Homeಕರ್ನಾಟಕನಕ್ಸಲ್ ಮುಕ್ತ ಕರ್ನಾಟಕ: ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ಹೋರಾಟಗಾರ ರವೀಂದ್ರ

ನಕ್ಸಲ್ ಮುಕ್ತ ಕರ್ನಾಟಕ: ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ಹೋರಾಟಗಾರ ರವೀಂದ್ರ

- Advertisement -
- Advertisement -

ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆರು ಜನ ಸಶಸ್ತ್ರ ಹೋರಾಟಗಾರರು ಮುಖ್ಯವಾಹಿನಿಗೆ ಮರಳುವ ಮೂಲಕ ಕರ್ನಾಟಕವು ನಕ್ಸಲ್ ಮುಕ್ತವಾಗುವತ್ತ ಹೆಜ್ಜೆ ಇಟ್ಟಿತ್ತು. ಇಂದು, ಆ ತಂಡದ ಕೊನೆಯ ನಾಯಕ ಕೋಟೆಹೊಂಡ ರವೀಂದ್ರ ಮುಖ್ಯವಾಹಿನಿಗೆ ಮರಳುವ ಮೂಲಕ ರಾಜ್ಯ ಅಧಿಕೃತವಾಗಿ ನಕ್ಸಲ್ ಮುಕ್ತವಾಗಿದೆ.

ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ನಾಯಕ ರವೀಂದ್ರ ಅವರು ಇಂದು ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದಾರೆ. ಕಳೆದ 18 ವರ್ಷಗಳಿಂದ ಭೂಗತರಾಗಿದ್ದ ಅವರು ಇಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮುಂದೆ ಶರಣಾಗಿದ್ದಾರೆ. ರವೀಂದ್ರಗೆ ಚಿಕ್ಕಮಗಳೂರು ಜಿಲ್ಲಾಡಳಿತ ₹7 ಲಕ್ಷ ಪ್ಯಾಕೇಜ್ ಘೋಷಣೆ ಮಾಡಿದೆ.

ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಕೋಟೆಹೊಂಡ ನಿವಾಸಿಯಾಗಿರುವ ರವೀಂದ್ರ, ಕಳೆದ‌ 18 ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ನಕ್ಸಲ್‌ರ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್ ಬಳಿಕ ರವೀಂದ್ರ ನಾಪತ್ತೆಯಾಗಿದ್ದರು. ಅವರ ಶರಣಾಗತಿಗೆ ನಕ್ಸಲ್ ಶರಣಾಗತಿ ಕಮಿಟಿ ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರು ಹರಸಾಹಸ ಪಟ್ಟಿದ್ದರು. ಕೊನೆಗೂ ರಾಜ್ಯ ಸರ್ಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಗೆ ಒಪ್ಪಿರುವ ರವಿಂದ್ರ ಅವರ ಮೇಲೆ ಒಟ್ಟು 26 ಪ್ರಕರಣಗಳು ದಾಖಲಾಗಿವೆ. ಇವರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ 14 ಪ್ರಕರಣಗಳು ಸೇರಿ ಕರ್ನಾಟಕದಲ್ಲಿ 17, ಕೇರಳದಲ್ಲಿ 9 ಪ್ರಕರಣಗಳು ದಾಖಲಾಗಿವೆ.

“17 ವರ್ಷಗಳ ಹಿಂದೆ ಮೂಲಭೂತ ಹಕ್ಕುಗಳಿಗಾಗಿ ನಕ್ಸಲ್ ಚಳವಳಿಗೆ ದುಮುಕಿದ್ದೆ. ವಾಸದ ಮನೆ ಸೇರಿದಂತೆ ಮೂಲಭೂತ ಸೌಕರ್ಯ ನೀಡಲು ಸರ್ಕಾರ ವಿಫಲವಾಗಿತ್ತು. ಈಗ ಸ್ವಲ್ಪ ಬದಲಾವಣೆ ಕಂಡು ಬರುತ್ತಿದೆ. ಇದರಿಂದ ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧಾರ ಮಾಡಿದ್ದೇನೆ. ಸರ್ಕಾರಕ್ಕೆ ನನ್ನ ಬೇಡಿಕೆಯ ಕುರಿತು ಪತ್ರ ನೀಡಿದ್ದೇನೆ” ಎಂದು ರವೀಂದ್ರ ಹೇಳಿದ್ದಾರೆ.

“ಆದಿವಾಸಿಗಳಿಗೆ ಹಾಗೂ ಕಾಡಂಚಿನ ಜನರಿಗೆ ಜಮೀನಿನ ಹಕ್ಕು ಪತ್ರ ನೀಡಬೇಕು ಹಾಗೂ ಅವರು ವಾಸಿಸುವ ಪ್ರದೇಶಗಳಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿ ಮಾಡಬೇಕು” ಎಂಬ ಎರಡು ಪ್ರಮುಖ ಬೇಡಿಕೆ ಇಟ್ಟಿದ್ದಾರೆ.

ಈ ಸಂದರ್ಭದಲ್ಲಿ ಶಾಂತಿಗಾಗಿ ನಾಗರೀಕರ ವೇದಿಕೆಯ ನೂರ್ ಶ್ರೀಧರ್, ಕೆಎಲ್ ಅಶೋಕ್, ನಗರಗೆರೆ ರಮೇಶ್, ವಿಎಸ್ ಶ್ರೀಧರ್, ನಕ್ಸಲ್ ಪುನರ್ವಸತಿ ಸಮಿತಿಯಿಂದ ಕೆಪಿ ಶ್ರೀಪಾಲ್ ಹಾಗೂ ಗೌಸ್ ಮೊಹಿಯುದ್ದೀನ್, ಹಾಗಲಗಂಚಿ ವೆಂಕಟೇಶ್ ಮತ್ತು ಇಸಾಬೆಲ್ಲಾ ಇದ್ದರು.

ಶರಣಾಗತಿ ಬಳಿಕ ರವೀಂದ್ರ ಅವರನ್ನು ಡಿವೈಎಸ್‌ಪಿ ವಶಕ್ಕೆ ಒಪ್ಪಿಸಲಾಗಿದೆ; ಶೃಂಗೇರಿ ಪೊಲೀಸ್ ಠಾಣೆಗೆ ಅವರನ್ನು ಒಪ್ಪಿಸುವ ಸಾಧ್ಯತೆ ಇದೆ.

ನಕ್ಸಲ್ ರವೀಂದ್ರ ಶರಣಾಗಿರುವುದು ಉತ್ತಮ ಬೆಳವಣಿಗೆ ಎಂದು ಕಾನೂನು‌ ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ. ಮನಸ್ಸು ಪರಿವರ್ತನೆ, ಬದಲಾವಣೆ ಮಾಡಿಕೊಂಡು ಮುಖ್ಯ ವೇದಿಕೆಗೆ ಬರುವುದು ಅಗತ್ಯ. ಸಂವಿಧಾನದ ಅಡಿ ಕೆಲಸ ಮಾಡಬೇಕಿರುವುದು ಅತ್ಯಂತ ಮಹತ್ವದ್ದು. ಆ ಹಿನ್ನೆಯಲ್ಲಿ ಅವರು ಮುಖ್ಯ ವಾಹಿನಿಗೆ ಬಂದಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಶರಣಾಗತಿ ಆಪರೇಷನ್ ಮುಕ್ತಾಯಗೊಂಡಿದೆ. ನಕ್ಸಲ್ ಶರಣಾಗತಿ ಸಂಬಂಧ ಕಾರ್ಯ ನಿರ್ವಹಿಸಿರುವ 22 ಪೊಲೀಸ್ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...