Homeಮುಖಪುಟಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ...

ಕೇಂದ್ರ ಬಜೆಟ್ 2025 | 12 ಲಕ್ಷ ರೂ.ಗಳವರೆಗೆ ಆದಾಯ ತೆರಿಗೆ ಮನ್ನಾ, ಗಿಗ್ ಕೆಲಸಗಾರರಿಗೆ ವಿಮೆ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26ರ ಹಣಕಾಸು ವರ್ಷದ ಬಜೆಟ್ ಅನ್ನು ಶನಿವಾರ ಮಂಡಿಸಿದ್ದಾರೆ. ಪ್ರಸ್ತುತ ಬಜೆಟ್ ಎನ್‌ಡಿಎ 3.0 ಸರ್ಕಾರದ ಮೊದಲ ಪೂರ್ಣ ಬಜೆಟ್ ಆಗಿದೆ. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗುವ ಗುರಿಯನ್ನು ಸಾಧಿಸಲು ಭಾರತವು ಕನಿಷ್ಠ ಒಂದು ದಶಕದವರೆಗೆ 8% ರಷ್ಟು ಸ್ಥಿರವಾದ ಆರ್ಥಿಕ ಬೆಳವಣಿಗೆಯನ್ನು ಸಾಧಿಸಬೇಕಾಗುತ್ತದೆ ಎಂದು 2024-25ರ ಆರ್ಥಿಕ ಸಮೀಕ್ಷೆಯು ಹೇಳಿತ್ತು. ಕೇಂದ್ರ ಬಜೆಟ್ 2025

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶನಿವಾರ ನಿರ್ಮಲಾ ಸೀತಾರಾಮನ್ ಅವರ ಬಜೆಟ್‌ನ ಪ್ರಮುಖ ಘೋಷಣೆಗಳು ಇಲ್ಲಿವೆ:

ಆದಾಯ ತೆರಿಗೆ

ಹೊಸ ಆಡಳಿತದ ಅಡಿಯಲ್ಲಿ 12 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ಆದಾಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಎಂದು ಕೇಂದ್ರ ಸರ್ಕಾರವು ಪ್ರಸ್ತಾಪಿಸಿದೆ. 75,000 ರೂ.ಗಳ ಪ್ರಮಾಣಿತ ಕಡಿತವನ್ನು ಪರಿಗಣಿಸಿ ಸಂಬಳ ಪಡೆಯುವ ತೆರಿಗೆದಾರರಿಗೆ ಮಿತಿ 12.75 ಲಕ್ಷ ರೂ. ಆಗಿರುತ್ತದೆ.

ಹೊಸ ಆಡಳಿತದ ಅಡಿಯಲ್ಲಿ ಆದಾಯ ತೆರಿಗೆ ಸ್ಲ್ಯಾಬ್‌ಗಳನ್ನು ಹಣಕಾಸು ಸಚಿವರು ಪರಿಷ್ಕರಿಸಿದ್ದು, ಇದು ಮನೆಯ ಬಳಕೆ, ಉಳಿತಾಯ ಮತ್ತು ಹೂಡಿಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಹೊಸ ನೇರ ತೆರಿಗೆ ಮಸೂದೆ

ಕೇಂದ್ರ ಸರ್ಕಾರವು ಮುಂದಿನ ವಾರ ಸಂಸತ್ತಿನಲ್ಲಿ ಹೊಸ ನೇರ ತೆರಿಗೆ ಮಸೂದೆಯನ್ನು ಪರಿಚಯಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವರು ಘೋಷಿಸಿದ್ದಾರೆ. ಹೊಸ ಮದೂದೆಯು “ಸ್ಪಷ್ಟ ಮತ್ತು ನೇರ ಪಠ್ಯವಾಗಿರುತ್ತದೆ” ಮತ್ತು ತೆರಿಗೆದಾರರು ಮತ್ತು ತೆರಿಗೆ ಆಡಳಿತಕ್ಕೆ “ಅರ್ಥಮಾಡಿಕೊಳ್ಳಲು ಸುಲಭ”ವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಹಣಕಾಸಿನ ಕೊರತೆ

2024-25ರ ಹಣಕಾಸು ವರ್ಷದಲ್ಲಿ ಭಾರತದ ಪರಿಷ್ಕೃತ ಹಣಕಾಸಿನ ಕೊರತೆಯು ಒಟ್ಟು ದೇಶೀಯ ಉತ್ಪನ್ನದ 4.8% ರಷ್ಟಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂದಿನ ಹಣಕಾಸು ವರ್ಷದ ಹಣಕಾಸಿನ ಕೊರತೆಯ ಗುರಿ 4.4% ಆಗಿರುತ್ತದೆ ಎಂದು ಹೇಳಿದ ಅವರು, “ಕೇಂದ್ರ ಸರ್ಕಾರದ ಸಾಲವು GDP ಯ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗುವಂತೆ ಪ್ರತಿ ವರ್ಷವೂ ಹಣಕಾಸಿನ ಕೊರತೆಯನ್ನು ಕಾಯ್ದುಕೊಳ್ಳುವುದು ನಮ್ಮ ಪ್ರಯತ್ನವಾಗಿದೆ” ಎಂದು ಅವರು ಹೇಳಿದ್ದಾರೆ.

ಸರ್ಕಾರದ ಖರ್ಚು ನಿರ್ದಿಷ್ಟ ಹಣಕಾಸು ವರ್ಷದಲ್ಲಿ ಅದು ಉತ್ಪಾದಿಸುವ ಆದಾಯಕ್ಕಿಂತ ಹೆಚ್ಚಾದಾಗ ಹಣಕಾಸಿನ ಕೊರತೆ ಉಂಟಾಗುತ್ತದೆ. 2025-26ರ ಹಣಕಾಸು ವರ್ಷದಲ್ಲಿ, ಸರ್ಕಾರದ ಅಂದಾಜು ರಶೀದಿಗಳು 35 ಲಕ್ಷ ಕೋಟಿ ರೂ. ಮತ್ತು ಪ್ರಸ್ತಾವಿತ ವೆಚ್ಚವು 50 ಲಕ್ಷ ಕೋಟಿ ರೂ. ಆಗಿದೆ.

ಸಾಲಗಳನ್ನು ಹೊರತುಪಡಿಸಿ ಪರಿಷ್ಕೃತ ರಶೀದಿಗಳ ಅಂದಾಜು 31.4 ಲಕ್ಷ ಕೋಟಿ ರೂ.ಗಳಾಗಿದ್ದು, ಅದರಲ್ಲಿ ನಿವ್ವಳ ತೆರಿಗೆ ರಶೀದಿಗಳು 25.5 ಲಕ್ಷ ಕೋಟಿ ರೂ.ಗಳಾಗಿವೆ. ಪರಿಷ್ಕೃತ ವೆಚ್ಚದ ಅಂದಾಜು 47.1 ಲಕ್ಷ ಕೋಟಿ ರೂ.ಗಳಾಗಿದ್ದು, ಇದರಲ್ಲಿ ಬಂಡವಾಳ ವೆಚ್ಚ ಸುಮಾರು 10.1 ಲಕ್ಷ ಕೋಟಿ ರೂ.ಗಳಾಗಿದೆ.

ಗಿಗ್ ಕೆಲಸಗಾರರಿಗೆ ವಿಮೆ

ಸರ್ಕಾರದ ಇ-ಶ್ರಮ್ ಪೋರ್ಟಲ್‌ನಲ್ಲಿ ಗುರುತಿನ ಚೀಟಿಗಳು ಮತ್ತು ನೋಂದಣಿಯನ್ನು ಒದಗಿಸಲು ಹಣಕಾಸು ಸಚಿವರು ಪ್ರಸ್ತಾಪಿಸಿದ್ದಾರೆ. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಗಿಗ್ ಕೆಲಸಗಾರರಿಗೆ ಆರೋಗ್ಯ ಸೌಲಭ್ಯಗಳನ್ನು ಸಹ ನೀಡಲಾಗುವುದು. ಈ ಕ್ರಮವು ಸುಮಾರು ಒಂದು ಕೋಟಿ ಗಿಗ್ ಕೆಲಸಗಾರರಿಗೆ ಸಹಾಯ ಮಾಡುವ ನಿರೀಕ್ಷೆಯಿದೆ ಎಂದು ಸೀತಾರಾಮನ್ ಹೇಳಿದ್ದಾರೆ.

ವಿಮಾ ಕ್ಷೇತ್ರದಲ್ಲಿ ಎಫ್‌ಡಿಐ ಮಿತಿಯನ್ನು ಹೆಚ್ಚಳ

ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆಯ ಮಿತಿಯನ್ನು ಪ್ರಸ್ತುತ 74% ರಿಂದ 100% ಕ್ಕೆ ಹೆಚ್ಚಿಸಲಾಗುವುದು ಎಂದು ಹಣಕಾಸು ಸಚಿವರು ಘೋಷಿಸಿದ್ದಾರೆ. ಹೊಸ ಮಿತಿಯು ಭಾರತದಲ್ಲಿ ಸಂಪೂರ್ಣ ಪ್ರೀಮಿಯಂ ಅನ್ನು ಹೂಡಿಕೆ ಮಾಡುವ ಕಂಪನಿಗಳಿಗೆ ಲಭ್ಯವಿರುತ್ತದೆ. “ವಿದೇಶಿ ಹೂಡಿಕೆಗೆ ಸಂಬಂಧಿಸಿದ ಪ್ರಸ್ತುತ ನಿಯಮಗಳು ಮತ್ತು ಷರತ್ತುಗಳನ್ನು ಪರಿಶೀಲಿಸಲಾಗುತ್ತದೆ ಮತ್ತು ಸರಳೀಕರಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಮೂಲಸೌಕರ್ಯಕ್ಕಾಗಿ ರಾಜ್ಯಗಳಿಗೆ ಆರ್ಥಿಕ ಬೆಂಬಲ

ಕೇಂದ್ರವು ಬಂಡವಾಳ ವೆಚ್ಚಕ್ಕಾಗಿ ರಾಜ್ಯಗಳಿಗೆ 50 ವರ್ಷಗಳ ಬಡ್ಡಿರಹಿತ ಸಾಲಗಳು ಮತ್ತು “ಸುಧಾರಣೆಗಳಿಗೆ ಪ್ರೋತ್ಸಾಹಕಗಳಿಗೆ” 1.5 ಲಕ್ಷ ಕೋಟಿ ರೂ.ಗಳ ವಿನಿಯೋಗವನ್ನು ಪ್ರಸ್ತಾಪಿಸಿದೆ.

ಇದನ್ನೂಓದಿ:  ಲೋಕಸಭಾ ಚುನಾವಣೆ 2024 | ಬಿಜೆಪಿ ಖರ್ಚು ₹1,737 ಕೋಟಿ; ಕಾಂಗ್ರೆಸ್‌ಗಿಂತ 3 ಪಟ್ಟು ಹೆಚ್ಚು!

ಲೋಕಸಭಾ ಚುನಾವಣೆ 2024 | ಬಿಜೆಪಿ ಖರ್ಚು ₹1,737 ಕೋಟಿ; ಕಾಂಗ್ರೆಸ್‌ಗಿಂತ 3 ಪಟ್ಟು ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...