತು ಜಾಗತಿಕ ಬೇಡಿಕೆ ದುರ್ಬಲಗೊಂಡ ಕಾರಣ ಉತ್ಪಾದನಾ ವಲಯವು ಒತ್ತಡವನ್ನು ಎದುರಿಸಿದೆ ಎಂದು ವರದಿ ಹೇಳಿದೆ

ಡಿಸೆಂಬರ್ 30ರಂದು ಭಾರತೀಯ ರಿಸರ್ವ್ ಬ್ಯಾಂಕ್ ಭಾರತದ ಆರ್ಥಿಕತೆಯು ಸ್ಥಿತಿಸ್ಥಾಪಕತ್ವ ಮತ್ತು ಸ್ಥಿರತೆಯನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿತ್ತು. 2024-25ರಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಖಡ 6.6 ಎಂದು ಅಂದಾಜಿಸಿತ್ತು.

ಜನವರಿ 16ರಂದು, ವಿಶ್ವ ಬ್ಯಾಂಕ್ ಭಾರತದ ಆರ್ಥಿಕ ಬೆಳವಣಿಗೆ ಮುಂದಿನ ಎರಡು ಹಣಕಾಸು ವರ್ಷಗಳಲ್ಲಿ ಶೇಖಡ 6.7 ದರದಲ್ಲಿ ಬೆಳೆಯುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿತ್ತು.

ಭಾರತದ ಸೇವಾ ವಲಯವು ಸುಸ್ಥಿರವಾಗಿ ವಿಸ್ತರಿಸುವ ನಿರೀಕ್ಷೆಯಿದೆ. ವ್ಯಾಪಾರ ವಾತಾವರಣವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಸರ್ಕಾರಿ ಉಪಕ್ರಮಗಳಿಂದ ಉತ್ಪಾದನಾ ಚಟುವಟಿಕೆಗಳು ಬಲಗೊಳ್ಳುತ್ತವೆ ಎಂದಿತ್ತು.

ಜನವರಿ 10 ರಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸ್ಥಿರವಾದ ಜಾಗತಿಕ ಬೆಳವಣಿಗೆಯ ಹೊರತಾಗಿಯೂ, 2025ರಲ್ಲಿ ಭಾರತದ ಆರ್ಥಿಕತೆಯು “ಸ್ವಲ್ಪ ದುರ್ಬಲ”ವಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...