Homeಕರ್ನಾಟಕಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

ಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

- Advertisement -
- Advertisement -

ಆರು ಜನ ನಕ್ಸಲರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಮುಖ್ಯವಾಹಿನಿ ತಲುಪಿ ಕಾನೂನು ಪ್ರಕಿಯೆಗೆ ಒಳಪಟ್ಟಿದ್ದಾರೆ. ಕರ್ನಾಟಕದ ಕೊನೆಯ ನಕ್ಸಲ್ ತಂಡದ ಏಕೈಕ ಹೋರಾಟಗಾರ ಕೋಟೆಹೊಂಡ ರವೀಂದ್ರ ಗುಂಪಿನಿಂದ ದೂರಾಗಿದ್ದರು; ಇಂದು (ಫೆ.1) ಅವರೂ ಕೂಡ ಮುಖ್ಯವಾಹಿನಿಗೆ ಬರಲಿದ್ದಾರೆ.

ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಇಂದು ಬೆಳಗ್ಗೆ 12 ಗಂಟೆಗೆ ಚಿಕ್ಕಮಗಳೂರಿನ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮುಖ್ಯವಾಹಿನಿಗೆ ಬರಲಿದ್ದಾರೆ.

6 ಜನ ನಕ್ಸಲರು ಮುಖ್ಯವಾಹಿನಿಗೆ ಬಂದಿದ್ದರೂ ರವೀಂದ್ರ ಕಾಡಿನಲ್ಲೇ ಉಳಿದಿದ್ದರು. ಇವರು ನಕ್ಸಲ್ ಪುನರ್ವಸತಿ ಸಮಿತಿ ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಮುಖಂಡರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಎರಡೂ ಸಮಿತಿಗಳ ಮಾತುಕತೆ ನಂತರ ರವೀಂದ್ರ ಅಂತಿಮವಾಗಿ ಮುಖ್ಯವಾಹಿನಿಗೆ ಮರಳಲು ಒಪ್ಪಿಕೊಂಡಿದ್ದಾರೆ. ಕಳೆದ 18 ವರ್ಷಗಳಿಂದ ಭೂಗತವಾಗಿದ್ದ ರವೀಂದ್ರ ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಮುಂಡಗಾರು ಲತಾ ತಂಡದಲ್ಲಿ ಸಕ್ರಿಯವಾಗಿದ್ದರು.

ಕಳೆದ ವರ್ಷ, ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್‌ ಬಳಿಕ ಉಳಿದ ಹೋರಾಟಗಾರರ ಜೀವ ಉಳಿಸಬೇಕು ಎಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದರು. ದಲಿತರು, ಆದಿವಾಸಿಗಳು ಹಾಗೂ ಧ್ವನಿ ಇಲ್ಲದವರ ಪರವಾಗಿ ಹೋರಾಡುತ್ತಿರುವವರನ್ನು ಮುಖ್ಯವಾಹಿನಿಗೆ ಕರೆತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕಿದ್ದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನವರಿ ಎಂಟರಂದು ನಡೆದ ಕಾರ್ಯಕ್ರಮದಲ್ಲಿ ನಕ್ಸಲ್ ನಾಯಕರಾದ ಮುಂಡಗಾರು ಲತಾ (ಮುಂಡಗಾರು ಶೃಂಗೇರಿ), ವನಜಾಕ್ಷಿ (ಬಾಳೆಹೊಳೆ ಕಳಸ), ಸುಂದರಿ (ಕುತ್ಲೂರು ದಕ್ಷಿಣ ಕನ್ನಡ), ಮಾರಪ್ಪ ಅರೋಲಿ (ಕರ್ನಾಟಕ), ವಸಂತ ಟಿ (ತಮಿಳುನಾಡು), ಎನ್. ಜೀಶಾ (ಕೇರಳ) ಮುಖ್ಯವಾಹಿನಿಗೆ ಮರಳಿದ್ದರು. ಇದೀಗ ಕೊನೆಯ ಸದಸ್ಯ ರವೀಂದ್ರ ಕೂಡ ಮುಖ್ಯವಾಹಿನಿಗೆ ಬರಲಿದ್ದಾರೆ.

ಮುಖ್ಯವಾಹಿನಗೆ ಬರುವಂತೆ ಮನವಿ ಮಾಡಿದ್ದ ರವೀಂದ್ರ ಕುಟುಂಬ

ಆರು ಜನ ನಕ್ಸಲರು ಜೊತೆ ರವೀಂದ್ರ ಮಾತ್ರ ಮುಖ್ಯವಾಹಿನಿಗೆ ಬಾರದೇ ಇದ್ದಿದ್ದು ರವೀಂದ್ರ ಅವರ ಕುಟುಂಬಕ್ಕೆ ಬೇಸರ ಮೂಡಿಸಿತ್ತು. ಅವರ ಕುಟುಂಬ ಈಗಲೂ ಶೃಂಗೇರಿಯ ಕಾಡಂಚಿನ ಗ್ರಾಮದಲ್ಲಿ ಬದುಕು ಸಾಗಿಸುತ್ತಿದೆ. ಕಾಡಿನ ನಡುವೆ ಇರುವ ಕೋಟೆಹೊಂಡ ಗ್ರಾಮ ಸಂಪೂರ್ಣ ನೆಲ ಸಮವಾಗಿದ್ದು ಇಲ್ಲಿ ರವೀಂದ್ರನ ಮನೆ ಇದೆ. ರವೀಂದ್ರ ಮುಖ್ಯವಾಹಿನಿಗೆ ಬಂದರೆ ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಕುಟುಂಬದವರು ಮಾಧ್ಯಮಗಳಿಗೆ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ; ಕರ್ನಾಟಕ ಸರ್ಕಾರದ ಐತಿಹಾಸಿಕ ನಡೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ನಕ್ಸಲ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...