Homeಮುಖಪುಟಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

ಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

- Advertisement -
- Advertisement -

ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ರಾಜೀನಾಮೆ ನೀಡಿದ್ದ ದೆಹಲಿಯ ಎಂಟು ಶಾಸಕರು ಶನಿವಾರ ಬಿಜೆಪಿ ಸೇರಿದ್ದಾರೆ. ಫೆಬ್ರವರಿ 5 ರಂದು ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದೇ ವೇಳೆ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಸೇರಿದ್ದು ಆಡಳಿತರೂಢ ಎಎಪಿಗೆ ಭಾರಿ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಎಎಪಿಗೆ ರಾಜೀನಾಮೆ

ತ್ರಿಲೋಕಪುರಿಯ ನಿರ್ಗಮಿತ ಶಾಸಕ ರೋಹಿತ್ ಕುಮಾರ್ ಮೆಹ್ರೌಲಿಯಾ, ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ, ಕಸ್ತೂರ್ಬಾ ನಗರ ಶಾಸಕ ಮದನ್ ಲಾಲ್, ಮೆಹ್ರೌಲಿ ಶಾಸಕ ನರೇಶ್ ಯಾದವ್, ಬಿಜ್ವಾಸನ್ ಶಾಸಕ ಭೂಪಿಂದರ್ ಸಿಂಗ್ ಜೂನ್, ಪಾಲಂ ಶಾಸಕ ಭಾವನಾ ಗೌರ್, ಆದರ್ಶ ನಗರ ಶಾಸಕ ಪವನ್ ಶರ್ಮಾ ಮತ್ತು ಮದೀಪುರ ಶಾಸಕ ಗಿರೀಶ್ ಸೋನಿ ಶನಿವಾರ ಬಿಜೆಪಿ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿಯ ದೆಹಲಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡ ಅವರ ಸಮ್ಮುಖದಲ್ಲಿ ಎಂಟು ಶಾಸಕರು ಬಿಜೆಪಿಗೆ ಸೇರಿದ್ದಾರೆ. ಮೆಹ್ರೌಲಿ ಶಾಸಕ ನರೇಶ್ ಯಾದವ್ ಹೊರತುಪಡಿಸಿ, ರಾಜೀನಾಮೆ ನೀಡಿದ ಯಾವುದೇ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ಟಿಕೆಟ್ ನೀಡಿರಲಿಲ್ಲ. ಎಎಪಿಗೆ ರಾಜೀನಾಮೆ

ಶಾಸಕರು “ಆಪ್ಡಾ [ವಿಪತ್ತು]” ದಿಂದ ತಮ್ಮನ್ನು ಮುಕ್ತಗೊಳಿಸಿಕೊಂಡಿದ್ದರಿಂದ ಇದು ಐತಿಹಾಸಿಕ ದಿನವಾಗಿದೆ. ಚುನಾವಣೆಯ ನಂತರ ದೆಹಲಿಯೂ ಅದರಿಂದ ಮುಕ್ತವಾಗುತ್ತದೆ ಎಂದು ಅವರು ಆಶಿಸಿದ್ದಾರೆ ಎಂದು ಪಾಂಡ ಇದೇ ವೇಳೆ ಹೇಳಿದ್ದಾರೆ.

ಮೆಹ್ರೌಲಿ ಶಾಸಕ ನರೇಶ್ ಯಾದವ್ ಅವರು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರಿಗೆ ಶುಕ್ರವಾರ ಬರೆದ ರಾಜೀನಾಮೆ ಪತ್ರದಲ್ಲಿ,  “ಪಕ್ಷದಲ್ಲಿ ಭ್ರಷ್ಟಾಚಾರ ನುಸುಳಿದೆ” ಎಂದು ಆರೋಪಿಸಿದ್ದಾರೆ. “ದಲಿತ ಮತ್ತು ವಾಲ್ಮೀಕಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಪಡೆಯಲು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರದ ವಿರುದ್ಧದ ಚಳವಳಿಯ ಸಮಯದಲ್ಲಿ ತಾನು ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದೇನೆ” ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷವು ಈ ಸಮುದಾಯಗಳನ್ನು ಉನ್ನತೀಕರಿಸುವುದಾಗಿ ಭರವಸೆ ನೀಡಿತ್ತು ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಆದಾಗ್ಯೂ, ಗುತ್ತಿಗೆ ಆಧಾರಿತ ಕಾರ್ಮಿಕರನ್ನು ರದ್ದುಗೊಳಿಸುವುದು ಮತ್ತು ತಾತ್ಕಾಲಿಕ ಕಾರ್ಮಿಕರನ್ನು ಶಾಶ್ವತವಾಗಿ ಸೇರಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಹಲವಾರು ವಿಷಯಗಳನ್ನು ಪರಿಹರಿಸುವಲ್ಲಿ ಪಕ್ಷವೂ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ ತಮ್ಮ ರಾಜೀನಾಮೆ ಪತ್ರದಲ್ಲಿ, ಎಎಪಿ ತನ್ನ ಮೂಲ ಮೌಲ್ಯಗಳಿಂದ ದೂರ ಸರಿದಿದೆ ಎಂದು ಹೇಳಿಕೊಂಡಿದ್ದಾರೆ. “ಪಕ್ಷವು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಕೊಳಚೆ ಗುಂಡಿಯಾಗಿ ಮಾರ್ಪಟ್ಟಿದೆ. ಅದು ಸ್ಥಾಪಿಸಲಾದ ಭ್ರಷ್ಟಾಚಾರ-ಮುಕ್ತ ಮತ್ತು ಪಾರದರ್ಶಕ ಸರ್ಕಾರದ ತತ್ವಗಳಿಗೆ ದ್ರೋಹ ಬಗೆದಿದೆ” ಎಂದು ಅವರು ಟೀಕಿಸಿದ್ದಾರೆ.

ಶಾಸಕರಾದ ಲಾಲ್ ಮತ್ತು ಗೌರ್ ತಮ್ಮ ಪತ್ರಗಳಲ್ಲಿ ಕೇಜ್ರಿವಾಲ್ ಮತ್ತು ಪಕ್ಷದ ಮೇಲಿನ ನಂಬಿಕೆಯನ್ನು ಕಳೆದುಕೊಂಡಿರುವುದರಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಎಲ್ಲಾ ಶಾಸಕರು ತಮ್ಮ ರಾಜೀನಾಮೆ ಪತ್ರಗಳನ್ನು ವಿಧಾನಸಭಾ ಸ್ಪೀಕರ್‌ಗೆ ಸಲ್ಲಿಸಿದ್ದು, ಅವರು ಸದನದ ಸದಸ್ಯತ್ವವನ್ನು ತ್ಯಜಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ನಡೆದ ಕಳೆದ ರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 70 ವಿಧಾನಸಭಾ ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದೆ.

ಇದನ್ನೂಓದಿ:  Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ.

Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...