Homeಮುಖಪುಟತೀವ್ರ ಟೀಕೆಯ ನಂತರ ’ಗಾಂಧಿಯದು ಆಕಸ್ಮಿಕ ಸಾವು ಪಠ್ಯ’ ಹಿಂಪಡೆದ ಒಡಿಶಾ ಸರ್ಕಾರ...

ತೀವ್ರ ಟೀಕೆಯ ನಂತರ ’ಗಾಂಧಿಯದು ಆಕಸ್ಮಿಕ ಸಾವು ಪಠ್ಯ’ ಹಿಂಪಡೆದ ಒಡಿಶಾ ಸರ್ಕಾರ…

- Advertisement -
- Advertisement -

ಮಹಾತ್ಮ ಗಾಂಧಿಯವರು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆಂದು ಹೇಳಿದ್ದ ಕಿರುಪುಸ್ತಕಗಳನ್ನು ತೀವ್ರ ವಿರೋಧ ಬಂದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಕೊನೆಗೂ ಹಿಂತೆಗೆದುಕೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿರುವ ಎರಡು ಪುಟಗಳ ಕಿರುಪುಸ್ತಕವನ್ನು ಸರಿಪಡಿಸಿ ಪುನರ್ವಿತರಣೆ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಸಾಮಿ ರಂಜನ್ ಡ್ಯಾಶ್ ಹೇಳಿದ್ದಾರೆ.

ಆಕಸ್ಮಿಕ ಕಾರಣಗಳಿಂದ ರಾಷ್ಟ್ಟಪಿತ ಮಹಾತ್ಮ ಗಾಂಧಿಯವರು ಸಾವನ್ನಪ್ಪಿದ್ದಾರೆ ಎಂಬ ಈ ತಪ್ಪು ಮಾಹಿತಿ  ಉದ್ದೇಶಪೂರ್ವಕವಲ್ಲ ಎಂದು ಒಡಿಶಾ ಸರ್ಕಾರ ಹೇಳಿದೆ ಮತ್ತು ಅದನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ.

ಮಕ್ಕಳಿಗೆ ತಪ್ಪು ಮಾಹಿತಿ ನೀಡುವ, ಗೊಂದಲಗೊಳಿಸುವ ಅಥವಾ ಬದಲಾಯಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಶಿಕ್ಷಣ ಸಚಿವ ಸಾಮಿ ರಂಜನ್ ಡ್ಯಾಶ್ ಶನಿವಾರ ವಿಧಾನಸಭೆಯಲ್ಲಿ ಹೇಳಿದರು.

“ಇದು ಉದ್ದೇಶಪೂರ್ವಕವಾಗಿರಲಿಲ್ಲ. ರಾಜ್ಯ ಸರ್ಕಾರ ಈಗಾಗಲೇ ಕಿರುಪುಸ್ತಕವನ್ನು ಹಿಂತೆಗೆದುಕೊಂಡಿದೆ ಮತ್ತು ಇಬ್ಬರು ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ನೀಡಿದೆ. ಅವರ ನಿರ್ಲಕ್ಷ್ಯಕ್ಕಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ” ಎಂದು ಡ್ಯಾಶ್ ಹೇಳಿದರು.

ಜನವರಿ 30, 1948 ರಂದು ಆಕಸ್ಮಿಕ ಕಾರಣಗಳಿಂದಾಗಿ ಮಹಾತ್ಮ ಗಾಂಧಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾದ ಕಿರುಹೊತ್ತಗೆಯ ಪ್ರಕರಣವು ಅಸೆಂಬ್ಲಿಯಲ್ಲಿ ಶುಕ್ರವಾರ ತೀವ್ರ ಕೋಲಾಹಲವನ್ನು ಉಂಟುಮಾಡಿತು. ಪ್ರತಿಪಕ್ಷ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಖ್ಯಮಂತ್ರಿ ನವೀನ್ ಪಟ್ನಾಯಕ್ ವಿರುದ್ಧ ವಾಗ್ದಾಳಿ ನಡೆಸಿದ್ದವು.

ಗಾಂಧಿವಾದಿಗಳು ಸೇರಿದಂತೆ ರಾಜ್ಯದ, ರಾಷ್ಟ್ರದ ಹಲವಾರು ಬುದ್ಧಿಜೀವಿಗಳು ಗಾಂಧೀಜಿಯವರ ಹತ್ಯೆಯ ಬಗ್ಗೆ ಸತ್ಯವನ್ನು ತಪ್ಪಾಗಿ ನಿರೂಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

“ಈ ಸುಳ್ಳು ಮಾಹಿತಿಯನ್ನು ಹರಡುವ ಹಿಂದಿನ ಉದ್ದೇಶವೆಂದರೆ ಮಹಾತ್ಮ ಗಾಂಧಿಯನ್ನು ಹಿಂದೂತ್ವವಾದಿ ನಾಥುರಾಮ್ ಗೋಡ್ಸೆ ಹತ್ಯೆ ಮಾಡಿದ್ದಾರೆ ಎಂಬ ಅಂಶವನ್ನು ಮಕ್ಕಳಿಂದ ಮರೆಮಾಡುವುದು” ಎಂದು ಪ್ರಫುಲ್ಲ ಸಮಂತ್ರಾರವರು ತಿಳಿಸಿದ್ದಾರೆ.

ಈ ಪುಸ್ತಕಗಳು ಮೂಲಕ ಗಾಂಧಿಯವರ ಸಾವನ್ನು ಮರೆಸಲು ಹಿಂದೂತ್ವಾದಿಗಳು ಮಾಡಿದ ಸರ್ಕಸ್ ವಿಫಲವಾಗಿದೆ ಮನೋರಂಜನ್‌ ಸಾಹುರವರು ತಿಳಿಸಿದ್ದಾರೆ.

“ಒಬ್ಬರು ಆಕಸ್ಮಿಕವಾಗಿ ಸಾವನಪ್ಪಿದರು ಎಂದರೆ ಏನರ್ಥ? ರಸ್ತೆಯಲ್ಲಿ ಮುಗ್ಗರಿಸಿ ಗಾಂಧೀಜಿಯವರು ಸತ್ತಾರೆಯೇ? ನಾಥುರಾಮ್ ಗೋಡ್ಸೆ ಹಾರಿಸಿದ ಗುಂಡುಗಳಿಂದ ಅವನು ಸತ್ತನೆಂದು ಎಲ್ಲರಿಗೂ ತಿಳಿದಿದೆ ”ಎಂದು ಸಾಹು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...