Homeಕರ್ನಾಟಕUnion Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ?...

Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ಕೇಂದ್ರ ಬಜೆಟ್‌ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೂಡಾ, ಕೇಂದ್ರ ಬಜೆಟ್‌ನ ಈ ದಿನ ಕರ್ನಾಟಕಕ್ಕೆ ಕರಾಳ ದಿನ ಎಂದು ಬಣ್ಣಿಸಿದ್ದಾರೆ. Union Budget 2025

ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಖಂಡ್ರೆ ಅವರು, “ಬಜೆಟ್‌ನಲ್ಲಿ ಎಂ.ಎಸ್.ಪಿ. (ಕನಿಷ್ಠ ಬೆಂಬಲ ಬೆಲೆ) ಕಾಯ್ದೆ ಕುರಿತು ಯಾವುದೇ ಘೋಷಣೆ ಮಾಡದಿರುವುದು ಅನ್ನದಾತರ ಮೇಲೆ ದೊಡ್ಡ ಅನ್ಯಾಯವಾಗಿದೆ. ರೈತರು ಬೆಳೆದ ಬೆಳೆಗೆ ಖಚಿತ ಬೆಲೆ ನಿರ್ಧಾರವಾಗಬೇಕೆಂಬ ಬಹುದಿನದ ಬೇಡಿಕೆಯನ್ನು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಪ್ರಕೃತಿ ವಿಕೋಪದ ಹೊಡೆತದಿಂದ ತತ್ತರಿಸಿರುವ ರೈತರ ಸಾಲ ಮನ್ನಾ ಕುರಿತು ಯಾವುದೇ ಘೋಷಣೆ ಇಲ್ಲ ಎಂಬುದು ವಿಷಾದನೀಯ” ಎಂದು ಹೇಳಿದ್ದಾರೆ. Union Budget 2025

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಅಸಡ್ಡೆ ತೋರಿಸಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕದ 7 ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ₹5000 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಆದರೆ, ಇದನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಈ ಪ್ರದೇಶದ ಅಭಿವೃದ್ಧಿಗೆ ಅನುದಾನ ಮೀಸಲಿಟ್ಟಿಲ್ಲ ಎಂಬುದು ದೌರ್ಭಾಗ್ಯಕರ” ಎಂದು ಅವರು ಹೇಳಿದ್ದಾರೆ.

“ಎನ್.ಡಿ.ಎ. ಆಡಳಿತದ 11 ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆ ಸಾಕಷ್ಟು ಉಲ್ಭಣಿಸಿದೆ. ಈ ಬಜೆಟ್‌ನಲ್ಲಿ ಯುವಕರ ಕೈಗೆ ಉದ್ಯೋಗ ನೀಡುವ ಯಾವುದೇ ಗಂಭೀರ ಯೋಜನೆ ರೂಪಿಸದಿರುವುದು ಖಂಡನಾರ್ಹ. ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ, ಬಿಜೆಪಿ ನೇತೃತ್ವದ ಸರ್ಕಾರ ಎನ್.ಡಿ.ಎ.ಯೇತರ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿರುವುದು ಅಕ್ಷಮ್ಯ. ರಾಜ್ಯಗಳ ನಡುವೆ ರಾಜಕೀಯ ವ್ಯತ್ಯಾಸಗಳನ್ನು ಮೆಟ್ಟಿಲು ಮಾಡಿಕೊಳ್ಳುವ ನೀತಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಬೇರೇ ಕಡೆ ಗಂಭೀರ ಯೋಜನೆಗಳನ್ನು ಘೋಷಿಸಿ, ಕರ್ನಾಟಕದ ಭಾಗ್ಯ ತಿರಸ್ಕರಿಸಿರುವುದು ಅಕ್ಷಮ್ಯ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದೆ? – ಸಚಿವ ಕೃಷ್ಣಬೈರೇಗೌಡ

ವಿಧಾನಸೌಧದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರತಿಕ್ರಿಯಿಸಿ, “ಬಜೆಟ್ ಕರ್ನಾಟಕಕ್ಕೆ ಕರಾಳ ದಿನವಾಗಿದೆ. ಕರ್ನಾಟಕದ ಯಾವ ಬೇಡಿಕೆಯೂ ಈಡೇರಿಲ್ಲ. ಕರ್ನಾಟಕಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ. ರಾಜ್ಯದ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ” ಎಂದು ಹೇಳಿದ್ದಾರೆ.

“ಬಿಹಾರ ರಾಜ್ಯಕ್ಕೆ ಐದಾರು ಯೋಜನೆ ಕೊಟ್ಟಿದ್ದಾರೆ. ಹಾಗಾದರೆ, ಕರ್ನಾಟಕದ ನಾವು ಕಡ್ಲೆ ಬೀಜ ತಿನ್ನೋಕೆ ಇರುವುದೆ? ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬರೀ ಚೊಂಬು ಸಿಕ್ಕಿದೆ. ಇದು ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ದ್ರೋಹ. 11,495 ಕೋಟಿ ಫೈನಾನ್ಸ್ ಕಮೀಷನ್ ಕೊಡಲು ಹೇಳಿತ್ತು. ಬರಲೇ ಬೇಕಾದ ಅನುದಾನ ದ ಬಗ್ಗೆ ಚಕಾರ ಎತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ಪೈಸಾ ಕೂಡ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ್ಕೆ ಏನೂ ನೀಡಿಲ್ಲ.” ಎಂದು ಹೇಳಿದ್ದಾರೆ.

“ಬೆಂಗಳೂರು ದೇಶಕ್ಕೆ ಉದ್ಯೋಗ ಕೊಡುತ್ತಿದೆ. ರಪ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ಕೊಡುತ್ತಿದೆ. ಆದರೂ ಬಜೆಟ್‌ನಲ್ಲಿ ಏನು ಕೊಟ್ಟಿಲ್ಲ. ಯುಪಿ, ಬಿಹಾರ ಮಾತ್ರ ಕೇಂದ್ರಕ್ಕೆ ಕಾಣುತ್ತಿದೆ, ಕರ್ನಾಟಕ ಕಾಣುತ್ತಿಲ್ಲ. ತೆರಿಗೆ ಕಟ್ಟಿದ ಕನ್ನಡಿಗರು ಕಾಣುತ್ತಿಲ್ಲ. ನಮ್ಮ ರಾಜ್ಯ ಕೇವಲ ದುಡಿಯವ ಆಳಿನ ರೀತಿ ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ಹಾಗೇ ಸರ್ಕಾರದ ಪರವಾಗಿ ಇದನ್ನ ನಾನು ಖಂಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...