Homeಮುಖಪುಟತೀವ್ರ ಟೀಕೆಯ ನಂತರ ’ಗಾಂಧಿಯದು ಆಕಸ್ಮಿಕ ಸಾವು ಪಠ್ಯ’ ಹಿಂಪಡೆದ ಒಡಿಶಾ ಸರ್ಕಾರ...

ತೀವ್ರ ಟೀಕೆಯ ನಂತರ ’ಗಾಂಧಿಯದು ಆಕಸ್ಮಿಕ ಸಾವು ಪಠ್ಯ’ ಹಿಂಪಡೆದ ಒಡಿಶಾ ಸರ್ಕಾರ…

- Advertisement -
- Advertisement -

ಮಹಾತ್ಮ ಗಾಂಧಿಯವರು ಆಕಸ್ಮಿಕವಾಗಿ ಮೃತಪಟ್ಟಿದ್ದಾರೆಂದು ಹೇಳಿದ್ದ ಕಿರುಪುಸ್ತಕಗಳನ್ನು ತೀವ್ರ ವಿರೋಧ ಬಂದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಕೊನೆಗೂ ಹಿಂತೆಗೆದುಕೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿರುವ ಎರಡು ಪುಟಗಳ ಕಿರುಪುಸ್ತಕವನ್ನು ಸರಿಪಡಿಸಿ ಪುನರ್ವಿತರಣೆ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಸಾಮಿ ರಂಜನ್ ಡ್ಯಾಶ್ ಹೇಳಿದ್ದಾರೆ.

ಆಕಸ್ಮಿಕ ಕಾರಣಗಳಿಂದ ರಾಷ್ಟ್ಟಪಿತ ಮಹಾತ್ಮ ಗಾಂಧಿಯವರು ಸಾವನ್ನಪ್ಪಿದ್ದಾರೆ ಎಂಬ ಈ ತಪ್ಪು ಮಾಹಿತಿ  ಉದ್ದೇಶಪೂರ್ವಕವಲ್ಲ ಎಂದು ಒಡಿಶಾ ಸರ್ಕಾರ ಹೇಳಿದೆ ಮತ್ತು ಅದನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ.

ಮಕ್ಕಳಿಗೆ ತಪ್ಪು ಮಾಹಿತಿ ನೀಡುವ, ಗೊಂದಲಗೊಳಿಸುವ ಅಥವಾ ಬದಲಾಯಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಶಿಕ್ಷಣ ಸಚಿವ ಸಾಮಿ ರಂಜನ್ ಡ್ಯಾಶ್ ಶನಿವಾರ ವಿಧಾನಸಭೆಯಲ್ಲಿ ಹೇಳಿದರು.

“ಇದು ಉದ್ದೇಶಪೂರ್ವಕವಾಗಿರಲಿಲ್ಲ. ರಾಜ್ಯ ಸರ್ಕಾರ ಈಗಾಗಲೇ ಕಿರುಪುಸ್ತಕವನ್ನು ಹಿಂತೆಗೆದುಕೊಂಡಿದೆ ಮತ್ತು ಇಬ್ಬರು ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ನೀಡಿದೆ. ಅವರ ನಿರ್ಲಕ್ಷ್ಯಕ್ಕಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ” ಎಂದು ಡ್ಯಾಶ್ ಹೇಳಿದರು.

ಜನವರಿ 30, 1948 ರಂದು ಆಕಸ್ಮಿಕ ಕಾರಣಗಳಿಂದಾಗಿ ಮಹಾತ್ಮ ಗಾಂಧಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾದ ಕಿರುಹೊತ್ತಗೆಯ ಪ್ರಕರಣವು ಅಸೆಂಬ್ಲಿಯಲ್ಲಿ ಶುಕ್ರವಾರ ತೀವ್ರ ಕೋಲಾಹಲವನ್ನು ಉಂಟುಮಾಡಿತು. ಪ್ರತಿಪಕ್ಷ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಖ್ಯಮಂತ್ರಿ ನವೀನ್ ಪಟ್ನಾಯಕ್ ವಿರುದ್ಧ ವಾಗ್ದಾಳಿ ನಡೆಸಿದ್ದವು.

ಗಾಂಧಿವಾದಿಗಳು ಸೇರಿದಂತೆ ರಾಜ್ಯದ, ರಾಷ್ಟ್ರದ ಹಲವಾರು ಬುದ್ಧಿಜೀವಿಗಳು ಗಾಂಧೀಜಿಯವರ ಹತ್ಯೆಯ ಬಗ್ಗೆ ಸತ್ಯವನ್ನು ತಪ್ಪಾಗಿ ನಿರೂಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

“ಈ ಸುಳ್ಳು ಮಾಹಿತಿಯನ್ನು ಹರಡುವ ಹಿಂದಿನ ಉದ್ದೇಶವೆಂದರೆ ಮಹಾತ್ಮ ಗಾಂಧಿಯನ್ನು ಹಿಂದೂತ್ವವಾದಿ ನಾಥುರಾಮ್ ಗೋಡ್ಸೆ ಹತ್ಯೆ ಮಾಡಿದ್ದಾರೆ ಎಂಬ ಅಂಶವನ್ನು ಮಕ್ಕಳಿಂದ ಮರೆಮಾಡುವುದು” ಎಂದು ಪ್ರಫುಲ್ಲ ಸಮಂತ್ರಾರವರು ತಿಳಿಸಿದ್ದಾರೆ.

ಈ ಪುಸ್ತಕಗಳು ಮೂಲಕ ಗಾಂಧಿಯವರ ಸಾವನ್ನು ಮರೆಸಲು ಹಿಂದೂತ್ವಾದಿಗಳು ಮಾಡಿದ ಸರ್ಕಸ್ ವಿಫಲವಾಗಿದೆ ಮನೋರಂಜನ್‌ ಸಾಹುರವರು ತಿಳಿಸಿದ್ದಾರೆ.

“ಒಬ್ಬರು ಆಕಸ್ಮಿಕವಾಗಿ ಸಾವನಪ್ಪಿದರು ಎಂದರೆ ಏನರ್ಥ? ರಸ್ತೆಯಲ್ಲಿ ಮುಗ್ಗರಿಸಿ ಗಾಂಧೀಜಿಯವರು ಸತ್ತಾರೆಯೇ? ನಾಥುರಾಮ್ ಗೋಡ್ಸೆ ಹಾರಿಸಿದ ಗುಂಡುಗಳಿಂದ ಅವನು ಸತ್ತನೆಂದು ಎಲ್ಲರಿಗೂ ತಿಳಿದಿದೆ ”ಎಂದು ಸಾಹು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...