Homeಚಳವಳಿಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಇನ್ನೂ ಪಾಠ ಆರಂಭಿಸದ ಮುಸ್ಲಿಂ ಸಂಸ್ಕೃತ ಪ್ರೊಫೆಸರ್ ವಿರುದ್ಧ ಬನಾರಸ್ ಹಿಂದೂ ವಿ.ವಿ.ಯಲ್ಲಿ ಪ್ರತಿಭಟನೆ!!!! ಇದು ಎಬಿವಿಪಿ-ಆರೆಸ್ಸೆಸ್‌ನ ಕೋಮುವಾದಿ ಪ್ರಹಸನ!

- Advertisement -
- Advertisement -

ಕೃಪೆ: ದಿ ಕ್ವಿಂಟ್‌

ಐಶ್ವರ್ಯ ಎಸ್. ಅಯ್ಯರ್

ಅನುವಾದ: ನಿಖಿಲ್ ಕೋಲ್ಪೆ

ಇದನ್ನು ಪಕ್ಕಾ ರಾಜಕೀಯ ಪ್ರೇರಿತ ಕೋಮುವಾದ ಎನ್ನದೇ ಬೇರೆ ದಾರಿಯೇ ಇಲ್ಲ. ಇನ್ನೂ ಪಾಠವನ್ನೇ ಮಾಡದ, ಪರಿಚಯವೇ ಆಗದ ಹೊಸ ಸಂಸ್ಕೃತ ಪ್ರಾಧ್ಯಾಪಕರೊಬ್ಬರ ವಿರುದ್ಧ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರಣ ಅವರು ಮುಸ್ಲಿಂ ಎಂಬುದು ಮಾತ್ರ!

“ನೀವು ನನಗೊಂದು ಅವಕಾಶ ಕೊಡಿ. ಆಗ ನಿಮ್ಮ ಪ್ರತಿಭಟನೆಗೆ ಅಗತ್ಯವೇ ಇಲ್ಲವೆಂದು ನಿಮಗೆ ತಿಳಿಯಲೂ ಬಹುದು” ಹೀಗೆಂದು ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್‌ಯು)ದ ವಿದ್ಯಾರ್ಥಿಗಳಿಗೆ ಮನವಿ ಮಾಡಿದವರು ರಾಜಸ್ಥಾನದ ಜೈಪುರ ಜಿಲ್ಲೆಯವರಾದ 28ರ ಹರೆಯದ ಫಿರೋಜ್ ಖಾನ್.

ಅವರು ನವೆಂಬರ್ 7ರಂದು ಇಲ್ಲಿ ಬಂದಿಳಿದಿದ್ದರು. ಆದರೆ, ಹಿಂದಿನ ದಿನವೇ ಅವರ ಇಮೇಲ್ ಬಾಕ್ಸಿಗೆ ಅವರನ್ನು ಬಿಎಚ್‌ಯುವಿನ ಸಹಾಯಕ ಸಂಸ್ಕೃತ ಪ್ರಾಧ್ಯಾಪಕರಾಗಿ ನಿಯುಕ್ತಿಗೊಳಿಸಿದ ಪತ್ರ ತಲಪಿತ್ತು. ಆಗಲೇ ಬಿಜೆಪಿಯ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದರು. ಆದುದರಿಂದ, ದೇಶದ ಪ್ರತಿಷ್ಟಿತ ಮತ್ತು ಹಳೆಯ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುವ ಅವರ ಕಾತರವು ತಕ್ಷಣವೇ ಆತಂಕವಾಗಿ ಬದಲಾಯಿತು.

ಈ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವೇನು ಗೊತ್ತೆ? “ಹಿಂದೂವೊಬ್ಬ ಹೇಗೆ ಮದರಸದಲ್ಲಿ ಪಾಠ ಮಾಡಲು ಸಾಧ್ಯವಿಲ್ಲವೋ, ಹಾಗೆಯೇ ಮುಸ್ಲಿಮನೊಬ್ಬ ‘ಗುರುಕುಲ’ದಲ್ಲಿ ಪಾಠಮಾಡಲು ಸಾಧ್ಯವಿಲ್ಲ ಎಂಬುದು!(ವಿಶ್ವವಿದ್ಯಾಲಯವೊಂದು ‘ಗುರುಕುಲ’ವಾದದ್ದು ಯಾವಾಗ ಎಂದು ಅವರೇ ಬಲ್ಲರು!). ಈಗ, ಸಂಸ್ಕೃತ ವಿಭಾಗಕ್ಕೇ ಬೀಗ ಜಡಿಯಲಾಗಿದ್ದು, ಖಾನ್ ಅವರು ಒಂದೇ ಒಂದು ಪಾಠವನ್ನೂ ಮಾಡಿಲ್ಲ. ಆದರೂ, ಅವರು ಪರಿಸ್ಥಿತಿ ಸುಧಾರಿಸಿ, ತಿಳಿಯಾಗುವ ಬಗ್ಗೆ ವಿಶ್ವಾಸ ಕಳೆದುಕೊಂಡಿಲ್ಲ.

ಅವರು ಬಹಿರಂಗಪಡಿಸಲು ಇಚ್ಚಿಸದ ಸ್ಥಳವೊಂದರಲ್ಲಿ ‘ದಿ ಕ್ವಿಂಟ್’ ಜೊತೆ ಮುಕ್ತವಾಗಿ ಮಾತನಾಡಿ, “ಬಹುಶಃ ನಾನು ಬಿಎಚ್‌ಯು ವಿದ್ಯಾರ್ಥಿಗಳ ಯೋಚನಾ ರೀತಿಯನ್ನು ಬದಲಿಸಲೂ ಸಾಧ್ಯವಾಗಬಹುದು. ಇದನ್ನು ಹೇಗೆ ಮಾಡುವುದು ಎಂದು ನನಗೆ ಗೊತ್ತಿಲ್ಲ. ಅವರು ನನ್ನನ್ನು ಸರಿಯಾಗಿ ತಿಳಿದುಕೊಂಡರೆ, ನನ್ನನ್ನು ಮೆಚ್ಚಿಕೊಳ್ಳಬಹುದು” ಎಂದರು.

ಫಿರೋಜ್ ಜೈಪುರ ಜಿಲ್ಲೆಯ ಬಗ್ರು ಎಂಬ ಪಟ್ಟಣದಲ್ಲಿ ಜನಿಸಿದವರು. ನಾಲ್ವರು ಗಂಡುಮಕ್ಕಳಲ್ಲಿ ಮೂರನೆಯವರು. ಅವರು ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ್‌ನಿಂಧ ಸಂಸ್ಕೃತ ಸಾಹಿತ್ಯದಲ್ಲಿ ಬಿ.ಎಡ್. ಮತ್ತು ಸ್ನಾತಕೊತ್ತರ ಪದವಿ ಪಡೆದಿದ್ದಾರೆ. ಅಲ್ಲಿ ಅವರು ಅತಿಥಿ ಉಪನ್ಯಾಸಕರಾಗಿಯೂ ಕೆಲಸ ಮಾಡಿದ್ದಾರೆ. ಬಾಲ್ಯದಲ್ಲಿಯೇ ಅವರನ್ನು ಸಂಸ್ಕೃತ ಶಾಲೆಗೆ ಸೇರಿಸಲಾಗಿತ್ತು.

ತನ್ನ ಅಜ್ಜ ಮತ್ತು ತಂದೆಯ ಬಗ್ಗೆ ಮಾತನಾಡುತ್ತಾ, ಪಿರೋಜ್ ಹೇಳುತ್ತಾರೆ: “ನನ್ನ ಅಜ್ಜ ಹಿಂದೂ ಭಕ್ತಿಗೀತೆಗಳನ್ನು ಹಾಡುತ್ತಿದ್ದರು. ಅವರೀಗ ಇಲ್ಲ. ಆದರೆ, ಸುತ್ತಮುತ್ತಲಿನ ಹಳ್ಳಿಗಳಲ್ಲಿ ಯಾವುದೇ ಕಾರ್ಯಕ್ರಮ ಇದ್ದರೂ, ಅಜ್ಜನನ್ನು ಹಾಡಲು ಕರೆಯುತ್ತಿದ್ದರು. ತಂದೆಯವರು ಅವರಿಂದ ಕಲಿತರು. ನಮ್ಮ ಮನೆಯಿಂದ 2-3 ಕಿ.ಮೀ. ದೂದದಲ್ಲಿ ಒಂದು ಹಸುಗಳ ಹಟ್ಟಿಯಿದೆ. ಅದನ್ನು ರಾಮದೇವ್ ಗೋಶಾಲೆ ಎಂದು ಕರೆಯುತ್ತಾರೆ. ನನ್ನ ತಂದೆಯವರು ಪ್ರತೀ ದಿನ ಅಲ್ಲಿಗೆ ಹೋಗಿ ಹಿಂದೂ ಭಕ್ತಿಗೀತೆಗಳನ್ನು ಹಾಡುತ್ತಾರೆ”.

ಫಿರೋಜ್ ಅವರ ತಂದೆ ಸಂಸ್ಕೃತದಲ್ಲಿ ಪರಿಣಿತರಾಗಿದ್ದು, ಶಾಲೆ ಕಲಿಯುವ ಸಮಯದಲ್ಲಿ ಮಗನಿಗೆ ನೆರವಾಗುತ್ತಿದ್ದರಃ. ಫಿರೋಜ್, ಸಂಸ್ಕೃತದಲ್ಲಿ ಪಂಡಿತನಾಗಬೇಕು ಎಂದು ಬಯಸಿದ್ದರು. ಆದರೆ ಈಗ, ತನ್ನ ಮಗ ಒಮ್ಮೆ ಮನೆಗೆ ಹಿಂತಿರುಗಿ ಬರಲಿ ಎಂದು ಕಾತರರಾಗಿದ್ದಾರೆ.

“ನಮ್ಮ ತಂದೆಗೆ ಚಿಂತೆಯಿಂದ ನಿದ್ದೆ ಬರುತ್ತಿಲ್ಲ. ನೀನು ಮರಳಿ ಬಾ. ನಮಗೆ ಇರುವ ಸ್ವಲ್ಪದರಲ್ಲೇ ಬದುಕಬಹುದು. ಮನೆಯಿಂದ ದೂರ ಇರುವ ಅಗತ್ಯ ಇಲ್ಲ ಎಂದು ಅಣ್ಣ ಪಾಪಾಸು ಕರೆಯುತ್ತಾರೆ. ನಾನು ಏನನ್ನೂ ಹೇಳುವುದಿಲ್ಲ. ಆದರೆ, ನಾನಿಲ್ಲಿ ಉಳಿಯಬೇಕೆಂದು ನನ್ನ ನಂಬಿಕೆ” ಎನ್ನುತ್ತಾರೆ ಫಿರೋಜ್.

ಅವರ ನೇಮಕಾತಿ ವಿರುದ್ದ ನೇರವಾಗಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸುವ ಉದ್ದೇಶ ಇದೆಯೇ ಎಂದು ಕೇಳಿದಾಗ, ತಾನು ಮಾತುಕತೆಗೆ ಮುಕ್ತವಾಗಿದ್ದು, ಆಡಳಿತವು ಬಯಸಿದರೆ ಮಾತುಕತೆಗೆ ಸಿದ್ಧ ಎನ್ನುತ್ತಾರೆ. ಸದ್ಯಕ್ಕೆ ತಾನು ಯಾವಾಗ ಪಾಠ ಮಾಡಲು ಆರಂಭಿಸಬಹುದು ಎಂಬ ಬಗ್ಗೆ ತನಗೇ ಗೊತ್ತಿಲ್ಲ ಎನ್ನುತ್ತಾರೆ.

ಬಿಎಚ್‌ಯುವಿನ ಅವಕಾಶವನ್ನು ಬಿಟ್ಟುಕೊಡಲು ಸಿದ್ಧವಿಲ್ಲದಿರುವುದಕ್ಕೆ ಇನ್ನೊಂದು ಕಾರಣವೂ ಇದೆ. ಅದೆಂದರೆ, ಬಿಎಚ್‌ಯುವಿಗೆ ಅವರು ನೀಡಿದ ಮೊದಲ ಭೇಟಿಯ ನೆನಪುಗಳು. ಹಿಂದಕ್ಕೆ ಹೋಗುತ್ತಾ ಅವರು ಹೇಳುತ್ತಾರೆ: “2017ರಲ್ಲಿ ಬಿಎಚ್‌ಯು ತನ್ನ ಸಂಸ್ಕೃತ ಉತ್ಸವಕ್ಕೆ ನನ್ನನ್ನು ಆಹ್ವಾನಿಸಿತ್ತು. ನಾನು ಓಂಕಾರನಾಥ ಠಾಕೂರ್ ಅಪೇಕ್ಷಾ ಸದನದಲ್ಲಿ ಹಾಡಿದ್ದೆ. ಪ್ರತಿಯೊಂದೂ ಸ್ಮರಣೀಯವಾಗಿತ್ತು. ಅವರು ನನ್ನನ್ನು ತಮ್ಮ ಅತಿಥಿಗೃಹದಲ್ಲಿ ಇರಿಸಿಕೊಂಡು ನನ್ನ ಬೇಕು ಬೇಡಗಳನ್ನೆಲ್ಲಾ ಪೂರೈಸಿ ಸತ್ಕರಿಸಿದ್ದರು. ನನಗೆ ಬಹಳ ಗೌರವ ಕೊಟ್ಟಿದ್ದರು.”

ತಾನು ಸಂಸ್ಕೃತ ಕಲಿಯುವುದಕ್ಕಾಗಿ ವಿನಿಯೋಗಿಸಿದ ಇಷ್ಟು ವರ್ಷಗಳನ್ನು ನೆನಪಿಸಿಕೊಂಡ ಅವರು, ಇವತ್ತಿನ ತನಕ ಯಾರೂ ಸಂಸ್ಕೃತ ತನ್ನ ಸ್ವಂತ ಭಾಷೆಯಲ್ಲ ಎಂಬ ಭಾವನೆ ಬರುವಂತೆ ಮಾಡಿರಲಿಲ್ಲ ಎನ್ನುತ್ತಾರೆ. “ನನಗೆ ಯಾವುದೇ ತೊಂದರೆ ಉಂಟಾದಾಗ ಹಿಂದೂಗಳಾಗಿದ್ದ ಗುರುಗಳ ಬಳಿಗೆ ಹೋಗುತ್ತಿದ್ದೆ. ಅವರು ನನಗೆ ತಮ್ಮ ಶಕ್ತಿ ಮೀರಿ ನೆರವಾಗುತ್ತಿದ್ದರು. ನಾನು ಬೇರೆಯವನು ಎಂಬ ಭಾವನೆ ಬರುವಂತೆ ನನ್ನ ಗುರುಗಳು, ನನ್ನ ಮಿತ್ರರು, ನನ್ನ ಶಿಷ್ಯರಾದಿಯಾಗಿ ಯಾರೂ, ಎಂದೂ ಮಾಡಲಿಲ್ಲ. ಆದರೆ, ಈಗೇಕೆ ಹಾಗಾಗುತ್ತಿದೆ?” ಎಂದು ಅವರು ಕೇಳುತ್ತಾರೆ.

ಅವರ ಸಂಸ್ಕೃತ ಎಷ್ಟು ನಿರರ್ಗಳವಾಗಿದೆ ಎಂದು ಕೇಳಿದಾಗ, ತಾನು ನಿಯಮಿತವಾಗಿ ದೂರದರ್ಶನದಲ್ಲಿ ಸುದ್ದಿ ಓದುತ್ತಿದ್ದೆ ಎನ್ನುತ್ತಾರವರು. “ದೂರದರ್ಶನಲ್ಲಿ ಸಂಸ್ಕೃತ ವಾರ್ತಾವಳಿ ಎಂಬ ಕಾರ್ಯಕ್ರಮವಿದೆ. ಅದರಲ್ಲಿ ಬಾಲಿವುಡ್ ಹಾಡುಗಳನ್ನು ಸಂಸ್ಕೃತಕ್ಕೆ ಅನುವಾದಿಸಬೇಕಾಗುತ್ತದೆ. ಅವರು ಹಾಡುಗಳನ್ನು ಅನುವಾದಕ್ಕಾಗಿ ನನಗೆ ಕಳುಹಿಸುತ್ತಿದ್ದರು. ನಾನು ಹಾಡಿದ ಹಾಡುಗಳನ್ನು ಅವರು ಪ್ರಸಾರ ಮಾಡುತ್ತಿದ್ದರು” ಎಂದು ಹೇಳುತ್ತಾರೆ. ಅದಲ್ಲದೇ, 2019ರ ಆಗಸ್ಟ್‌ನಲ್ಲಿ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಂದ ಸಂಸ್ಕೃತ ಯುವ ಪ್ರತಿಭಾ ಪುರಸ್ಕಾರ್ ಎಂಬ ಪ್ರಶಸ್ತಿಯನ್ನೂ ಸ್ವೀಕರಿಸಿದ್ದರು.

ಬಿಎಚ್‌ಯು ಆಡಳಿತವು ಮತ್ತೆ ಮತ್ತೆ ಸ್ಪಷ್ಟನೆ ನೀಡಿದ್ದು, ತಾನು ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದಿಲ್ಲ ಎಂದಿದೆಯಲ್ಲದೆ, ಈ ತನಕ ಫಿರೋಜ್ ಅವರ ಬೆಂಬಲಕ್ಕೆ ನಿಂತಿದೆ. ಅದಲ್ಲದೇ ಹಿಂದೂ, ಮುಸ್ಲಿಮರೆನ್ನದೇ ಬಹುತೇಕ ವಿದ್ಯಾರ್ಥಿಗಳೂ ಅವರ ಬೆಂಬಲಕ್ಕೆ ನಿಂತಿದ್ದಾರೆ. ಬೇರೆ ಧರ್ಮದವರಿಂದ ಪಾಠ ಕಲಿಯುವುದಿಲ್ಲ ಎಂಬ ಸಂಕುಚಿತ ನಿಲುವಿಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಅವರು, ಪ್ರತಿಭಟನೆ ನಡೆಸುತ್ತಿರುವವರು ಕೇವಲ ಎಬಿವಿಪಿ ಮತ್ತು ಆರೆಸ್ಸೆಸ್‌ಗೆ ಸೇರಿದವರು ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...