Homeಮುಖಪುಟಕ್ರಿಮಿನಲ್ ಪ್ರಕರಣ ಬಾಕಿ; ಬಿಜೆಪಿ ನಾಯಕನ ಪಾಸ್‌ಪೋರ್ಟ್ ನವೀಕರಣಕ್ಕೆ ಬಾಂಬೆ ಹೈಕೋರ್ಟ್ ನಿರಾಕರಣೆ

ಕ್ರಿಮಿನಲ್ ಪ್ರಕರಣ ಬಾಕಿ; ಬಿಜೆಪಿ ನಾಯಕನ ಪಾಸ್‌ಪೋರ್ಟ್ ನವೀಕರಣಕ್ಕೆ ಬಾಂಬೆ ಹೈಕೋರ್ಟ್ ನಿರಾಕರಣೆ

- Advertisement -
- Advertisement -

ಮಹಾರಾಷ್ಟ್ರದ ಬಿಜೆಪಿ ನಾಯಕ ಮತ್ತು ಮಾಜಿ ಕೃಷಿ ಸಚಿವ ದಾದಾ ಜಾಧವ್ರಾವ್ ಅವರ ಪುತ್ರ ಪಿಲಾಜಿ ಸುರ್ಸಿಂಗ್ ಜಾಧವ್ರಾವ್ ಅವರ ಪಾಸ್‌ಪೋರ್ಟ್ ನವೀಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಏಪ್ರಿಲ್‌ನಲ್ಲಿ ಪಾಸ್‌ಪೋರ್ಟ್ ಅವಧಿ ಮುಗಿದ ನಂತರ ಜಾಧವ್ರಾವ್ ಆಗಸ್ಟ್ 2024 ರಲ್ಲಿ ದೀರ್ಘಾವಧಿಯ ಪಾಸ್‌ಪೋರ್ಟ್ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯು (ಆರ್‌ಪಿಒ) ಚಾಲ್ಇಯಲ್ಲಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ಉಲ್ಲೇಖಿಸಿ ನ್ಯಾಯಾಲಯದ ಅನುಮತಿಯನ್ನು ಪಡೆಯುವಂತೆ ನಿರ್ದೇಶಿಸಿತು.

ನ್ಯಾಯಮೂರ್ತಿಗಳಾದ ಜಿಎಸ್ ಕುಲಕರ್ಣಿ ಮತ್ತು ಅದ್ವೈತ್ ಸೇಥ್ನಾ ಅವರ ಪೀಠವು ಜಾಧವ್ರಾವ್ ಅವರಿಗೆ ಅನುಮೋದನೆಗಾಗಿ ಕ್ರಿಮಿನಲ್ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ಮಾಡಿಕೊಟ್ಟಿತು. ಆದರೆ, ಕ್ರಿಮಿನಲ್ ವಿಚಾರಣೆಗಳನ್ನು ಎದುರಿಸುತ್ತಿರುವ ವ್ಯಕ್ತಿಗಳಿಗೆ ಪಾಸ್‌ಪೋರ್ಟ್ ನೀಡುವಿಕೆಯನ್ನು ನಿರ್ಬಂಧಿಸುವ ಪಾಸ್‌ಪೋರ್ಟ್ ಕಾಯ್ದೆಯ ಸೆಕ್ಷನ್ 6(2)(ಎಫ್‌) ಅಡಿಯಲ್ಲಿ ಅವರ ಪಾಸ್‌ಪೋರ್ಟ್ ನವೀಕರಣವನ್ನು ನಿರಾಕರಿಸುವ ಆರ್‌ಪಿಒ ನಿರ್ಧಾರವನ್ನು ಎತ್ತಿಹಿಡಿದಿದೆ.

ಜಾಧವ್ರಾವ್ 2005 ರಲ್ಲಿ ಪುಣೆಯ ಸವಾದ್ ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಿ ಅವರು ಮತ್ತು ಇತರ 74 ಜನರು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರಿಗೆ ಜಾಮೀನು ನೀಡಲಾಗಿದ್ದರೂ, ಪ್ರಕರಣ ಬಾಕಿ ಉಳಿದಿದೆ. ಇದರ ಹೊರತಾಗಿಯೂ, ಅವರಿಗೆ 2023 ರಲ್ಲಿ ಒಂದು ವರ್ಷದ ಪಾಸ್‌ಪೋರ್ಟ್ ನೀಡಲಾಯಿತು, ಆಗ ಅವರು ಯುನೈಟೆಡ್ ಕಿಂಗ್‌ಡಮ್‌ಗೆ ಪ್ರಯಾಣಿಸುತ್ತಿದ್ದರು.

ಜಾಧವ್ರಾವ್ ಅವರನ್ನು ಪ್ರತಿನಿಧಿಸುವ ವಕೀಲ ಅಭಿಜಿತ್ ಕುಲಕರ್ಣಿ, ತಮ್ಮ ಕಕ್ಷಿದಾರರಿಗೆ ಎಂದಿಗೂ ಶಿಕ್ಷೆಯಾಗಿಲ್ಲ ಮತ್ತು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಾರೆ ಎಂದು ವಾದಿಸಿದರು. ಪಾಸ್‌ಪೋರ್ಟ್ ನಿರಾಕರಿಸುವುದು ಆರ್ಟಿಕಲ್ 21 ರ ಅಡಿಯಲ್ಲಿ ಪ್ರಯಾಣಿಸುವ ಅವರ ಸಾಂವಿಧಾನಿಕ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅವರು ಗಮನಸೆಳೆದರು.

ಸರ್ಕಾರಿ ವಕೀಲೆ ಲೀನಾ ಪಾಟೀಲ್, ಬಾಕಿ ಇರುವ ಕ್ರಿಮಿನಲ್ ವಿಚಾರಣೆಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಪಾಸ್‌ಪೋರ್ಟ್ ನೀಡಲು ನ್ಯಾಯಾಲಯದ ಅನುಮೋದನೆ ಅಗತ್ಯವಿರುವ 1993 ರ ಸರ್ಕಾರಿ ಅಧಿಸೂಚನೆಯನ್ನು ಉಲ್ಲೇಖಿಸಿ, ಆರ್‌ಪಿಒ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಜಾಧವ್ರಾವ್ ಅವರು ಕ್ರಿಮಿನಲ್ ನ್ಯಾಯಾಲಯದಿಂದ ಅನುಮತಿ ಪಡೆಯಬೇಕು, ಅದು ಅವರ ಅರ್ಜಿಯನ್ನು 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿತು.

ಇದನ್ನೂ ಓದಿ; ವೈದ್ಯೆಯ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ : ನಾಲ್ವರು ಅಪರಾಧಿಗಳಿಗೆ 20 ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...