Homeಮುಖಪುಟಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ - ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

ಹಿಂದೂ ಧರ್ಮದ ರಕ್ಷಣೆಗೆ 5 ಮಕ್ಕಳನ್ನು ಹೊಂದಿ – ಸರ್ಕಾರಿ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ನಾಯಕ

- Advertisement -
- Advertisement -

ಮಧ್ಯಪ್ರದೇಶದ ರಾಜ್ಯ ಸಚಿವ ಸ್ಥಾನಮಾನವಿರುವ ಬ್ರಾಹ್ಮಣ ಜಾತಿಯ ನಾಯಕನೊಬ್ಬ ತನ್ನ ಜಾತಿಯ ನವವಿವಾಹಿತ ದಂಪತಿಗಳಿಗೆ ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ.ಗಳನ್ನು ಪಡೆಯುವಂತೆ ಮನವಿ ಮಾಡಿದ ಒಂದು ತಿಂಗಳ ನಂತರ, ಅದೇ ರಾಜ್ಯದ ಮತ್ತೊಬ್ಬ ಜಾತಿಯ ನಾಯಕ ತನ್ನ ಸಮುದಾಯದ ನವವಿವಾಹಿತ ದಂಪತಿಗಳಿಗೆ ‘ಹಮ್ ದೋ ಹುಮಾರೆ ಪಾಂಚ್’ (ನಾವು ಇಬ್ಬರು ನಮ್ಮದು ಐದು) ಎಂಬ ಘೋಷಣೆಯನ್ನು ನೀಡಿದ್ದಾರೆ. ಹಿಂದೂ ಧರ್ಮದ

ಭಾನುವಾರ ನೈಋತ್ಯ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿಯಲ್ಲಿ ತಮ್ಮ ಮಾಝಿ-ಕಹಾರ್ ಜಾತಿಯ 201 ಆರ್ಥಿಕವಾಗಿ ದುರ್ಬಲ ದಂಪತಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ಮಾಡಿದ್ದಾರೆ. ಮಾಝಿ – ಕಹಾರ್ ಜಾತಿಯ ಖಾರ್ಗೋನ್ ಜಿಲ್ಲಾ ಅಧ್ಯಕ್ಷರಾಗಿರುವ ನರೇಂದ್ರ ವರ್ಮಾ, ಐದು ಮಕ್ಕಳಿಗೆ ಜನ್ಮ ನೀಡುವ ತಮ್ಮ ಜಾತಿಯ ಎಲ್ಲಾ ದಂಪತಿಗಳಿಗೆ 1 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಮುಖ ವಿಚಾರ ಏನೆಂದರೆ, ವರ್ಮಾ ಘೋಷಣೆ ಮಾಡಿರುವ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡ ಜಿಲ್ಲಾ ಬಿಜೆಪಿ ಅಧ್ಯಕ್ಷೆ ನಂದಾ ಬ್ರಹ್ಮಣೆ ಮತ್ತು ನಗರ ಪುರಸಭೆಯ ಅಧ್ಯಕ್ಷೆ ಛಾಯಾ ಜೋಶಿ ಸೇರಿದಂತೆ ಜಿಲ್ಲೆಯ ಹಿರಿಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

“1990 ರ ದಶಕದಿಂದ ರಾಜಕೀಯ ಪಕ್ಷಗಳು ‘ಹಮ್ ದೋ ಹುಮಾರೆ ದೋ’ ಮತ್ತು ‘ಶೇರ್ ಕಾ ಬಚ್ಚಾ ಏಕ್ ಹೈ ಅಚ್ಚಾ’ ಮುಂತಾದ ಘೋಷಣೆಗಳ ಮೂಲಕ ನಮ್ಮ ಸಂಪ್ರದಾಯಗಳನ್ನು ಹಾಳುಮಾಡುತ್ತಿದ್ದಾರೆ. ಇಂತಹ ಘೋಷಣೆಗಳನ್ನು ಅನುಸರಿಸುವ ಮೂಲಕ, ಮಾಝಿ-ಕಹಾರ್ ಜಾತಿ ಸೇರಿದಂತೆ ಇಡೀ ಹಿಂದೂ ಸಮುದಾಯವು ಭವಿಷ್ಯದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾವು ನಮ್ಮ ಜಾತಿಗೆ ‘ಹಮ್ ದೋ ಹುಮಾರೆ ಪಾಂಚ್’ ಎಂಬ ಘೋಷಣೆಯನ್ನು ನೀಡುತ್ತಿದ್ದೇವೆ. ಈ ಘೋಷಣೆಯು ನಮ್ಮ ಆಚರಣೆಗಳು ಮುಂದುವರಿಯಲು ಸಹ ಸಹಾಯ ಮಾಡುತ್ತದೆ” ಎಂದು ವರ್ಮಾ ಹೊಸ ಖಾರ್ಗೋನ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ನಂದ ಬ್ರಹ್ಮಣೆ ಅವರೊಂದಿಗೆ ಹೇಳಿದ್ದಾರೆ. ಹಿಂದೂ ಧರ್ಮದ

“ಹಿಂದೂ ಧರ್ಮ ಮತ್ತು ಇಡೀ ಸನಾತನ ಸಮಾಜವನ್ನು ರಕ್ಷಿಸಲು ಇಂತಹ ಘೋಷಣೆಗಳು ಅವಶ್ಯಕ. ನಮ್ಮ ಎಲ್ಲಾ ಮಹಾಪುರುಷರು (ಮಹಾನ್ ಪುರುಷರು) ತಮ್ಮ ಪೋಷಕರ ಐದನೇ, ಆರನೇ ಅಥವಾ ಏಳನೇ ಮಗುವಾಗಿದ್ದಾರೆ. ಸ್ವಾಮಿ ವಿವೇಕಾನಂದರು ಅವರ ಪೋಷಕರ ಐದನೇ ಮಗು. ಹಾಗಾದರೆ ನಮಗೆ ಕನಿಷ್ಠ ಐದು ಮಕ್ಕಳಿಲ್ಲದಿದ್ದರೆ ನಾವು ನಮ್ಮ ಮಹಾಪುರುಷರನ್ನು (ಮಹಾನ್ ಪುರುಷರು) ಎಲ್ಲಿಂದ ಪಡೆಯುತ್ತೇವೆ” ಎಂದು ವರ್ಮಾ ಕೇಳಿದ್ದಾರೆ.

ಇದಕ್ಕೂ ಮೊದಲು, ಜನವರಿ 12 ರಂದು, ಬ್ರಾಹ್ಮಣ ಜಾತಿ ನಾಯಕ ಮತ್ತು ರಾಜ್ಯ ಸರ್ಕಾರದ ಪರಶುರಾಮ ಕಲ್ಯಾಣ ಮಂಡಳಿಯ ಮುಖ್ಯಸ್ಥ ವಿಷ್ಣು ರಾಜೋರಿಯಾ ಅವರು ನವವಿವಾಹಿತ ಬ್ರಾಹ್ಮಣ ದಂಪತಿಗಳಿಗೆ “ನಾಲ್ಕು ಮಕ್ಕಳನ್ನು ಹೆತ್ತು 1 ಲಕ್ಷ ರೂ. ಬಹುಮಾನ ಪಡೆಯಿರಿ” ಎಂದು ಮನವಿ ಮಾಡಿದ್ದರು. ಜನವರಿ 12 ರಂದು ಇಂದೋರ್‌ನಲ್ಲಿ ನಡೆದ ಸನಧ್ಯ ಬ್ರಾಹ್ಮಣ ಸಮಾಜ ವಿವಾಹ ಪರಿಚಯ ಸಮ್ಮೇಳನದಲ್ಲಿ ರಾಜ್ಯ ಸಚಿವ ಸ್ಥಾನಮಾನ ಇರುವ ರಾಜೋರಿಯಾ ಅವರು ಈ ಮನವಿಯನ್ನು ಮಾಡಿದ್ದರು.

ದೇಶದಲ್ಲಿ ಹಿಂದೂಯೇತರ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಎಂದು ಹೇಳಿಕೊಂಡ ಅವರು, ಇಂದೋರ್‌ನಲ್ಲಿ ನಡೆದ ಬ್ರಾಹ್ಮಣರ ಸಭೆಯಲ್ಲಿ ಹಾಜರಿದ್ದ ಯುವಕರು ತಮ್ಮ ಮುಂಬರುವ ಪೀಳಿಗೆಯ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಅವರು ಒತ್ತಾಯಿಸಿದ್ದರು.

ಮಾರ್ಚ್ 2023 ರಲ್ಲಿ, ಹಿಂದೂ ರಾಷ್ಟ್ರ ಬೆಂಬಲಿತ ಧಾರ್ಮಿಕ ಬೋಧಕ ಧೀರೇಂದ್ರ ಕೃಷ್ಣ ಶಾಸ್ತ್ರಿ ‘ಬಾಗೇಶ್ವರ ಬಾಬಾ’ ಕೂಡ ಹಿಂದೂಗಳು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕೆಂದು ಮನವಿ ಮಾಡಿದ್ದರು. ಒತೆಗೆ ಈ ನಾಲ್ಕು ಮಕ್ಕಳಲ್ಲಿ ಇಬ್ಬರನ್ನು ರಾಷ್ಟ್ರ ಮತ್ತು ಭಗವಾನ್ ರಾಮನ ಸೇವೆಗಾಗಿ ಬಿಡಬೇಕು ಎಂದು ಹೇಳಿದ್ದರು.

ಅಲ್ಲದೆ, ಜುಲೈ 2024 ರಲ್ಲಿ, ಪಂಚಾಯತಿ ನಿರಂಜನಿ ಅಖಾಡದ ಮಹಾಮಂಡಲೇಶ್ವರ ಎಂಬ ಹಿಂದೂ ಧರ್ಮಗುರು ಸ್ವಾಮಿ ಪ್ರೇಮಾನಂದ ಮಹಾರಾಜ್ ಅವರು ಪ್ರತಿಯೊಬ್ಬ ಹಿಂದೂ ಮಹಿಳೆಯೂ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಬೇಕೆಂದು ಕೇಳಿಕೊಂಡಿದ್ದರು.

ಇದನ್ನೂಓದಿ:  ಕೇರಳ | ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ಕೇರಳ| ನಿರಂತರ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...