Homeಮುಖಪುಟಅಯೋಧ್ಯೆ | ದಲಿತ ಯುವತಿಯ ಕೊಲೆ ಪ್ರಕರಣ; ಮೂವರ ಬಂಧನ

ಅಯೋಧ್ಯೆ | ದಲಿತ ಯುವತಿಯ ಕೊಲೆ ಪ್ರಕರಣ; ಮೂವರ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದ ದಲಿತ ಯುವತಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಿಗ್ವಿಜಯ್ ಮತ್ತು ಅವರ ಸಹಚರರಾದ ವಿಜಯ್ ಸಾಹು ಮತ್ತು ಹರಿರಾಮ್ ಕೋರಿ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆರೋಪಿ ದಿಗ್ವಿಜಯ್ ಸಂತ್ರಸ್ತ ಯುವತಿಯ ಹುಟ್ಟೂರು ಸಹ್ನಾವಾ ಮೂಲದವರು ಎಂದು ಎಸ್‌ಎಸ್‌ಪಿ ರಾಜ್‌ಕರಣ್ ನಯ್ಯರ್ ಅವರು ಹೇಳಿದ್ದಾರೆ. ಅಯೋಧ್ಯೆ

ಸಂತ್ರಸ್ತೆಯು ಆರೋಪಿ ದಿಗ್ವಿಜಯ್ ಜೊತೆ ಸ್ನೇಹದೊಂದಿಗೆ ಇದ್ದರು ಎಂದು ವರದಿಯಾಗಿದೆ. ಅವರ ನಡುವಿನ ಸ್ನೇಹ ಸಂಬಂಧವು ಯುವತಿಯ ಸಹೋದರನಿಗೆ ಎರಡು ತಿಂಗಳ ಹಿಂದೆ ಗೊತ್ತಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತ ಯುವತಿಯ ಸಹೋದರನು ಆರೋಪಿ ದಿಗ್ವಿಜಯ್‌ಗೆ ಹಲ್ಲೆ ನಡೆಸಿ ತನ್ನ ಸಹೋದರಿಯಿಂದ ದೂರವಿರಲು ಎಚ್ಚರಿಸಿದ್ದರು. ಈ ಘಟನೆಯಿಂದ ಅವಮಾನಿತನಾಗಿದ್ದ ದಿಗ್ವಿಜಯ್, ಸೇಡು ತೀರಿಸಿಕೊಳ್ಳಲು ಯುವತಿಯನ್ನು ಕೊಂದಿದ್ದಾನೆ ಎಂದು TNIE ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

22 ವರ್ಷದ ದಲಿತ ಯುವತಿಯು ಗುರುವಾರ ರಾತ್ರಿಯಿಂದ ಕಾಣೆಯಾಗಿದ್ದರು. ಶನಿವಾರ ಬೆಳಿಗ್ಗೆ ಅವರ ಮೃತದೇಹವು ಗ್ರಾಮದ ಹೊರಗಿನ ಒಣಗಿದ ಕಾಲುವೆಯಲ್ಲಿ ಪತ್ತೆಯಾಗಿತ್ತು. ಈ ವೇಳೆ ಮೃತದೇಹದಲ್ಲಿ ಹಲವಾರು ಗಾಯಗಳು ಕಂಡುಬಂದಿದ್ದು, ನಗ್ನ ದೇಹದ ಕೈಕಾಲುಗಳು ಮುರಿತಕ್ಕೊಳಗಾಗಿ, ಶರೀರವೂ ಛಿದ್ರಗೊಂಡಿತ್ತು ಎಂದು ವರದಿಗಳು ಉಲ್ಲೇಖಿಸಿವೆ. ಅಯೋಧ್ಯೆ

ಯುವತಿಯ ಕುಟುಂಬ ಮತ್ತು ಗ್ರಾಮಸ್ಥರು ಕೂಡಾ ಘಟನೆಯನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಎಂದು ಶಂಕಿಸಿದ್ದಾರೆ. ನಾಪತ್ತೆಯಾದ ಯುವತಿಯ ಬಗ್ಗೆ ಯಾವುದೇ ಸುಳಿವು ಸಿಗದಿದ್ದಾಗ, ಅವರ ಕುಟುಂಬಿಕರು ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಶುಕ್ರವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿದ್ದಾರೆ. ಈ ಮಧ್ಯೆ, ಸಂತ್ರಸ್ತ ಯುವತಿಯ ನಗ್ನ ಮೃತದೇಹವನ್ನು ಯುವತಿಯ ಅಕ್ಕನ ಪತಿ ಗ್ರಾಮದ ಹೊರಗಿನ ಒಣಗಿದ ಚರಂಡಿಯಲ್ಲಿ ಕಂಡುಕೊಂಡಿದ್ದರು.

ಯುವತಿಯ ಕೈಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು, ಇಡೀ ದೇಹದ ಮೇಲೆ ಗಾಯದ ಗುರುತುಗಳಿದ್ದವು ಮತ್ತು ಆಕೆಯ ಬಟ್ಟೆಗಳು ರಕ್ತದಲ್ಲಿ ತೊಯ್ದಿದ್ದು ಮೃತದೇಹದಿಂದ ಸ್ವಲ್ಪ ದೂರದಲ್ಲಿ ಕಂಡುಬಂದಿತ್ತು. ಪ್ರಾಥಮಿಕವಾಗಿ ಇದು ಕೊಲೆ ಪ್ರಕರಣದಂತೆ ಕಂಡುಬಂದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ಶರ್ಮಾ ಶನಿವಾರ ತಿಳಿಸಿದ್ದರು.

ಇದನ್ನೂಓದಿ:  ಅಯೋಧ್ಯೆ | ದಲಿತ ಯುವತಿಯ ನಗ್ನ ಶವ ಪತ್ತೆ; ಸಾಮೂಹಿಕ ಅತ್ಯಾಚಾರ, ಕೊಲೆ ಶಂಕೆ

ಅಯೋಧ್ಯೆ | ದಲಿತ ಯುವತಿಯ ನಗ್ನ ಶವ ಪತ್ತೆ; ಸಾಮೂಹಿಕ ಅತ್ಯಾಚಾರ, ಕೊಲೆ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...