Homeಮುಖಪುಟಸಾಮಾಜಿಕ ಮಾಧ್ಯಮಗಳಲ್ಲಿ ಮಹಾ ಕುಂಭ ಮೇಳದ ಬಗ್ಗೆ ವದಂತಿ ಹರಡಿದವರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಮಾಧ್ಯಮಗಳಲ್ಲಿ ಮಹಾ ಕುಂಭ ಮೇಳದ ಬಗ್ಗೆ ವದಂತಿ ಹರಡಿದವರ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಕಳಂಕ ತರುವ ಉದ್ದೇಶದಿಂದ ವದಂತಿಗಳು ಮತ್ತು ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಪೊಲೀಸರು ಸೋಮವಾರ ಏಳು ಸಾಮಾಜಿಕ ಮಾಧ್ಯಮ ಖಾತೆದಾರರು/ಬಳಕೆದಾರರ ವಿರುದ್ಧ ಭಾರತೀಯ ನ್ಯಾಯ ಸಂಹಿತ (ಬಿಎನ್‌ಎಸ್) ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ

ವದಂತಿಗಳು ಮತ್ತು ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಏಳು ಸಾಮಾಜಿಕ ಮಾಧ್ಯಮ ಖಾತೆದಾರರು/ಬಳಕೆದಾರರ ವಿರುದ್ಧ ಮೇಳ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಎಸ್‌ಪಿ (ಕುಂಭಮೇಳ) ರಾಜೇಶ್ ದ್ವಿವೇದಿ ದೃಢಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದ ತನಿಖೆ ಮತ್ತು ಸೂಕ್ತ ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನು ಸೈಬರ್ ಅಪರಾಧ ಮತ್ತು ಮೇಳದ ಪೊಲೀಸರ ಜಂಟಿ ತಂಡಕ್ಕೆ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಸಾಮಾಜಿಕ ಮಾಧ್ಯಮಗಳಲ್ಲಿ, ಕುಟುಂಬ ಸದಸ್ಯರು ಮೂರು ಶವಗಳನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾರೆ ಎಂದು ಪ್ರತಿಪಾದಿಸುವ ವಿಡಿಯೊಂದು ವೈರಲ್ ಆಗಿದೆ, ಇದು ತಪ್ಪಾಗಿ ಬಿಂಬಿಸುವ ವೀಡಿಯೊವಾಗಿದ್ದು, ಈ ನಕಲಿ ವೀಡಿಯೊವನ್ನು ಖಾತೆದಾರರೊಬ್ಬರು ಪೋಸ್ಟ್ ಮಾಡಿದ್ದಾರೆ ಎಂದು ಎಸ್‌ಎಸ್‌ಪಿ ಹೇಳಿಕೊಂಡಿದ್ದಾರೆ.

ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು ಕುಟುಂಬವು ಶವಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಅವರ ಮನೆಗೆ ಶವವನ್ನು ಈ ರೀತಿಯಾಗಿ ಸಾಗಿಸಬೇಕಾಯಿತು ಎಂದು ಬಳಕೆದಾರರು ಆರೋಪಿಸಿದ್ದಾರೆ.

“ಮೌತ್ ಕಾ ಮಹಾಕುಂಭ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಬಳಕೆದಾರರು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ ಶವಗಳನ್ನು ಅವರ ಸ್ವಂತ ಮನೆಗೆ ಸಾಗಿಸಲು ಕನಿಷ್ಠ ಒಂದು ಆಂಬ್ಯುಲೆನ್ಸ್ ಕೂಡಾ ಒದಗಿಸಿಲ್ಲ ಎಂದು ಪ್ರತಿಪಾದಿಸಲಾಗಿದೆ. ಆದಾಗ್ಯೂ, ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದು, ಆ ವೀಡಿಯೊ ವರ್ಷಗಳಷ್ಟು ಹಳೆಯದಾಗಿದ್ದು, ನೇಪಾಳದಲ್ಲಿ ಚಿತ್ರೀಕರಿಸಲಾಗಿದೆ ಎಂದು ಕಂಡುಬಂದಿದೆ.

ಅಪರಿಚಿತ ವ್ಯಕ್ತಿಗಳು ಮೂತ್ರಪಿಂಡವನ್ನು ಹೊರತೆಗೆದು ಶವವನ್ನು ನದಿಗೆ ಎಸೆದಿದ್ದಾರೆ ಎಂದು ಪ್ರತಿಪಾದಿಸುವ ವೀಡಿಯೊವನ್ನು ಮತ್ತೊಬ್ಬ ಸಾಮಾಜಿಕ ಮಾಧ್ಯಮ ಖಾತೆದಾರರ ಅಪ್‌ಲೋಡ್ ಮಾಡಿದ್ದಾರೆ ಎಂದು ಅವರ  ವಿರುದ್ಧ ಮೇಳ ಪೊಲೀಸರು ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಖಾತೆದಾರರ ಗುರುತುಗಳು ಮತ್ತು ಕುಂಭಮೇಳವನ್ನು ದೂಷಿಸುವ ಹಿಂದಿನ ಅವರ ಉದ್ದೇಶಗಳನ್ನು ಕಂಡುಹಿಡಿಯಲು ಜಂಟಿ ತಂಡವು ಕೆಲಸ ಮಾಡುತ್ತಿದೆ ಎಂದು ಎಸ್‌ಎಸ್‌ಪಿ ದ್ವಿವೇದಿ ಹೇಳಿದರು. ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ಮಾಹಿತಿಗಳನ್ನು ಪಡೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

“ಮೇಳ ಪೊಲೀಸರು ಎಲ್ಲಾ ಪ್ರಕರಣಗಳನ್ನು ಕೂಲಂಕಷವಾಗಿ ತನಿಖೆ ಮಾಡುತ್ತಾರೆ” ಎಂದು ದ್ವಿವೇದಿ ಹೇಳಿದದ್ದಾರೆ. “ಬಸಂತ್ ಪಂಚಮಿಯ ಮೂರನೇ ಅಮೃತ ಸ್ನಾನಕ್ಕೆ ಮುಂಚಿತವಾಗಿ ಈ ನಕಲಿ ವೀಡಿಯೊಗಳನ್ನು ಏಕೆ ಅಪ್‌ಲೋಡ್ ಮಾಡಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ಈ ಪ್ರಕರಣಗಳನ್ನು ತೀವ್ರವಾಗಿ ತನಿಖೆ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...