Homeಮುಖಪುಟಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಗೌರವ್‌ ವಲ್ಲಭ್‌ ಈಗ ಜಾರ್ಖಂಡ್‌ ಸಿಎಂ ಎದುರು...

ಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಗೌರವ್‌ ವಲ್ಲಭ್‌ ಈಗ ಜಾರ್ಖಂಡ್‌ ಸಿಎಂ ಎದುರು ಕಣಕ್ಕೆ…

- Advertisement -
- Advertisement -

ಟಿವಿ ಚರ್ಚೆಯೊಂದರಲ್ಲಿ ಬಿಜೆಪಿಯ ಸಂಬಿತ್‌ ಪಾತ್ರರನ್ನು ಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರ ಗೌರವ್‌ ವಲ್ಲಭ್ ಈಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದಾರೆ. ಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಗೌರವ್ ವಲ್ಲಭ್ ಜಾರ್ಖಂಡ್ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ಜಾರ್ಖಂಡ್ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲನೆಯದು ನವೆಂಬರ್ 30 ರಂದು ಮತ್ತು ಕೊನೆಯದು ಡಿಸೆಂಬರ್ 20 ರಂದು ನಡೆಯಲಿದೆ. ಡಿಸೆಂಬರ್ 23 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ಇದನ್ನೂ ಓದಿ: ಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರನ್ನು ಜೆಮ್‌ಶೆಡ್‌ಪುರ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಎದುರಿಸಲು ಕಾಂಗ್ರೆಸ್ ತನ್ನ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರನ್ನು ಶನಿವಾರ ಕಣಕ್ಕಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ  ವಲ್ಲಭ್ ಅವರ ಉಮೇದುವಾರಿಕೆಯನ್ನು ಅಂಗೀಕರಿಸಿದ್ದಾರೆ. ಇದರೊಂದಿಗೆ ಜಾರ್ಖಂಡ್ ಚುನಾವಣೆಗೆ ಕಾಂಗ್ರೆಸ್ ಈವರೆಗೆ ಘೋಷಿಸಿದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 27 ಆಗಿದೆ.

ರಾಜಸ್ಥಾನದ ಪಾಲಿ ನಗರದ ನಿವಾಸಿಯಾದ 42 ವರ್ಷದ ಗೌರವ್ ವಲ್ಲಭ್, ಪಾಲಿಯಲ್ಲಿ ಶಾಲಾ ಶಿಕ್ಷಣದ ನಂತರ ಜೈಪುರದಿಂದ ಸಿಎ ಅಧ್ಯಯನ ಮಾಡಿದರು. ಗೌರವ್ ಅವರ ಪೋಷಕರು ಪಾಲಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಗೌರವ್ 2000-2003ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್‌ಮೆಂಟ್ ಪೂನಾದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ಇದರೊಂದಿಗೆ ಅವರು ಮಹರ್ಷಿ ದಯಾನಂದ್ ಸರಸ್ವತಿ ವಿಶ್ವವಿದ್ಯಾಲಯದ ಅಜ್ಮೀರ್‌ನಿಂದ ಎಂ.ಕಾಂನಲ್ಲಿ ‘ಚಿನ್ನದ ಪದಕ’ವನ್ನು ಗಳಿಸಿದ್ದಾರೆ.

‘2017ರವರೆಗೆ ನಾನು ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದೆ, ಆನಂತರ ಭಾರತಕ್ಕೆ ಮರಳಿದೆ. ನಮ್ಮ ದೇಶದಲ್ಲಿ ಮಾಬ್ ಲಿಂಚಿಂಗ್ (ಗುಂಪು ಹಲ್ಲೆ) ಹೆಸರಿನಲ್ಲಿ ಜನರನ್ನು ದ್ವೇಷಕ್ಕೆ ಸಜ್ಜುಗೊಳಿಸಲಾಗುತ್ತಿದೆ. ಇದರ ವಿರುದ್ಧ ಹೋರಾಡಲು ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿದ್ದೇನೆ. ಆದ್ದರಿಂದ 2018 ರವರೆಗೆ ಪ್ಯಾನೆಲಿಸ್ಟ್ ಆಗಿ ಕೆಲಸ ಮಾಡಿದೆ, ಈ ವರ್ಷದ ಜನವರಿಯಲ್ಲಿ ರಾಷ್ಟ್ರೀಯ ವಕ್ತಾರನಾಗಿದ್ದೇನೆ ಎನ್ನುತ್ತಾರೆ.

ಇದನ್ನೂ ಓದಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ: 81 ಕ್ಷೇತ್ರಗಳಿಗೆ 5 ಹಂತಗಳಲ್ಲಿ ಚುನಾವಣೆ..

“ಸಿಎಂ ರಘುವರ್ ದಾಸ್ ಜಿ ವಿರುದ್ಧ ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಪೂರ್ವ ಅಸೆಂಬ್ಲಿ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷ ನನ್ನನ್ನು ಅಭ್ಯರ್ಥಿ ಎಂದು ಘೋಷಿಸಿದೆ. ಮುಖ್ಯಮಂತ್ರಿ ಎದುರು ಸ್ಪರ್ಧಿಸುವ ಸವಾಲಿಗೆ ನಾನು ಸಿದ್ಧ. ಇಷ್ಟು ದಿನ ಜಾರ್ಖಂಡ್ ಜನರನ್ನು ಮೋಸಗೊಳಿಸಲಾಗಿದೆ ಮತ್ತು ಈ ಚುನಾವಣಾ ಸ್ಪರ್ಧೆಯಲ್ಲಿ ನಾನು ವಿಜಯಶಾಲಿಯಾಗುತ್ತೇನೆ. ನನ್ನ ಮೇಲೆ ನಂಬಿಕೆಯನ್ನು ಇಟ್ಟ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಮತ್ತು ಪದಾಧಿಕಾರಿಗಳಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನಿಮ್ಮ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ” ಎಂದು ಗೌರವ್‌ ವಲ್ಲಭ್‌ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

 

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್‌ರವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ ಇತ್ತೀಚೆಗೆ ಚುನಾವಣಾ ಪೂರ್ವ ಒಪ್ಪಂದವನ್ನು ಘೋಷಿಸಿವೆ.

ಇದನ್ನೂ ಓದಿ: ಐದು ಟ್ರಿಲಿಯನ್ ಡಾಲರ್ ನಲ್ಲಿ ಎಷ್ಟು ಸೊನ್ನೆಯಿವೆ ಹೇಳಿ ನೋಡೋಣ??

ಜಾರ್ಖಂಡ್ ವಿಧಾನಸಭೆಯಲ್ಲಿ 81 ಸ್ಥಾನಗಳಲ್ಲಿ 31 ಸ್ಥಾನಗಳನ್ನು ಕಾಂಗ್ರೆಸ್ ಸ್ಪರ್ಧಿಸಲಿದೆ. ಆರ್‌ಜೆಡಿ ಏಳು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮೈತ್ರಿಕೂಟದ ಬಹುಪಾಲು ಪಾಲು ಜೆಎಂಎಂಗೆ ಹೋಗಿದ್ದು ಅದು 43 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಏಕಾಂಗಿಯಾಗಿ ಕಣಕ್ಕಿಳಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...