Homeಮುಖಪುಟವಕ್ಫ್ ತಿದ್ದುಪಡಿ ಮಸೂದೆ | ಮಧ್ಯಪ್ರವೇಶಕ್ಕೆ ನಿತೀಶ್, ಚಂದ್ರಬಾಬು ನಾಯ್ಡುಗೆ ಪತ್ರ ಬರೆದ ಮೆಹಬೂಬಾ ಮುಫ್ತಿ

ವಕ್ಫ್ ತಿದ್ದುಪಡಿ ಮಸೂದೆ | ಮಧ್ಯಪ್ರವೇಶಕ್ಕೆ ನಿತೀಶ್, ಚಂದ್ರಬಾಬು ನಾಯ್ಡುಗೆ ಪತ್ರ ಬರೆದ ಮೆಹಬೂಬಾ ಮುಫ್ತಿ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸತ್ ಸಮಿತಿ (ಜೆಸಿಪಿ) ಸಂಸತ್ತಿನಲ್ಲಿ ಮಂಡನೆಯಾಗುವ ಸಾಧ್ಯತೆ ಇರುವುದರಿಂದ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು, ಭಾರತದ ರಾಷ್ಟ್ರೀಯ ಏಕತೆ ಮತ್ತು ಕೋಮು ಸಾಮರಸ್ಯಕ್ಕೆ ಈ ಮಸೂದೆಯಿಂದ ಹಾನಿಯಾಗದಂತೆ ತಡೆಯಲು ಇಬ್ಬರು ಎನ್‌ಡಿಎ ಮಿತ್ರಪಕ್ಷಗಳಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಮಧ್ಯಸ್ಥಿಕೆಯನ್ನು ಕೋರಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ

ನಿತೀಶ್ ಮತ್ತು ನಾಯ್ಡು ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಅವರು, ಕಳೆದ ದಶಕದಿಂದ ಮುಸ್ಲಿಮರನ್ನು ವ್ಯವಸ್ಥಿತವಾಗಿ ಹಕ್ಕುಗಳಿಂದ ವಂಚಿತಗೊಳಿಸಲಾಗಿದೆ, ಅಧಿಕಾರವನ್ನು ಕಸಿದುಕೊಳ್ಳಲಾಗಿದೆ ಮತ್ತು ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ವಂಚಿಸಲಾಗಿರುವ ಈ ಸಮಯದಲ್ಲೆ ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆ ಪ್ರಸ್ತಾಪ ಮಾಡಲಾಗಿದೆ ಎಂದು ಮೆಹಬೂಬಾ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಹುಶಃ ಅತ್ಯಂತ ಕಳವಳಕಾರಿ ವಿಷಯವೆಂದರೆ ಜಂಟಿ ಸಂಸದೀಯ ಸಮಿತಿಗೆ ಸಲ್ಲಿಸಲಾದ ಭಿನ್ನಾಭಿಪ್ರಾಯದ ಟಿಪ್ಪಣಿಗಳ ರೂಪದಲ್ಲಿ ವಿರೋಧ ಪಕ್ಷಗಳು ಎತ್ತಿರುವ ಅನುಮಾನಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಅಸಂವಿಧಾನಿಕ, ಅಸಮಂಜಸ ಮತ್ತು ಸರ್ವಾಧಿಕಾರಿ ಮಸೂದೆಯಿಂದ ಸಂಕಷ್ಟಕ್ಕೀಡಾಗುವ ಸಮುದಾಯವನ್ನು ಸಂಪರ್ಕಿಸಲು ಯಾವುದೇ ನಿಜವಾದ ಪ್ರಯತ್ನಗಳಿಲ್ಲದೆ ಸಮಾಲೋಚನೆ ನಡೆಸುವುದು ಹಾಸ್ಯಾಸ್ಪದವೆಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ದೇಶಾದ್ಯಂತ ವಕ್ಫ್ ಒಡೆತನದ ಆಸ್ತಿಗಳ ಸುಧಾರಣೆ ಎಂದು ಹೇಳಲಾಗುತ್ತಿರುವ ಇದರ (ಬಿಲ್) ನಿಜವಾದ ಉದ್ದೇಶ ವಕ್ಫ್ ಕಾಯ್ದೆಯ ಅಡಿಪಾಯವನ್ನೇ ಹಾಳು ಮಾಡುವುದಾಗಿದೆ ಎಂದು ಮೆಹಬೊಬಾ ಹೇಳಿದ್ದಾರೆ. ಪ್ರತಿಯೊಂದು ಪ್ರಸ್ತಾವಿತ ತಿದ್ದುಪಡಿಯು ಮುಸ್ಲಿಂ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಮಾತ್ರವಲ್ಲದೆ ನಮ್ಮ ಸಂವಿಧಾನವು ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಮೇಲೆ ನೇರ ದಾಳಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

“ಈ ತೀವ್ರ ವಿಭಜಕ ಮಸೂದೆಯು 2014 ರಿಂದ ಮುಸ್ಲಿಮರ ವಿರುದ್ಧದ ಕೋಮುವಾದಕ್ಕೆ ಮತ್ತು ವಂಚನೆಗೆ ಕಾರಣವಾಗಿರುವ ಬಹುಸಂಖ್ಯಾತವಾದದ ಸ್ಪಷ್ಟ ಅಭಿವ್ಯಕ್ತಿಯಾಗಿದೆ. ಇದು ವೈವಿಧ್ಯತೆ, ಬಹುತ್ವ ಮತ್ತು ಶಾಂತಿಯುತ ಸಹಬಾಳ್ವೆಯ ಮೂಲ ಮೌಲ್ಯಗಳ ಮೇಲೆ ಅಭಿವೃದ್ಧಿ ಹೊಂದುತ್ತಿರುವ ಭಾರತದ ಕಲ್ಪನೆಯ ಹೃದಯಭಾಗವನ್ನೇ ಹೊಡೆಯುತ್ತದೆ. ಭಾರತಕ್ಕಾಗಿ ಗಾಂಧಿಯವರ ದೃಷ್ಟಿಕೋನದ ಸಾರವನ್ನು ಬದಲಾಯಿಸಲಾಗುತ್ತಿದೆ, ಈ ರಾಷ್ಟ್ರವನ್ನು ಒಟ್ಟಿಗೆ ಕರೆದೊಯ್ಯುವ ಜಾತ್ಯತೀತ ಸಂರಚನೆಯನ್ನು ದುರ್ಬಲಗೊಳಿಸುತ್ತಿದೆ” ಎಂದು ಅವರು ಹೇಳಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ

“ನೀವು ಯಾವಾಗಲೂ ನಮ್ಮ ಸಂವಿಧಾನದಲ್ಲಿ ದೃಢ ನಂಬಿಕೆಯುಳ್ಳವರಾಗಿದ್ದೀರಿ ಮತ್ತು ಗಂಗಾ – ಜಮುನಾ ಸಹೋದರತ್ವದ ಚೈತನ್ಯವನ್ನು ನಿರಂತರವಾಗಿ ಪ್ರತಿಪಾದಿಸುತ್ತಿದ್ದೀರಿ. ಇಂದು, NDA ಯ ಪ್ರಮುಖ ಸದಸ್ಯರಾಗಿ, ನೀವು ಈ ವಿಷಯದ ಮೇಲೆ ಪ್ರಭಾವ ಬೀರಲು ಮತ್ತು ಈ ದಾಳಿಯನ್ನು ನಿಲ್ಲಿಸುವ ಪ್ರಮುಖ ಸಾಲಿನಲ್ಲಿ ಇರುತ್ತೀರಿ. ಈ ಮಸೂದೆಯು ನಮ್ಮ ರಾಷ್ಟ್ರೀಯ ಏಕತೆ ಮತ್ತು ಕೋಮು ಸಾಮರಸ್ಯಕ್ಕೆ ಹಾನಿಯಾಗದಂತೆ ತಡೆಯಲು ನಾನು ನಿಮ್ಮನ್ನು ಪ್ರಾಮಾಣಿಕವಾಗಿ ಒತ್ತಾಯಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂಓದಿ:  ಸಂಸದ ರಶೀದ್ ಬಿಡುಗಡೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: ಕಾರ್ಯಕರ್ತರ ಬಂಧನ

ಸಂಸದ ರಶೀದ್ ಬಿಡುಗಡೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...