Homeಮುಖಪುಟಮಹಾರಾಷ್ಟ್ರ ಡಿಸಿಎಂ ಶಿಂಧೆ ಮೇಲೆಯೆ ಕೇಂದ್ರ ಸರ್ಕಾರದಿಂದ ಕಣ್ಗಾವಲು! - ಆರೋಪ

ಮಹಾರಾಷ್ಟ್ರ ಡಿಸಿಎಂ ಶಿಂಧೆ ಮೇಲೆಯೆ ಕೇಂದ್ರ ಸರ್ಕಾರದಿಂದ ಕಣ್ಗಾವಲು! – ಆರೋಪ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಫೋನ್ ಕರೆಗಳ ಮೇಲೆ ನಿಗಾ ಇಡಲಾಗುತ್ತಿದೆ ಮತ್ತು ಕೇಂದ್ರೀಯ ಸಂಸ್ಥೆಗಳು ಅವರ ಚಲನವಲನಗಳ ಮೇಲೆ ನಿಗಾ ಇಡುತ್ತಿವೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ. ಸಿಎಂ ಫಡ್ನವೀಸ್ ಮತ್ತು ಶಿಂಧೆ ನಡುವಿನ ಹದಗೆಟ್ಟ ಸಂಬಂಧಗಳು ಮಹಾರಾಷ್ಟ್ರ ಸರ್ಕಾರಕ್ಕೆ ಬಹುಮತವಿದ್ದರೂ ಅದನ್ನು ಬಿಕ್ಕಟ್ಟಿಗೆ ಸಿಲುಕಿಸಿವೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ ಡಿಸಿಎಂ

“ಶಿಂಧೆ ಮತ್ತು ಅವರ ಸಹಚರರ ಮೇಲೆ ಕಣ್ಗಾವಲು ನಡೆಸಲಾಗುತ್ತಿದೆ ಎಂದು ಶಾಸಕರೊಬ್ಬರು ನನಗೆ ತಿಳಿಸಿದ್ದಾರೆ” ಶಿವಸೇನಾ (ಯುಬಿಟಿ) ಮುಖವಾಣಿ ಸಾಮ್ನಾದಲ್ಲಿ ತಮ್ಮ ವಾರದ ಅಂಕಣ ರೋಖ್ಥೋಕ್‌ನಲ್ಲಿ ಸಂಜಯತ್ ರಾವತ್ ಬರೆದಿದ್ದಾರೆ.

ನವೆಂಬರ್ 2024 ರ ವಿಧಾನಸಭಾ ಚುನಾವಣೆಯ ನಂತರ ತಮ್ಮನ್ನು ಮತ್ತೆ ಮುಖ್ಯಮಂತ್ರಿಯಾಗಿ ನೇಮಿಸಲಾಗಿಲ್ಲ ಎಂಬ ವಿಚಾರವನ್ನು ಶಿಂಧೆಗೆ ಒಪ್ಪಿಕೊಳ್ಳಲು ಆಗುತ್ತಿಲ್ಲ. ಅವರು ಆ ಸ್ಥಾನವನ್ನು ಮರಳಿ ಪಡೆಯಲು ಹತಾಶವಾಗಿ ಪ್ರಯತ್ನಿಸುತ್ತಿದ್ದಾರೆ. ಈ ವಾಸ್ತವವನ್ನು ಸಿಎಂ ಫಡ್ನವೀಸ್ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾವಣೆಯಲ್ಲಿ, ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆದ್ದುಕೊಂಡಿತ್ತು.

“ನಮ್ಮ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಬಿಜೆಪಿ ಬೆಂಬಲಿತ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಡುವೆ ಈಗ ನಿಜವಾದ ಸಂವಹನವಿಲ್ಲ. ಇದು ಈಗ ಸಾರ್ವಜನಿಕರಿಗೆ ಮನರಂಜನೆಯ ವಿಷಯವಾಗಿ ಮಾರ್ಪಟ್ಟಿದೆ” ಎಂದು ರಾವತ್ ಹೇಳಿದ್ದಾರೆ. ಮಹಾರಾಷ್ಟ್ರ ಡಿಸಿಎಂ

ಶಿಂಧೆ ಅವರ ಭದ್ರಕೋಟೆಯಾದ ಥಾಣೆಯ ಮೇಲಿನ ರಾಜಕೀಯ ನಿಯಂತ್ರಣವನ್ನು ಬಿಜೆಪಿ ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ನೆರೆಯ ಪಾಲ್ಘರ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಬಿಜೆಪಿ ಸಚಿವ ಗಣೇಶ್ ನಾಯಕ್ ಅವರನ್ನು ನೇಮಕ ಮಾಡಿರುವುದು ಈ ತಂತ್ರದ ಭಾಗವಾಗಿದೆ ರಾವತ್ ಅವರು ಅಭಿಪ್ರಾಯಪಟ್ಟಿದ್ದಾರೆ.

“ಶಿಂಧೆ ಕೇವಲ ಪುರಸಭೆಯ ಕೌನ್ಸಿಲರ್ ಆಗಿದ್ದಾಗ ನಾಯಕ್ ಆಗಲೇ ಮೊದಲ ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರು ಶಿಂಧೆಯವರ ಆದೇಶಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ರಾವತ್ ಲೇಖನದಲ್ಲಿ ಬರೆದಿದ್ದಾರೆ.

ಇತ್ತೀಚೆಗಷ್ಟೆ ಥಾಣೆಯಲ್ಲಿ ಬಿಜೆಪಿ ಪ್ರವರ್ಧಮಾನಕ್ಕೆ ಬರಬೇಕೆಂದು ಬಯಸುವುದಾಗಿ ನಾಯಕ್ ಹೇಳಿದ್ದು, ಸಂಭಾವ್ಯ ಅಧಿಕಾರ ಉಳಿಸುವ ಹೋರಾಟದ ಬಗ್ಗೆ ಸುಳಿವು ನೀಡಿದೆ. ಅವರು ನಗರದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಗಳನ್ನು ನಡೆಸುವ ಯೋಜನೆಗಳನ್ನು ಸಹ ಘೋಷಿಸಿದ್ದರು. ಅವರ ಈ ನಡೆಯು ಬಿಜೆಪಿಯು ಶಿಂಧೆಯ ಪ್ರಾಬಲ್ಯಕ್ಕೆ ಹಿನ್ನಡೆಯುಂಟು ಮಾಡಲು ತಯಾರಿ ನಡೆಸುತ್ತಿದೆ ಎಂಬ ಊಹಾಪೋಹಗಳು ಎದ್ದಿತ್ತು.

ಮಹಾರಾಷ್ಟ್ರ ಸರ್ಕಾರದಲ್ಲಿ ಶಿಂಧೆ ಅವರ ಪಾತ್ರ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ರಾವತ್ ಪ್ರತಿಪಾದಿಸಿದ್ದು, ಅವರು ಪ್ರಮುಖ ಕ್ಯಾಬಿನೆಟ್ ಸಭೆಗಳಿಗೆ ಆಗಾಗ್ಗೆ ಗೈರುಹಾಜರಾಗುತ್ತಾರೆ ಮತ್ತು ಹಾಜರಿದ್ದರೂ, ಆಗಾಗ್ಗೆ ತಡವಾಗಿ ಬರುತ್ತಾರೆ. “ಜನವರಿ 30 ರಂದು, ಅವರು ವಿಶ್ವ ವ್ಯಾಪಾರ ಕೇಂದ್ರದಲ್ಲಿ ನಡೆದ ಜಿಲ್ಲಾ ಯೋಜನಾ ಸಮಿತಿ ಸಭೆಗೆ ಎರಡೂವರೆ ಗಂಟೆ ತಡವಾಗಿ ಬಂದರು” ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2024 ರ ವಿಧಾನಸಭಾ ಚುನಾವಣೆಯನ್ನು ಶಿಂಧೆ ನೇತೃತ್ವದಲ್ಲಿಯೇ ಎದುರಿಸಲಾಗುವುದು ಮತ್ತು ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಭರವಸೆ ನೀಡಿದ್ದರು ಎಂದು ಶಿಂಧೆ ಅವರ ಬಣದ ಹಿರಿಯ ಶಾಸಕರನ್ನು ಉಲ್ಲೇಖಿಸಿ ರಾವತ್ ಹೇಳಿದ್ದಾರೆ.

ಈ ಭರವಸೆಯಿಂದ ಉತ್ತೇಜಿತರಾದ ಶಿಂಧೆ, ಪ್ರಚಾರದ ಸಮಯದಲ್ಲಿ ಅಪಾರ ಪ್ರಮಾಣದ ಹಣವನ್ನು ಖರ್ಚು ಮಾಡಿದ್ದಾರೆ ಎಂದು ನಂಬಲಾಗಿದೆ. ಆದಾಗ್ಯೂ, ಚುನಾವಣೆ ಮುಗಿದ ನಂತರ ಅಮಿತ್ ಶಾ ತಮ್ಮ ಮಾತನ್ನು ಉಳಿಸಿಕೊಳ್ಳಲಿಲ್ಲ. ಇದರಿಂದಾಗಿ ಶಿಂಧೆಗೆ ತಾನು ಮೋಸ ಹೋಗಿದ್ದು ಮತ್ತು ರಾಜಕೀಯವಾಗಿ ಮೂಲೆಗುಂಪಾಗಿದ್ದೇನೆ ಎಂದು ಭಾವಿಸಿದ್ದಾರೆ.

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಹೆಚ್‌ಡಿ ಕುಮಾರಸ್ವಾಮಿ ವಿರುದ್ಧದ ಭೂ ಕಬಳಿಕೆ ಆರೋಪ : ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...