Homeಮುಖಪುಟಛತ್ತೀಸ್‌ಗಢ - ಕೈದಿಗಳ 'ಸುಧಾರಣೆ'ಗಾಗಿ ಜೈಲುಗಳಲ್ಲಿ ಆರೆಸ್ಸೆಸ್‌ ಮುಖವಾಣಿ!

ಛತ್ತೀಸ್‌ಗಢ – ಕೈದಿಗಳ ‘ಸುಧಾರಣೆ’ಗಾಗಿ ಜೈಲುಗಳಲ್ಲಿ ಆರೆಸ್ಸೆಸ್‌ ಮುಖವಾಣಿ!

- Advertisement -
- Advertisement -

ಬಿಜೆಪಿ ಆಡಳಿತದ ಛತ್ತೀಸ್‌ಗಢದ ಜೈಲು ಇಲಾಖೆಯು ಆರೆಸ್ಸೆಸ್‌ ಮುಖವಾಣಿ ಪಾಂಚಜನ್ಯ (ಹಿಂದಿ ಭಾಷೆ) ಮತ್ತು ಆರ್ಗನೈಸರ್ (ಇಂಗ್ಲಿಷ್‌ ಭಾಷೆ) ಪತ್ರಿಕೆಗಳನ್ನು ಕೈದಿಗಳಿಗಾಗಿ ಗ್ರಂಥಾಲಯಗಳಿಗೆ ಸೇರಿಸಲು ನಿರ್ಧರಿಸಿದೆ. ರಾಜ್ಯದ ಜೈಲು ಗ್ರಂಥಾಲಯಗಳು ವೈವಿಧ್ಯಮಯ ವಿಷಯಗಳ ಕುರಿತು ಪುಸ್ತಕಗಳು ಮತ್ತು ಪ್ರಕಟಣೆಗಳ ಸಂಗ್ರಹಗಳನ್ನು ಹೊಂದಿವೆ ಎಂದು ಹೇಳಲಾಗಿದೆ. ಛತ್ತೀಸ್‌ಗಢ – ಕೈದಿಗಳ

ರಾಜ್ಯ ಮಹಾನಿರ್ದೇಶಕ (ಜೈಲು) ಹಿಮಾಂಶು ಗುಪ್ತಾ ಅವರು ಇತ್ತೀಚೆಗೆ ನಡೆಸಿದ ತಪಾಸಣೆಯ ಸಮಯದಲ್ಲಿ ಜೈಲುಗಳಲ್ಲಿರುವ ಗ್ರಂಥಾಲಯಗಳಲ್ಲಿ ಪಾಂಚಜನ್ಯ ಮತ್ತು ಆರ್ಗನೈಸರ್ ಇಲ್ಲ ಎಂದು ಕಂಡುಕೊಂಡಿದ್ದರು. ಹಾಗಾಗಿ ಎಲ್ಲಾ 33 ರಾಜ್ಯ ಕಾರಾಗೃಹಗಳಲ್ಲಿ ಈ ನಿಯತಕಾಲಿಕೆಗಳು ಲಭ್ಯವಾಗುವಂತೆ ಮಾಡಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಐದು ಕೇಂದ್ರ, 20 ಜಿಲ್ಲಾ ಜೈಲುಗಳು ಮತ್ತು ಎಂಟು ಉಪ ಜೈಲುಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಖೈದಿಗಳನ್ನು ಸುಧಾರಿಸುವ, ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ, ಅವರ ಕಲಿಕೆಯನ್ನು ಸುಧಾರಿಸುವ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುವಲ್ಲಿ ಆರೆಸ್ಸೆಸ್‌ ಮುಖವಾಣಿ ಸಹಾಯ ಮಾಡಲಿದೆ ಎಂದು ಡಿಜಿ ಹೇಳಿದ್ದಾರೆ. ಬಿಡುಗಡೆಯಾದ ನಂತರ ಮುಖ್ಯವಾಹಿನಿಯ ಸಮಾಜದಲ್ಲಿ ತಮ್ಮನ್ನು ತಾವು ಪುನರ್ವಸತಿ ಮಾಡಿಕೊಳ್ಳಲು ಇದು ಕೈದಿಗಳನ್ನು ಪ್ರೋತ್ಸಾಹಿಸುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕ್ರಮವು ಕೈದಿಗಳಲ್ಲಿ ‘ಸನಾತನ ಭಾರತೀಯ ಸಂಸ್ಕೃತಿ ಮತ್ತು ದೇಶಭಕ್ತಿ’ಯ ಬಗ್ಗೆ ಜಾಗೃತಿ ಮೂಡಿಸುತ್ತದೆ ಎಂದು ಜೈಲು ಆಡಳಿತ ಹೇಳಿಕೊಂಡಿವೆ. ಛತ್ತೀಸ್‌ಗಢ – ಕೈದಿಗಳ

ಜೈಲಿನ ಗ್ರಂಥಾಲಯವು ಸಾಮಾನ್ಯವಾಗಿ ಪ್ರತಿ ತಿಂಗಳು ಪತ್ರಿಕೆಗಳು, ನಿಯತಕಾಲಿಕೆಗಳು ಮತ್ತು ಪುಸ್ತಕಗಳನ್ನು ಖರೀದಿಸುತ್ತದೆ. ಜೈಲಿನ ಗ್ರಂಥಾಲಯದಲ್ಲಿ ಸರಾಸರಿ ಪ್ರತಿ 50 ಕೈದಿಗಳಿಗೆ ಒಂದು ಪತ್ರಿಕೆ ಮತ್ತು ಒಂದು ನಿಯತಕಾಲಿಕೆ ಲಭ್ಯವಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದಾಗ್ಯೂ, ಈ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ದೇಶದ ಜನರು ಆರೆಸ್ಸೆಸ್‌ ಸಂಬಂಧಿತ ಪ್ರಕಟಣೆಗಳಾದ ಪಾಂಚಜನ್ಯ ಮತ್ತು ಆರ್ಗನೈಸರ್‌ನಿಂದ ಪ್ರಚಾರ ಮಾಡಲ್ಪಟ್ಟ ವಿಭಜಕ ಆಲೋಚನೆಗಳು ಮತ್ತು ದ್ವೇಷಪೂರಿತ ಕಾರ್ಯಸೂಚಿಯನ್ನು ಓದಲು ಬಯಸುವುದಿಲ್ಲ ಎಂದು ಹೇಳಿದೆ.

“ಆರ್‌ಎಸ್‌ಎಸ್ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾಗದ್ದು, ಛತ್ತೀಸ್‌ಗಢದಲ್ಲಿ ಆಡಳಿತಾರೂಢ ಬಿಜೆಪಿ ಪ್ರತಿ ಜೈಲಿನಲ್ಲಿ ಎರಡು ವಾರಪತ್ರಿಕೆಗಳನ್ನು ಜೋಡಿಸುವ ಹೆಸರಿನಲ್ಲಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತದೆ” ಎಂದು ಕಾಂಗ್ರೆಸ್‌ನ ಸುಶೀಲ್ ಆನಂದ್ ಶುಕ್ಲಾ ಹೇಳಿದ್ದಾರೆ.

1948 ರಲ್ಲಿ ಪ್ರಾರಂಭವಾದ ಪಾಂಚಜನ್ಯ ಮತ್ತು 1947 ರಲ್ಲಿ ಸ್ಥಾಪಿಸಲಾದ ಆರ್ಗನೈಸರ್ ಅನ್ನು ರಮಣ್ ಸಿಂಗ್ ಅವರ ಹಿಂದಿನ 15 ವರ್ಷಗಳ ಬಿಜೆಪಿ ಆಡಳಿತದಲ್ಲಿ ಛತ್ತೀಸ್‌ಗಢ ಜೈಲು ಗ್ರಂಥಾಲಯಗಳಿಗೆ ಪರಿಗಣಿಸಲಾಗಿರಲಿಲ್ಲ.

ಇದನ್ನೂಓದಿ:  ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!

ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...