ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 2, 3, 4 ಮತ್ತು 8ಎ ಗಳನ್ನು ಅಸಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದ್ದು, ಈ ನೀಡಿದ ತನ್ನ ಆದೇಶದಲ್ಲಿ ಅರ್ಜಿದಾರರು ಈ ವಿಷಯದ ಬಗ್ಗೆ ಸಂಸತ್ತಿಗೆ ತಿಳಿಸುವಂತೆ ಕೇಳಿಕೊಂಡಿದೆ.ಮಹಿಳಾ ಕೇಂದ್ರಿತ
“ಕ್ಷಮಿಸಿ. ನಮಗೆ ಇದು ಇಷ್ಟವಿಲ್ಲ. ಅರ್ಜಿಯನ್ನು ವಜಾಗೊಳಿಸಲಾಗಿದೆ. ಈ ಬಗ್ಗೆ ಹೋಗಿ ಸಂಸತ್ತಿಗೆ ತಿಳಿಸಿ” ಎಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ನೇತೃತ್ವದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ಸೋಮವಾರ ತನ್ನ ಆದೇಶದಲ್ಲಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈ ಕಾನೂನುಗಳು ಪುರುಷರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಅರ್ಜಿದಾರರಾದ ಸಿಂಗ್ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದಾರೆ. “ನಾನು ಸಾರ್ವಜನಿಕ ಮನೋಭಾವದ ವ್ಯಕ್ತಿಯಾಗಿದ್ದು, ಈ ಕಾನೂನುಗಳು ಅಮಾನ್ಯವಾಗಿವೆ. ದಯವಿಟ್ಟು ಸೂಕ್ತ ನಿರ್ದೇಶನಗಳು ಅಥವಾ ಆದೇಶಗಳನ್ನು ನೀಡಿ” ಎಂದು ಅವರು ಹೇಳಿದ್ದಾರೆ.
ಅರ್ಜಿಯಲ್ಲಿ ಯಾವುದೇ ಅರ್ಹತೆಯನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎಂದು ಸುಪ್ರಿಂಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.
ವರದಕ್ಷಿಣೆ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಲ್ಲಿ (ಐಪಿಸಿ) ಮಹಿಳೆಯರ ಮೇಲಿನ ಕ್ರೌರ್ಯದ ನಿಬಂಧನೆಗೆ ಸಂಬಂಧಿಸಿದ ಕಾನೂನುಗಳ ಸಿಂಧುತ್ವವನ್ನು ಪ್ರಶ್ನಿಸಿರುವ ಸಿಂಗ್, ಈ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಸುಳ್ಳು ದೂರುಗಳನ್ನು ದಾಖಲಿಸುವ ಮಹಿಳೆಯರು ಮಾಡುವ ದೌರ್ಜನ್ಯಗಳ ವಿರುದ್ಧ ಪುರುಷರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮತ್ತು ಇತರ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದರು. ಮಹಿಳಾ ಕೇಂದ್ರಿತ
1961ರ ವರದಕ್ಷಿಣೆ ನಿಷೇಧ ಕಾಯ್ದೆಯು ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತದೆ ಮತ್ತು 2005ರ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆಯ ನಿಬಂಧನೆಗಳನ್ನು ಮಹಿಳಾ ಕೇಂದ್ರಿತ ಮತ್ತು ಪುರುಷರ ವಿರುದ್ಧ ತಾರತಮ್ಯ ಎಂದು ಅವರು ಸಲ್ಲಿಸಿರುವ ಪಿಐಎಲ್ನಲ್ಲಿ ಟೀಕಿದ್ದಾರೆ. ಸಿಂಗ್ ಅವರು ಭಾರತದ ಪ್ರಧಾನಿ, ಭಾರತ ಒಕ್ಕೂಟ (ಯುಒಐ) ಮತ್ತು ಗೃಹ ವ್ಯವಹಾರ ಸಚಿವಾಲಯ (ಎಂಎಚ್ಎ) ಅವರನ್ನು ತಮ್ಮ ಪಿಐಎಲ್ಗೆ ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.
ಇದನ್ನೂಓದಿ: ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು


