Homeಎಕಾನಮಿಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

ಮುಂದಿನ ಮಾರ್ಚ್‌ ವೇಳೆಗೆ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಎರಡು ಕಂಪನಿಗಳಾದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಗಳನ್ನು ಮುಂದಿನ ಮಾರ್ಚ್ ವೇಳೆಗೆ ಸರ್ಕಾರವು ಮಾರಾಟವಾಗುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಟೈಮ್ಸ್ ಆಫ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ತೀವ್ರ ಹಣಕಾಸು ಕುಸಿತದಿಂದಾಗಿರುವ ಸುಮಾರು ರೂ. 58,000 ಕೋಟಿ ಸಾಲದ ಹೊರೆಯಿಂದಾಗಿ ಈ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದಿದ್ದಾರೆ.

“ನಾವು ಈ ವರ್ಷ ಅವುಗಳನ್ನು ಪೂರ್ಣಗೊಳಿಸಬಹುದೆಂಬ ನಿರೀಕ್ಷೆ ಇಟ್ಟುಕೊಂಡಿದ್ದೇವು. ಆದರೆ ವಾಸ್ತವ ಸ್ಥಿತಿಗತಿಗಳು ಬೇರೆ ಇವೆ” ಎಂದು ಅವರು ಹೇಳಿದ್ದಾರೆ.

ಏರ್ ಇಂಡಿಯಾ ಅಧ್ಯಕ್ಷ ಅಶ್ವನಿ ಲೋಹಾನಿ, ಏರ್ ಇಂಡಿಯಾ ಉದ್ಯೋಗಿಗಳಿಗೆ ಬಹಿರಂಗ ಪತ್ರದಲ್ಲಿ, ಈ ವಿತರಣೆಯು ವಿಮಾನಯಾನ ಸಂಸ್ಥೆಯ ಸುಸ್ಥಿರತೆಗೆ ಅನುವು ಮಾಡಿಕೊಡುತ್ತದೆ ಎಂದು ಈ ಮೊದಲೇ ತಿಳಿಸಿದ್ದಾರೆ.

ಏರ್ ಇಂಡಿಯಾಕ್ಕೆ ಸಂಬಂಧಿಸಿದಂತೆ, ಹೂಡಿಕೆದಾರರಲ್ಲಿ “ಹೆಚ್ಚಿನ ಆಸಕ್ತಿ” ಇದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ಕಳೆದ ವರ್ಷ, ಏರ್ ಇಂಡಿಯಾದ ಏರ್‌ಲೈನ್ಸ್‌ನಲ್ಲಿ ಶೇ 76 ರಷ್ಟು ಪಾಲನ್ನು ಮತ್ತು ನಿರ್ವಹಣಾ ನಿಯಂತ್ರಣವನ್ನು ಮಾರಲು ಹೊರಟಿತ್ತು. ಆದರೆ ಒಬ್ಬರೂ ಸಹ ಬಿಡ್‌ ಮಾಡಲಿಲ್ಲ. ಏಕೆಂದರೆ ಉಳಿದ 24 ಶೇಕಡಾ ಪಾಲನ್ನು ಹೊಂದಿರುವ ಸರ್ಕಾರವು ಹೂಡಿಕೆದಾರರ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಹುದೆಂಬ ಭಯದಿಂದಾಗಿ ಕಳೆದ ವರ್ಷ ಏರ್ ಇಂಡಿಯಾ ಷೇರು ಮಾರಾಟಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸೆಂಟರ್ ಫಾರ್ ಏಷ್ಯಾ ಪೆಸಿಫಿಕ್ ಏವಿಯೇಷನ್ ​​ವರದಿಯಲ್ಲಿ ತಿಳಿಸಿದೆ. ಈಗ ಆ ಅಡಚಣೆಯನ್ನು ತೆಗೆದುಹಾಕಲಾಗಿದ್ದು ಸರ್ಕಾರವು ಪ್ರಸ್ತುತ ಏರ್ ಇಂಡಿಯಾದ ಶೇ 100 ರಷ್ಟು ಷೇರುಗಳನ್ನು ಮಾರಲು ಹೊರಟಿದೆ.

ಏರ್ ಇಂಡಿಯಾ ಕಳೆದ ಹಣಕಾಸು ವರ್ಷದಲ್ಲಿ ಸುಮಾರು 4,600 ಕೋಟಿ ರೂನಷ್ಟು ನಷ್ಟ ಹೊಂದಿತ್ತು. ಮುಖ್ಯವಾಗಿ ಹೆಚ್ಚಿದ ತೈಲ ಬೆಲೆಗಳು ಮತ್ತು ವಿದೇಶೀ ವಿನಿಮಯ ನಷ್ಟ ಇದಕ್ಕೆ ಕಾರಣವಾಗಿತ್ತು. ಆದರೆ 2019-20ರಲ್ಲಿ ಕಾರ್ಯಾಚರಣೆಯಲ್ಲಿ ಏರ್‌ ಇಂಡಿಯಾಗೆ ಲಾಭದಾಯಕವಾಗಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ವಿಷಯದಲ್ಲಿ, ಅಕ್ಟೋಬರ್‌ನಲ್ಲಿ ಕಂಪನಿಯ ಒಟ್ಟು 53.29 ಶೇಕಡಾ ಪಾಲನ್ನು ಮಾರಾಟ ಮಾಡಲು ಕಾರ್ಯದರ್ಶಿಗಳ ಗುಂಪು ಒಪ್ಪಿಕೊಂಡಿತ್ತು.

ಭಾರತ್ ಪೆಟ್ರೋಲಿಯಂ ಮಾರುಕಟ್ಟೆ ಮೌಲ್ಯವು ಸುಮಾರು ರೂ. 1.02 ಲಕ್ಷ ಕೋಟಿ ರೂಗಳಷ್ಟಿದೆ. ಅದರ 53 ಪ್ರತಿಶತದಷ್ಟು ಪಾಲನ್ನು ಮಾರಾಟ ಮಾಡುವುದೆಂದರೆ, ಎಲ್ಲಾ ಪ್ರವೇಶ ಪ್ರೀಮಿಯಂ ಸೇರಿದಂತೆ 65,000 ಕೋಟಿ ರೂ ಸರ್ಕಾರದ ಬೊಕ್ಕಸಕ್ಕೆ ಸೇರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...