Homeಮುಖಪುಟಛತ್ತೀಸ್‌ಗಢ - ಕೈದಿಗಳ 'ಸುಧಾರಣೆ'ಗಾಗಿ ಜೈಲುಗಳಲ್ಲಿ ಆರೆಸ್ಸೆಸ್‌ ಮುಖವಾಣಿ!

ಛತ್ತೀಸ್‌ಗಢ – ಕೈದಿಗಳ ‘ಸುಧಾರಣೆ’ಗಾಗಿ ಜೈಲುಗಳಲ್ಲಿ ಆರೆಸ್ಸೆಸ್‌ ಮುಖವಾಣಿ!

- Advertisement -
- Advertisement -

ಬಿಜೆಪಿ ಆಡಳಿತದ ಛತ್ತೀಸ್‌ಗಢದ ಜೈಲು ಇಲಾಖೆಯು ಆರೆಸ್ಸೆಸ್‌ ಮುಖವಾಣಿ ಪಾಂಚಜನ್ಯ (ಹಿಂದಿ ಭಾಷೆ) ಮತ್ತು ಆರ್ಗನೈಸರ್ (ಇಂಗ್ಲಿಷ್‌ ಭಾಷೆ) ಪತ್ರಿಕೆಗಳನ್ನು ಕೈದಿಗಳಿಗಾಗಿ ಗ್ರಂಥಾಲಯಗಳಿಗೆ ಸೇರಿಸಲು ನಿರ್ಧರಿಸಿದೆ. ರಾಜ್ಯದ ಜೈಲು ಗ್ರಂಥಾಲಯಗಳು ವೈವಿಧ್ಯಮಯ ವಿಷಯಗಳ ಕುರಿತು ಪುಸ್ತಕಗಳು ಮತ್ತು ಪ್ರಕಟಣೆಗಳ ಸಂಗ್ರಹಗಳನ್ನು ಹೊಂದಿವೆ ಎಂದು ಹೇಳಲಾಗಿದೆ. ಛತ್ತೀಸ್‌ಗಢ – ಕೈದಿಗಳ

ರಾಜ್ಯ ಮಹಾನಿರ್ದೇಶಕ (ಜೈಲು) ಹಿಮಾಂಶು ಗುಪ್ತಾ ಅವರು ಇತ್ತೀಚೆಗೆ ನಡೆಸಿದ ತಪಾಸಣೆಯ ಸಮಯದಲ್ಲಿ ಜೈಲುಗಳಲ್ಲಿರುವ ಗ್ರಂಥಾಲಯಗಳಲ್ಲಿ ಪಾಂಚಜನ್ಯ ಮತ್ತು ಆರ್ಗನೈಸರ್ ಇಲ್ಲ ಎಂದು ಕಂಡುಕೊಂಡಿದ್ದರು. ಹಾಗಾಗಿ ಎಲ್ಲಾ 33 ರಾಜ್ಯ ಕಾರಾಗೃಹಗಳಲ್ಲಿ ಈ ನಿಯತಕಾಲಿಕೆಗಳು ಲಭ್ಯವಾಗುವಂತೆ ಮಾಡಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಐದು ಕೇಂದ್ರ, 20 ಜಿಲ್ಲಾ ಜೈಲುಗಳು ಮತ್ತು ಎಂಟು ಉಪ ಜೈಲುಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಖೈದಿಗಳನ್ನು ಸುಧಾರಿಸುವ, ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ, ಅವರ ಕಲಿಕೆಯನ್ನು ಸುಧಾರಿಸುವ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುವಲ್ಲಿ ಆರೆಸ್ಸೆಸ್‌ ಮುಖವಾಣಿ ಸಹಾಯ ಮಾಡಲಿದೆ ಎಂದು ಡಿಜಿ ಹೇಳಿದ್ದಾರೆ. ಬಿಡುಗಡೆಯಾದ ನಂತರ ಮುಖ್ಯವಾಹಿನಿಯ ಸಮಾಜದಲ್ಲಿ ತಮ್ಮನ್ನು ತಾವು ಪುನರ್ವಸತಿ ಮಾಡಿಕೊಳ್ಳಲು ಇದು ಕೈದಿಗಳನ್ನು ಪ್ರೋತ್ಸಾಹಿಸುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕ್ರಮವು ಕೈದಿಗಳಲ್ಲಿ ‘ಸನಾತನ ಭಾರತೀಯ ಸಂಸ್ಕೃತಿ ಮತ್ತು ದೇಶಭಕ್ತಿ’ಯ ಬಗ್ಗೆ ಜಾಗೃತಿ ಮೂಡಿಸುತ್ತದೆ ಎಂದು ಜೈಲು ಆಡಳಿತ ಹೇಳಿಕೊಂಡಿವೆ. ಛತ್ತೀಸ್‌ಗಢ – ಕೈದಿಗಳ

ಜೈಲಿನ ಗ್ರಂಥಾಲಯವು ಸಾಮಾನ್ಯವಾಗಿ ಪ್ರತಿ ತಿಂಗಳು ಪತ್ರಿಕೆಗಳು, ನಿಯತಕಾಲಿಕೆಗಳು ಮತ್ತು ಪುಸ್ತಕಗಳನ್ನು ಖರೀದಿಸುತ್ತದೆ. ಜೈಲಿನ ಗ್ರಂಥಾಲಯದಲ್ಲಿ ಸರಾಸರಿ ಪ್ರತಿ 50 ಕೈದಿಗಳಿಗೆ ಒಂದು ಪತ್ರಿಕೆ ಮತ್ತು ಒಂದು ನಿಯತಕಾಲಿಕೆ ಲಭ್ಯವಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದಾಗ್ಯೂ, ಈ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ದೇಶದ ಜನರು ಆರೆಸ್ಸೆಸ್‌ ಸಂಬಂಧಿತ ಪ್ರಕಟಣೆಗಳಾದ ಪಾಂಚಜನ್ಯ ಮತ್ತು ಆರ್ಗನೈಸರ್‌ನಿಂದ ಪ್ರಚಾರ ಮಾಡಲ್ಪಟ್ಟ ವಿಭಜಕ ಆಲೋಚನೆಗಳು ಮತ್ತು ದ್ವೇಷಪೂರಿತ ಕಾರ್ಯಸೂಚಿಯನ್ನು ಓದಲು ಬಯಸುವುದಿಲ್ಲ ಎಂದು ಹೇಳಿದೆ.

“ಆರ್‌ಎಸ್‌ಎಸ್ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾಗದ್ದು, ಛತ್ತೀಸ್‌ಗಢದಲ್ಲಿ ಆಡಳಿತಾರೂಢ ಬಿಜೆಪಿ ಪ್ರತಿ ಜೈಲಿನಲ್ಲಿ ಎರಡು ವಾರಪತ್ರಿಕೆಗಳನ್ನು ಜೋಡಿಸುವ ಹೆಸರಿನಲ್ಲಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತದೆ” ಎಂದು ಕಾಂಗ್ರೆಸ್‌ನ ಸುಶೀಲ್ ಆನಂದ್ ಶುಕ್ಲಾ ಹೇಳಿದ್ದಾರೆ.

1948 ರಲ್ಲಿ ಪ್ರಾರಂಭವಾದ ಪಾಂಚಜನ್ಯ ಮತ್ತು 1947 ರಲ್ಲಿ ಸ್ಥಾಪಿಸಲಾದ ಆರ್ಗನೈಸರ್ ಅನ್ನು ರಮಣ್ ಸಿಂಗ್ ಅವರ ಹಿಂದಿನ 15 ವರ್ಷಗಳ ಬಿಜೆಪಿ ಆಡಳಿತದಲ್ಲಿ ಛತ್ತೀಸ್‌ಗಢ ಜೈಲು ಗ್ರಂಥಾಲಯಗಳಿಗೆ ಪರಿಗಣಿಸಲಾಗಿರಲಿಲ್ಲ.

ಇದನ್ನೂಓದಿ:  ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!

ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....