Homeಮುಖಪುಟಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

ಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

- Advertisement -
- Advertisement -

ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ರಾಜೀನಾಮೆ ನೀಡಿದ್ದ ದೆಹಲಿಯ ಎಂಟು ಶಾಸಕರು ಶನಿವಾರ ಬಿಜೆಪಿ ಸೇರಿದ್ದಾರೆ. ಫೆಬ್ರವರಿ 5 ರಂದು ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದೇ ವೇಳೆ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಸೇರಿದ್ದು ಆಡಳಿತರೂಢ ಎಎಪಿಗೆ ಭಾರಿ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಎಎಪಿಗೆ ರಾಜೀನಾಮೆ

ತ್ರಿಲೋಕಪುರಿಯ ನಿರ್ಗಮಿತ ಶಾಸಕ ರೋಹಿತ್ ಕುಮಾರ್ ಮೆಹ್ರೌಲಿಯಾ, ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ, ಕಸ್ತೂರ್ಬಾ ನಗರ ಶಾಸಕ ಮದನ್ ಲಾಲ್, ಮೆಹ್ರೌಲಿ ಶಾಸಕ ನರೇಶ್ ಯಾದವ್, ಬಿಜ್ವಾಸನ್ ಶಾಸಕ ಭೂಪಿಂದರ್ ಸಿಂಗ್ ಜೂನ್, ಪಾಲಂ ಶಾಸಕ ಭಾವನಾ ಗೌರ್, ಆದರ್ಶ ನಗರ ಶಾಸಕ ಪವನ್ ಶರ್ಮಾ ಮತ್ತು ಮದೀಪುರ ಶಾಸಕ ಗಿರೀಶ್ ಸೋನಿ ಶನಿವಾರ ಬಿಜೆಪಿ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿಯ ದೆಹಲಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡ ಅವರ ಸಮ್ಮುಖದಲ್ಲಿ ಎಂಟು ಶಾಸಕರು ಬಿಜೆಪಿಗೆ ಸೇರಿದ್ದಾರೆ. ಮೆಹ್ರೌಲಿ ಶಾಸಕ ನರೇಶ್ ಯಾದವ್ ಹೊರತುಪಡಿಸಿ, ರಾಜೀನಾಮೆ ನೀಡಿದ ಯಾವುದೇ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ಟಿಕೆಟ್ ನೀಡಿರಲಿಲ್ಲ. ಎಎಪಿಗೆ ರಾಜೀನಾಮೆ

ಶಾಸಕರು “ಆಪ್ಡಾ [ವಿಪತ್ತು]” ದಿಂದ ತಮ್ಮನ್ನು ಮುಕ್ತಗೊಳಿಸಿಕೊಂಡಿದ್ದರಿಂದ ಇದು ಐತಿಹಾಸಿಕ ದಿನವಾಗಿದೆ. ಚುನಾವಣೆಯ ನಂತರ ದೆಹಲಿಯೂ ಅದರಿಂದ ಮುಕ್ತವಾಗುತ್ತದೆ ಎಂದು ಅವರು ಆಶಿಸಿದ್ದಾರೆ ಎಂದು ಪಾಂಡ ಇದೇ ವೇಳೆ ಹೇಳಿದ್ದಾರೆ.

ಮೆಹ್ರೌಲಿ ಶಾಸಕ ನರೇಶ್ ಯಾದವ್ ಅವರು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರಿಗೆ ಶುಕ್ರವಾರ ಬರೆದ ರಾಜೀನಾಮೆ ಪತ್ರದಲ್ಲಿ,  “ಪಕ್ಷದಲ್ಲಿ ಭ್ರಷ್ಟಾಚಾರ ನುಸುಳಿದೆ” ಎಂದು ಆರೋಪಿಸಿದ್ದಾರೆ. “ದಲಿತ ಮತ್ತು ವಾಲ್ಮೀಕಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಪಡೆಯಲು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರದ ವಿರುದ್ಧದ ಚಳವಳಿಯ ಸಮಯದಲ್ಲಿ ತಾನು ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದೇನೆ” ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷವು ಈ ಸಮುದಾಯಗಳನ್ನು ಉನ್ನತೀಕರಿಸುವುದಾಗಿ ಭರವಸೆ ನೀಡಿತ್ತು ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಆದಾಗ್ಯೂ, ಗುತ್ತಿಗೆ ಆಧಾರಿತ ಕಾರ್ಮಿಕರನ್ನು ರದ್ದುಗೊಳಿಸುವುದು ಮತ್ತು ತಾತ್ಕಾಲಿಕ ಕಾರ್ಮಿಕರನ್ನು ಶಾಶ್ವತವಾಗಿ ಸೇರಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಹಲವಾರು ವಿಷಯಗಳನ್ನು ಪರಿಹರಿಸುವಲ್ಲಿ ಪಕ್ಷವೂ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ ತಮ್ಮ ರಾಜೀನಾಮೆ ಪತ್ರದಲ್ಲಿ, ಎಎಪಿ ತನ್ನ ಮೂಲ ಮೌಲ್ಯಗಳಿಂದ ದೂರ ಸರಿದಿದೆ ಎಂದು ಹೇಳಿಕೊಂಡಿದ್ದಾರೆ. “ಪಕ್ಷವು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಕೊಳಚೆ ಗುಂಡಿಯಾಗಿ ಮಾರ್ಪಟ್ಟಿದೆ. ಅದು ಸ್ಥಾಪಿಸಲಾದ ಭ್ರಷ್ಟಾಚಾರ-ಮುಕ್ತ ಮತ್ತು ಪಾರದರ್ಶಕ ಸರ್ಕಾರದ ತತ್ವಗಳಿಗೆ ದ್ರೋಹ ಬಗೆದಿದೆ” ಎಂದು ಅವರು ಟೀಕಿಸಿದ್ದಾರೆ.

ಶಾಸಕರಾದ ಲಾಲ್ ಮತ್ತು ಗೌರ್ ತಮ್ಮ ಪತ್ರಗಳಲ್ಲಿ ಕೇಜ್ರಿವಾಲ್ ಮತ್ತು ಪಕ್ಷದ ಮೇಲಿನ ನಂಬಿಕೆಯನ್ನು ಕಳೆದುಕೊಂಡಿರುವುದರಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಎಲ್ಲಾ ಶಾಸಕರು ತಮ್ಮ ರಾಜೀನಾಮೆ ಪತ್ರಗಳನ್ನು ವಿಧಾನಸಭಾ ಸ್ಪೀಕರ್‌ಗೆ ಸಲ್ಲಿಸಿದ್ದು, ಅವರು ಸದನದ ಸದಸ್ಯತ್ವವನ್ನು ತ್ಯಜಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ನಡೆದ ಕಳೆದ ರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 70 ವಿಧಾನಸಭಾ ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದೆ.

ಇದನ್ನೂಓದಿ:  Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ.

Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...