Homeಮುಖಪುಟನ್ಯಾಯಾಲಯ ತೀರ್ಪು ಬರುವವರೆಗೂ ಅತ್ಯಾಚಾರ ಆರೋಪಿ, ನಟ ಮುಖೇಶ್ ಶಾಸಕರಾಗಿರಲಿದ್ದಾರೆ - ಸಿಪಿಐ(ಎಂ)

ನ್ಯಾಯಾಲಯ ತೀರ್ಪು ಬರುವವರೆಗೂ ಅತ್ಯಾಚಾರ ಆರೋಪಿ, ನಟ ಮುಖೇಶ್ ಶಾಸಕರಾಗಿರಲಿದ್ದಾರೆ – ಸಿಪಿಐ(ಎಂ)

- Advertisement -
- Advertisement -

ಅತ್ಯಾಚಾರ ಆರೋಪ ಹೊತ್ತಿರುವ ನಟ, ರಾಜಕಾರಣಿ ಎಂ. ಮುಖೇಶ್ ಅವರ ವಿರುದ್ಧದ ಪ್ರಕರಣದಲ್ಲಿ ನ್ಯಾಯಾಲಯವು ತೀರ್ಪು ನೀಡುವವರೆಗೆ ಕೇರಳದಲ್ಲಿ ಶಾಸಕರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ಭಾನುವಾರ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ನ್ಯಾಯಾಲಯ ತೀರ್ಪು

ಅತ್ಯಾಚಾರ ಪ್ರಕರಣದಲ್ಲಿ ಮುಖೇಶ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿರುವುದನ್ನು ವಿಶೇಷ ತನಿಖಾ ತಂಡ ದೃಢಪಡಿಸಿದ ಕೂಡಲೇ ಪಕ್ಷದ ಈ ಹೇಳಿಕೆ ನೀಡಿದೆ. ಎರ್ನಾಕುಲಂ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಮುಖೇಶ್ ವಿರುದ್ಧ ಡಿಜಿಟಲ್ ಸಾಕ್ಷ್ಯಗಳನ್ನು ಪ್ರಸ್ತುತಪಡಿಸಿರುವುದಾಗಿ ಎಸ್‌ಐಟಿ ತಿಳಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ನ್ಯಾಯಾಲಯ ತೀರ್ಪು

ಮುಖೇಶ್ ಮತ್ತು ದೂರುದಾರರ ನಡುವಿನ ವಾಟ್ಸಾಪ್ ಚಾಟ್‌ಗಳು, ಇಮೇಲ್‌ಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖೇಶ್ ಶಾಸಕರಾಗಿ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಮತ್ತು ನ್ಯಾಯಾಲಯವು ಪ್ರಕರಣದಲ್ಲಿ ತೀರ್ಪು ನೀಡಿದ ನಂತರವೇ ಅವರ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಪಿಟಿಐಗೆ ತಿಳಿಸಿದ್ದಾರೆ.

“ಆರೋಪಪಟ್ಟಿ ಸಲ್ಲಿಸಲಾಗಿದ್ದು ಮತ್ತು ನ್ಯಾಯಾಲಯವು ಈ ಬಗ್ಗೆ ನಿಲುವು ತೆಗೆದುಕೊಂಡಾಗ ನಾವು ಈ ವಿಷಯವನ್ನು ತಿಳಿಸುತ್ತೇವೆ. ಅಲ್ಲಿವರೆಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ, ಏಕೆಂದರೆ ಇದು ಪಕ್ಷದ ನಿಲುವು.” ಎಂದು ಅವರು ಹೇಳಿದ್ದಾರೆ.

ಮುಖೇಶ್ ವಿರುದ್ಧ ಮಹಿಳಾ ನಟರೊಬ್ಬರು ನೀಡಿದ ದೂರಿನ ಆಧಾರದಲ್ಲಿ ಕೇರಳದ ಮರಡು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ ವಿರುದ್ಧ ಅತ್ಯಾಚಾರ, ಮಹಿಳೆಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗುವ ಪದ, ಹಲ್ಲೆ, ಧ್ವನಿ, ಸನ್ನೆ ಅಥವಾ ವಸ್ತುವಿನಿಂದ ಅವಮಾನಿಸಿದ ಆರೋಪ ಹೊರಿಸಲಾಗಿದೆ.

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಸದಸ್ಯರನ್ನಾಗಿ ಮಾಡುವುದಾಗಿ ಭರವಸೆ ನೀಡುವ ನೆಪದಲ್ಲಿ ಮುಖೇಶ್ ಅವರು 2010 ರಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರುದಾರರು ಹೇಳಿಕೊಂಡಿದ್ದಾರೆ. ಮುಖೇಶ್ ವಿರುದ್ಧ ಎಫ್‌ಐಆರ್‌ ಅನ್ನು ಆಗಸ್ಟ್‌ನಲ್ಲಿ ದಾಖಲಿಸಲಾಗಿದೆ.

ಅದಾಗ್ಯೂ, ಮುಖೇಸ್ ಅವರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದು, ತಾನು ಬ್ಲ್ಯಾಕ್‌ಮೇಲ್‌ಗೆ ಮಣಿಯಲು ನಿರಾಕರಿಸಿದ್ದರಿಂದ ಈ ಆರೋಪಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷ, ಕೇರಳ ಸರ್ಕಾರವು ನ್ಯಾಯಮೂರ್ತಿ ಕೆ. ಹೇಮಾ ಸಮಿತಿ ವರದಿ ಸ್ವೀಕರಿಸಿದ ನಂತರ ಮಲಯಾಳಂ ಚಲನಚಿತ್ರೋದ್ಯಮದ ಪ್ರಸಿದ್ಧ ವ್ಯಕ್ತಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಹೊರಬಿದ್ದಿತ್ತು. ಅದರ ನಂತರ ಹಲವಾರು ನಟರುಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ನಟ ದಿಲೀಪ್ ಒಳಗೊಂಡ 2017 ರ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಉಂಟಾದ ಆಕ್ರೋಶಕ್ಕೆ ಪ್ರತಿಕ್ರಿಯೆಯಾಗಿ ಕೇರಳ ಸರ್ಕಾರ ಈ ಸಮಿತಿಯನ್ನು ಸ್ಥಾಪಿಸಿತ್ತು. ಹೇಮಾ ವರದಿಯು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ಮೇಲಿನ ಕಿರುಕುಳ ಮತ್ತು ಶೋಷಣೆಯ ನಿದರ್ಶನಗಳನ್ನು ಎತ್ತಿ ತೋರಿಸಿದೆ.

ಆಗಸ್ಟ್ 19 ರಂದು, ವರದಿಯ ಪ್ರಕಟಣೆಗೆ ತಡೆ ನೀಡುವಂತೆ ನಟಿ ರಂಜಿನಿ ಸಲ್ಲಿಸಿದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ವರದಿಯ ಪರಿಷ್ಕೃತ ಆವೃತ್ತಿಯನ್ನು ಬಿಡುಗಡೆ ಮಾಡಲಾಯಿತು. ಮಲಯಾಳಂ ಸಿನಿಮಾಗಳಲ್ಲಿ ಮಹಿಳೆಯರಿಗೆ ಕೆಲಸ ಬೇಕೆಂದರೆ, “ರಾಜಿ ಮತ್ತು ಹೊಂದಾಣಿಕೆ” ಮಾಡಿಕೊಳ್ಳಲು ಹೇಳಲಾಗುತ್ತದೆ ಎಂದು ವರದಿ ಹೇಳಿದೆ.

ಇದನ್ನೂಓದಿ:  ‘ಮುಖ್ಯವಾಹಿನಿ ಎಂದರೆ ಶಸ್ತ್ರಾಸ್ತ್ರ ಹೋರಾಟದ ದಾರಿಯಿಂದ ಪ್ರಜಾತಾಂತ್ರಿಕ ಹೋರಾಟಕ್ಕೆ ಮರಳುವುದು’: ನೂರ್ ಶ್ರೀಧರ್ ಅವರೊಂದಿಗೆ ಸಂದರ್ಶನ

‘ಮುಖ್ಯವಾಹಿನಿ ಎಂದರೆ ಶಸ್ತ್ರಾಸ್ತ್ರ ಹೋರಾಟದ ದಾರಿಯಿಂದ ಪ್ರಜಾತಾಂತ್ರಿಕ ಹೋರಾಟಕ್ಕೆ ಮರಳುವುದು’: ನೂರ್ ಶ್ರೀಧರ್ ಅವರೊಂದಿಗೆ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...