Homeಕರ್ನಾಟಕಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ 'ಹಿಂದೂ ಹುಲಿ'ಗಳೆಂದು ಬ್ಯಾನರ್‌...

ಹುಬ್ಬಳ್ಳಿ | ಗೌರಿ ಲಂಕೇಶ್, ಎಂ.ಎಂ ಕಲ್ಬುರ್ಗಿ ಹತ್ಯೆ ಆರೋಪಿಗಳಿಗೆ ‘ಹಿಂದೂ ಹುಲಿ’ಗಳೆಂದು ಬ್ಯಾನರ್‌ ಹಾಕಿ ಸ್ವಾಗತ!

- Advertisement -
- Advertisement -

ಗೌರಿ ಲಂಕೇಶ್ ಮತ್ತು ಎಂ.ಎಂ ಕಲ್ಬುರ್ಗಿ ಹತ್ಯೆ ಪ್ರಕರಣಗಳ ಆರೋಪಿಗಳಾಗಿರುವ ಅಮಿತ್ ಬದ್ಧಿ ಮತ್ತು ಗಣೇಶ್ ಮಿಸ್ಕಿನ್ ಎಂಬ ಇಬ್ಬರು ವ್ಯಕ್ತಿಗಳನ್ನು ಫೆಬ್ರವರಿ 2ರ ಭಾನುವಾರ ಅವರ ಹುಟ್ಟೂರು ಹುಬ್ಬಳ್ಳಿಯಲ್ಲಿ ಸನ್ಮಾನಿಸಲಾಗಿದೆ ಎಂದು ವರದಿಯಾಗಿದೆ.

ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ ಬೆಂಬಲಿಗರು ಬ್ಯಾನರ್ ಹಾಕಿದ್ದು, “7 ವರ್ಷಗಳ ನಂತರ ಬಿಡುಗಡೆಗೊಂಡ ಹಿಂದೂ ಹುಲಿಗಳು” ಎಂಬುವುದಾಗಿ ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ವಾರ್ತಾ ಭಾರತಿ ವರದಿ ಮಾಡಿದೆ.

ಹುಬ್ಬಳ್ಳಿಯ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾರೆ. ಈ ವೇಳೆ ಅವರ ಬೆಂಬಲಿಗರು ಇಬ್ಬರನ್ನೂ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಕುಂಬಳಕಾಯಿ ಒಡೆದು, ಮೆರವಣಿಗೆ ಮೂಲಕ ಸ್ವಾಗತ ಕೋರಿದ್ದಾರೆ.

ನಗರದ ತುಳುಜಾ ಭವಾನಿ ಮಂದಿರದ ಬಳಿಯೂ ಹತ್ಯೆ ಆರೋಪಿಗಳನ್ನು ಸ್ವಾಗತಿಸಿ ಬ್ಯಾನರ್ ಹಾಕಲಾಗಿತ್ತು. ಆದರೆ, ಅದನ್ನು ದೇವಸ್ಥಾನದ ಆಡಳಿತ ಮಂಡಳಿಯವರು ತೆಗೆದು ಹಾಕಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ಯೆ ಆರೋಪಿಗಳಿಗೆ ವಿಜಯಪುರದಲ್ಲೂ ನಡೆದಿತ್ತು ಸನ್ಮಾನ :

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾಗ, ಅಕ್ಟೋಬರ್ 2024ರಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಅವರಿಬ್ಬರನ್ನೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿದ್ದರು.

ಹತ್ಯೆ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ್ ಯಡವೆಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿತ್ತು.

2017ರ ಸೆಪ್ಟೆಂಬರ್ 5ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬಳಿಕ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ಒಟ್ಟು 25 ಜನ ಆರೋಪಿಗಳನ್ನು ಬಂಧಿಸಿತ್ತು.

ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದುಕೊಂಡು ಹೋಗಿ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾರೆ.

ಲೇಖಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಂ.ಎಂ. ಕಲಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಧಾರವಾಡದಲ್ಲಿರುವ ಅವರ ಮನೆಯಲ್ಲಿ ಇಬ್ಬರು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಗೌರಿ ಹತ್ಯೆಗೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ನಾಲ್ವರು ವ್ಯಕ್ತಿಗಳ ಮೇಲೆ ಕಲ್ಬುರ್ಗಿ ಹತ್ಯೆಗೆ ಸಂಬಂಧಿಸಿದಂತೆಯೂ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಗೌರಿ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಹೇಳಲಾಗುವ ಅಮೋಲ್ ಕಾಳೆ, ಅಮಿತ್ ಬದ್ದಿ, ಗಣೇಶ್ ಮಿಸ್ಕಿನ್ ಮತ್ತು ವಾಸುದೇವ ಸೂರ್ಯವಂಶಿ ಸೇರಿದ್ದಾರೆ.

ಅಮಿತ್ ಬದ್ದಿ ಗೌರಿಯವರ ಮೇಲೆ ನಿಗಾ ಇರಿಸಿ ಕೊಲೆ ಮಾಡಲು ಬಳಸಿದ್ದ ಆಯುಧಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ. ಗಣೇಶ್ ಮಿಸ್ಕಿನ್ ಪರಶುರಾಮ್ ವಾಘ್ಮೋರೆಯನ್ನು ಗೌರಿಯ ಮನೆಗೆ ಕರೆದೊಯ್ದು ಅಲ್ಲಿ ಗುಂಡು ಹಾರಿಸಿದ ವ್ಯಕ್ತಿ. ವಾಸುದೇವ್ ಸೂರ್ಯವಂಶಿ ವಿರುದ್ದ ಮಿಸ್ಕಿನ್ ಮತ್ತು ವಾಘ್ಮೋರೆ ಬಳಸಿದ್ದ ಬೈಕ್ ಕಳವು ಮಾಡಿದ ಆರೋಪವಿದೆ.

‘ಮುಖ್ಯವಾಹಿನಿ ಎಂದರೆ ಶಸ್ತ್ರಾಸ್ತ್ರ ಹೋರಾಟದ ದಾರಿಯಿಂದ ಪ್ರಜಾತಾಂತ್ರಿಕ ಹೋರಾಟಕ್ಕೆ ಮರಳುವುದು’: ನೂರ್ ಶ್ರೀಧರ್ ಅವರೊಂದಿಗೆ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...