Homeಮುಖಪುಟತೆಲಂಗಾಣ ಜಾತಿ ಸಮೀಕ್ಷೆ : ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ಜಾತಿಯವರ ಪ್ರಮಾಣ ಶೇ. 56

ತೆಲಂಗಾಣ ಜಾತಿ ಸಮೀಕ್ಷೆ : ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ಜಾತಿಯವರ ಪ್ರಮಾಣ ಶೇ. 56

- Advertisement -
- Advertisement -

ಕಳೆದ ವರ್ಷದ (2024) ನವೆಂಬರ್ ಮತ್ತು ಡಿಸೆಂಬರ್‌ ತಿಂಗಳಲ್ಲಿ ನಡೆಸಿದ ಜಾತಿ ಜನಗಣತಿಯ ಪ್ರಕಾರ, ರಾಜ್ಯದ ಒಟ್ಟು ಜನಸಂಖ್ಯೆಯ ಶೇಖಡ 56.33ರಷ್ಟು ಹಿಂದುಳಿದ ಜಾತಿಗಳಿಗೆ ಸೇರಿದ ಜನರು ಇದ್ದಾರೆ ಎಂದು ತೆಲಂಗಾಣದ ಸಚಿವ ಉತ್ತಮ್ ಕುಮಾರ್ ರೆಡ್ಡಿ ಬಹಿರಂಗಪಡಿಸಿದ್ದಾರೆ.

ಹಿಂದುಳಿದ ಜಾತಿಗಳಲ್ಲಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ ಜನರು ಒಳಗೊಂಡಿದ್ದಾರೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆಯ ಪ್ರಕಾರ, ತೆಲಂಗಾಣದ ಜನಸಂಖ್ಯೆಯಲ್ಲಿ ಮುಸ್ಲಿಮರನ್ನು ಹೊರತುಪಡಿಸಿ ಶೇಖಡ 46.25ರಷ್ಟು ಹಿಂದುಳಿದ ಜಾತಿಯವರು ಇದ್ದಾರೆ. ಹಿಂದುಳಿದ ಮುಸ್ಲಿಮರ ಜನಸಂಖ್ಯೆ ಶೇಖಡ 10.08ರಷ್ಟಿದೆ.

ಜನಗಣತಿಯ ಪ್ರಕಾರ ತೆಲಂಗಾಣದ ಜಾತಿವಾರು ಜನಸಂಖ್ಯೆ

ಪರಿಶಿಷ್ಟ ಜಾತಿಗಳು – 61,84,319 (17.43%)

ಪರಿಶಿಷ್ಟ ಪಂಗಡಗಳು- 37,05,929 (10.45%)

ಹಿಂದುಳಿದ ಜಾತಿಗಳು (ಮುಸ್ಲಿಮರನ್ನು ಹೊರತುಪಡಿಸಿ) – 1,64,09,179 (46.25%)

ಹಿಂದುಳಿದ ಜಾತಿಯ ಮುಸ್ಲಿಮರು – 35,76,588 (10.08%)

ಇತರೆ ಜಾತಿಯ ಮುಸ್ಲಿಮರು – 8,80,424 (2.48%)

ಇತರೆ ಜಾತಿಗಳು (ಮುಸ್ಲಿಮರನ್ನು ಹೊರತುಪಡಿಸಿ) – 13.31%

ಮುಸ್ಲಿಮರು (ಒಟ್ಟು) – 12.56%

ಇತರೆ ಜಾತಿಗಳು (ಒಟ್ಟು) – 15.79%

ತೆಲಂಗಾಣದಲ್ಲಿ ಕನಿಷ್ಠ 162 ಸಮುದಾಯಗಳನ್ನು ಹಿಂದುಳಿದ ಜಾತಿಗಳೆಂದು ವರ್ಗೀಕರಿಸಲಾಗಿದೆ. ಅವುಗಳನ್ನು ಎ, ಬಿ, ಸಿ, ಡಿ, ಇ ಎಂದು ಐದು ಗುಂಪುಗಳಾಗಿ ಉಪ ವರ್ಗೀಕರಣ ಮಾಡಲಾಗಿದೆ. ಇದರಲ್ಲಿ ಗುಂಪು ಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರನ್ನು ಒಳಗೊಂಡಿದೆ ಮತ್ತು ಗುಂಪು ಇ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಯ ಮುಸ್ಲಿಮರನ್ನು ಒಳಗೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದು. ಶಿಕ್ಷಣ, ಉದ್ಯೋಗ ಮತ್ತು ಕಲ್ಯಾಣ ಯೋಜನೆಗಳಲ್ಲಿ ಹಿಂದುಳಿದಿರುವ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ವಿಸ್ತರಿಸುವುದಾಗಿಯೂ ಕಾಂಗ್ರೆಸ್ ಹೇಳಿತ್ತು. ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಶೇಖಡ 23 ರಿಂದ ಶೇಖಡ 42ಕ್ಕೆ ಹೆಚ್ಚಿಸುವುದಾಗಿ ಮತ್ತು ಸರ್ಕಾರಿ ನಾಗರಿಕ ನಿರ್ಮಾಣ ಮತ್ತು ನಿರ್ವಹಣಾ ಒಪ್ಪಂದಗಳಲ್ಲಿ ಶೇಖಡ 42 ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಜಾರಿಗೆ ತರುವುದಾಗಿಯೂ ಪಕ್ಷ ಭರವಸೆ ನೀಡಿತ್ತು.

ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....