Homeಮುಖಪುಟಜಾರ್ಖಂಡ್ : ಸಿಎಎ, ಎನ್‌ಆರ್‌ಸಿ, ಯುಸಿಸಿ ವಿರುದ್ಧ ನಿರ್ಣಯ ಕೈಗೊಂಡ ಜೆಎಂಎಂ

ಜಾರ್ಖಂಡ್ : ಸಿಎಎ, ಎನ್‌ಆರ್‌ಸಿ, ಯುಸಿಸಿ ವಿರುದ್ಧ ನಿರ್ಣಯ ಕೈಗೊಂಡ ಜೆಎಂಎಂ

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷ ಭಾನುವಾರ (ಫೆ.2) ರಾತ್ರಿ ಡುಮ್ಕಾದ ಗಾಂಧಿ ಮೈದಾನದಲ್ಲಿ ನಡೆದ 46ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಗಳನ್ನು ದೃಢವಾಗಿ ವಿರೋಧಿಸುವ 50 ಅಂಶಗಳ ನಿರ್ಣಯವನ್ನು ಅಂಗೀಕರಿಸಿದೆ.

ಈ ನೀತಿಗಳನ್ನು ಜಾರ್ಖಂಡ್‌ ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂದು ಪಕ್ಷ ಮನವಿ ಮಾಡಿದೆ.

ಇದರ ಜೊತೆಗೆ, ಛೋಟಾನಾಗಪುರ ಒಕ್ಕಲು (ಸಿಎನ್‌ಟಿ) ಕಾಯ್ದೆ ಮತ್ತು ಸಂತಾಲ್ ಪ್ರಜ್ಞಾ ಒಕ್ಕಲು (ಎಸ್‌ಪಿಟಿ) ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜೆಎಂಎಂ ಕರೆ ನೀಡಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಲು ಬಾಕಿ ಇರುವ 1.36 ಲಕ್ಷ ಕೋಟಿ ರೂ.ಗಳನ್ನು ಪಾವತಿಸಬೇಕೆಂದು ಒತ್ತಾಯಿಸಿದೆ.

ಕಾರ್ಯಕ್ರಮದಲ್ಲಿ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಹೇಮಂತ್ ಸೊರೇನ್, ಕೇಂದ್ರ ಸರ್ಕಾರವನ್ನು ಟೀಕಿಸಿದರು. ಈ ಬಾರಿಯ ಬಜೆಟ್‌ನಲ್ಲಿ ಜಾರ್ಖಂಡ್ ಅನ್ನು ಕಡೆಗಣಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. “ಊಳಿಗಮಾನ್ಯ ಮನಸ್ಥಿತಿ” ಹೊಂದಿರುವ ಕೆಲವು ಗುಂಪುಗಳು ರಾಜ್ಯದ ಬುಡಕಟ್ಟು ಜನಸಂಖ್ಯೆಯ ಪ್ರಗತಿಯನ್ನು ತಡೆಯಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ.

“ಖನಿಜ ಸಂಪನ್ಮೂಲಗಳಿಂದ ಸಮೃದ್ಧವಾಗಿದ್ದರೂ, ರಾಷ್ಟ್ರೀಯ ಖಜಾನೆಗೆ ಗಣನೀಯ ಕೊಡುಗೆ ನೀಡುತ್ತಿದ್ದರೂ ಜಾರ್ಖಂಡ್ ಅತ್ಯಂತ ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿದೆ” ಎಂದು ಹೇಮಂತ್ ಸೊರೇನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ರಾಜ್ಯಗಳು, ವಿಶೇಷವಾಗಿ ಅಭಿವೃದ್ಧಿಯಾಗದ ರಾಜ್ಯಗಳು ಕೇಂದ್ರದಿಂದ ಸಮಾನ ಪರಿಗಣನೆ ಪಡೆಯಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ.

ಕೇಂದ್ರದ ಬಜೆಟ್ ಅನ್ನು ಟೀಕಿಸಿದ ಸೊರೇನ್, “ಇದು ಶ್ರೀಮಂತರ ಪರ ಮತ್ತು ಬಡವರ ಪ್ರಯೋಜನವಿಲ್ಲದ ಬಜೆಟ್ ಎಂದು ಹೇಳಿದ್ದಾರೆ. “ಹಣದುಬ್ಬರವು ಗಗನಕ್ಕೇರುತ್ತಿರುವಾಗ ಮತ್ತು ಜಿಎಸ್‌ಟಿಯಲ್ಲಿ ಯಾವುದೇ ಪರಿಹಾರವಿಲ್ಲದಿದ್ದಾಗ ತೆರಿಗೆ ರಿಯಾಯಿತಿಗಳು ಸಹಾಯ ಮಾಡುವುದಿಲ್ಲ” ಎಂದಿದ್ದಾರೆ. ಸರ್ಕಾರದ ಹೊಸ ಉಪಕ್ರಮವಾದ ಗ್ಯಾನ್ (ಗರಿಬ್, ಯುವ, ಅನ್ನದಾತ, ನಾರಿ), ನೇರ ಆರ್ಥಿಕ ಬೆಂಬಲಕ್ಕಿಂತ ಹೆಚ್ಚಾಗಿ ಸಾಲಗಳನ್ನು ನೀಡುವ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

ಜಾರ್ಖಂಡ್‌ನ ಕಲ್ಯಾಣ ಯೋಜನೆಗಳನ್ನು ಎತ್ತಿ ತೋರಿಸಿದ ಸೊರೇನ್, ಮಹಿಳೆಯರಿಗೆ ಮಾಸಿಕ 2,500ರೂಪಾಯಿ ಆರ್ಥಿಕ ನೆರವು ನೀಡಿದ ಮೊದಲ ರಾಜ್ಯ ನಮ್ಮದು ಹೇಳಿದರು. ಬಿಜೆಪಿಯನ್ನು ಟೀಕಿಸಿದ ಅವರು, “ಅವರು ನಮ್ಮ ಯೋಜನೆಗಳನ್ನು ಬಿಟ್ಟಿ ಎಂದು ಕರೆದರು. ಆದರೆ, ಈಗ ಅವರೇ ದೆಹಲಿಯಲ್ಲಿ ಉಚಿತ ಭರವಸೆಗಳನ್ನು ನೀಡಿದ್ದಾರೆ. ನಾವು ಮಾಡಿದಾಗ ತಪ್ಪು ಎಂದದ್ದು ಅವರು ಮಾಡಿದಾಗ ಸರಿಯಾಗುತ್ತಾ? ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆ: ಹೈ-ವೋಲ್ಟೇಜ್ ಪ್ರಚಾರ ಇಂದು ಅಂತ್ಯ; ರಾಜಧಾನಿಯ ಗದ್ದುಗೆ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...