Homeಕರ್ನಾಟಕUnion Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ - ಸಿಎಂ...

Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ

- Advertisement -
- Advertisement -

ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಒಂದನ್ನೂ ಈಡೇರಿಸಿಲ್ಲ. ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದ್ದು, ಇದು ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಶನಿವಾರ ಕೇಂದ್ರ ಸರ್ಕಾರ ಮಂಡಿಸಿದ 2025ರ ಬಜಟ್‌ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮ್ಯಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Union Budget 2025

ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹವನ್ನು ಕೇಂದ್ರ ಎಸಗಿದೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ ಎಂದು ಅವರು ಹರಿಹಾಯ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಬೇಕಿದೆ. ಅಲ್ಲದೆ, ಆಂಧ್ರ ಮತ್ತು ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ. ಮನುಸ್ಮೃತಿ ವಿರೋಧಿಸುವ ಮತ್ತು ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. Union Budget 2025

ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ. ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನಃ, ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಎಂದು ಸಿಎಂ ವಿಶ್ಲೇಷಣೆ ಮಾಡಿದ್ದಾರೆ.

“2024-25 ರ ಪತಿಷ್ಕೃತ ಬಜೆಟ್ 47,16000 ಕೋಟಿ ಆಗಿತ್ತು. 104000 ಕೋಟಿ ತೆರಿಗೆ ಕಡಿಮೆ ಆಯ್ತು. ತೆರಿಗೆ ಅವರ ನಿರೀಕ್ಷೆಯಂತೆ ಸಂಗ್ರಹ ಆಗಿಲ್ಲ ಅಂತಲೇ ಅರ್ಥ. ಈ ಸಾಲಿನ 50,65,345 ಕೋಟಿ ಬಜೆಟ್ ಗಾತ್ರದಲ್ಲಿ ಸಾಲದ ಪ್ರಮಾಣವೇ 15,68,936 ಕೋಟಿಯಷ್ಟಿದೆ. ಇದರಲ್ಲಿ ಬಡ್ಡಿಗೇ 12,70000 ಕೋಟಿ ಹೋಗುತ್ತಿದೆ. ದೇಶದ ಸಾಲ 202 ಲಕ್ಷ ಕೋಟಿಯಿಂದ 205 ಲಕ್ಷ ಕೋಟಿವರೆಗೂ ಆಗಿದೆ.” ಎಂದು ಅವರು ಹೇಳಿದ್ದಾರೆ.

“ಒಟ್ಟಾರೆ ಬಜೆಟ್ ಗಾತ್ರ 50,65,345 ಕೋಟಿ ರೂಪಾಯಿಗಳು. 2024-25ನೇ ಸಾಲಿಗೆ ಸಂಬಂಧಿಸಿದಂತೆ 48.20 ಲಕ್ಷ ಕೋಟಿ ರೂಪಾಯಿಗಳ ಬಜೆಟ್ಟನ್ನು ಮಂಡಿಸಿದ್ದರು. ಆದರೆ, ಪರಿಷ್ಕೃತ ಅಂದಾಜಿನ ಪ್ರಕಾರ 47.16 ಲಕ್ಷ ಕೋಟಿ ರೂಪಾಯಿಗಳಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಿದ್ದಾರೆ. ಅದರಂತೆ ಇದನ್ನು ನೋಡಿದರೆ ಕೇಂದ್ರ ಸರ್ಕಾರಕ್ಕೆ 1.04 ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಸಂಗ್ರಹ ಕಡಿಮೆಯಾಗುತ್ತದೆ ಎಂದು ಅಂದಾಜು ಮಾಡಿದ್ದಾರೆ. ಹಾಗಾಗಿ, ದೇಶದ ಆರ್ಥಿಕ ಸ್ಥಿತಿ ಸರಿಯಾಗಿಲ್ಲ ಎಂಬುದನ್ನು ಇದು ಸೂಚಿಸುತ್ತದೆ” ಎಂದು ಸಿಎಂ ಹೇಳಿದ್ದಾರೆ.

ಇದನ್ನೂಓದಿ:  ಅಯೋಧ್ಯೆ | ದಲಿತ ಯುವತಿಯ ನಗ್ನ ಶವ ಪತ್ತೆ; ಸಾಮೂಹಿಕ ಅತ್ಯಾಚಾರ, ಕೊಲೆ ಶಂಕೆ

ಅಯೋಧ್ಯೆ | ದಲಿತ ಯುವತಿಯ ನಗ್ನ ಶವ ಪತ್ತೆ; ಸಾಮೂಹಿಕ ಅತ್ಯಾಚಾರ, ಕೊಲೆ ಶಂಕೆ

ಇದನ್ನೂಓದಿ:  Union Budget 2025 | ಗುಂಡಿನ ಗಾಯಕ್ಕೆ ಬ್ಯಾಂಡ್ ಏಡ್ ಚಿಕಿತ್ಸೆ – ರಾಹುಲ್ ಗಾಂಧಿ

Union Budget 2025 | ಗುಂಡಿನ ಗಾಯಕ್ಕೆ ಬ್ಯಾಂಡ್ ಏಡ್ ಚಿಕಿತ್ಸೆ – ರಾಹುಲ್ ಗಾಂಧಿ

ಇದನ್ನೂಓದಿ:  ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು

ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು

ಇದನ್ನೂಓದಿ:   Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...