Homeಮುಖಪುಟಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

ಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

- Advertisement -
- Advertisement -

ಬೆಂಗಳೂರಿನಲ್ಲಿರುವ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಭಾರತ ಸರ್ಕಾರ ವೀಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಭಾನುವಾರ (ಫೆ.3) ಆರೋಪಿಸಿದ್ದಾರೆ.

ಅಮೆರಿಕಲ್ಲಿ ವಾಸವಿರುವ ಸಾವಂತ್ ಅವರು 2013ರಿಂದ 2023 ರವರೆಗೆ, ಅಲ್ಲಿನ ಸಿಯಾಟಲ್ ಸಿಟಿ ಕೌನ್ಸಿಲ್‌ನಲ್ಲಿ ಚುನಾಯಿತ ಪ್ರತಿನಿಧಿಯಾಗಿದ್ದರು.

ಫೆಬ್ರವರಿ 2023ರಲ್ಲಿ, ಸಾವಂತ್ ಅವರು ಮಂಡಿಸಿದ ನಿರ್ಣಯ ಅಂಗೀಕಾರ ಪಡೆಯುವ ಮೂಲಕ, ಸಿಯಾಟಲ್ ಜಾತಿ ಆಧಾರಿತ ತಾರತಮ್ಯವನ್ನು ನಿಷೇಧಿಸಿದ ಮೊದಲ ಅಮೆರಿಕನ್ ನಗರ ಎನಿಸಿಕೊಂಡಿತ್ತು.

ತನ್ನ ವೀಸಾ ನಿರಾಕರಣೆಯನ್ನು “ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ರಾಜಕೀಯ ಪ್ರತೀಕಾರ” ಎಂದು ಸಾವಂತ್ ಆರೋಪಿಸಿದ್ದಾರೆ. ಈ ಕ್ರಮವನ್ನು ಪ್ರತಿಭಟಿಸಿ ಭಾರತ ಸರ್ಕಾರದ ವಿರುದ್ದ ಅವರು ಆನ್‌ಲೈನ್ ದೂರು ಆರಂಭಿಸಿದ್ದಾರೆ.

“ಮೋದಿ ಇತರ ಹೋರಾಟಗಾರರು ಮತ್ತು ಪತ್ರಕರ್ತರ ವಿರುದ್ಧವೂ ಇದೇ ರೀತಿ ಸೇಡು ತೀರಿಸಿಕೊಂಡಿದ್ದಾರೆ. ಭಾರತಕ್ಕೆ ಪ್ರವೇಶ ನಿರಾಕರಿಸಿದ್ದಾರೆ ಅಥವಾ ರದ್ದುಗೊಳಿಸಿದ್ದಾರೆ” ಎಂದು ಸಾವಂತ್ ದೂರಿದ್ದಾರೆ. ತನ್ನ 82 ವರ್ಷದ ತಾಯಿಯ ಆರೋಗ್ಯವು ವೇಗವಾಗಿ ಕ್ಷೀಣಿಸುತ್ತಿದೆ ಎಂದಿದ್ದಾರೆ.

“ಕ್ಷಮಾ ಸಾವಂತ್ ಮತ್ತು ಅವರ ಪತಿ ಕ್ಯಾಲ್ವಿನ್ ಪ್ರೀಸ್ಟ್ ಅವರಿಗೆ ಭಾರತಕ್ಕೆ ಪ್ರಯಾಣಿಸಲು ಮತ್ತು ಕ್ಷಮಾ ಅವರಿಗೆ ತಾಯಿಯನ್ನು ಭೇಟಿ ಮಾಡಲು ಸಾಧ್ಯವಾಗುವಂತೆ ಮಾನವೀಯ ನೆಲೆಯಲ್ಲಿ ತುರ್ತಾಗಿ ವೀಸಾ ಮಂಜೂರು ಮಾಡುವಂತೆ ನಾವು ಮೋದಿ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಆನ್‌ಲೈನ್‌ ದೂರಿನಲ್ಲಿ ಹೇಳಲಾಗಿದೆ.

ಯಾವುದೇ ವಿವರಣೆ ನೀಡದೆ ಸಾವಂತ್ ಅವರಿಗೆ ಮೂರು ಬಾರಿ ಭಾರತ ವೀಸಾವನ್ನು ನಿರಾಕರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಸಲ್ಲಿಸಿದ ಮನವಿಯನ್ನೂ ತಿರಸ್ಕರಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಆ ಸಮಯದಲ್ಲಿ, ಕ್ಷಮಾ ಅವರು ಮೋದಿ ಮತ್ತು ಬಿಜೆಪಿ ಸರ್ಕಾರದ ಮುಸ್ಲಿಂ ವಿರೋಧಿ, ಬಡವರ ವಿರೋಧಿ ಸಿಎಎ-ಎನ್‌ಆರ್‌ಸಿ [ಪೌರತ್ವ ತಿದ್ದುಪಡಿ ಕಾಯ್ದೆ-ನಾಗರಿಕರ ರಾಷ್ಟ್ರೀಯ ನೋಂದಣಿ] ಕಾನೂನುಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದರು ಮತ್ತು ಮೋದಿಯವರ ಕ್ರೂರ ಮತ್ತು ಶೋಷಣಾ ನೀತಿಗಳ ವಿರುದ್ಧ ರೈತರ ಚಳವಳಿಗೆ ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದರು” ಎಂದು ದೂರಿನಲ್ಲಿ ಹೇಳಲಾಗಿದೆ.

ಜನವರಿಯಲ್ಲಿ, ಸ್ವೀಡಿಷ್ ಭಾರತೀಯ ಮೂಲದ ಪ್ರಾಧ್ಯಾಪಕ ಅಶೋಕ್ ಸ್ವೈನ್ ಅವರು ತಮ್ಮ ಸಾಗರೋತ್ತರ ಭಾರತೀಯ ನಾಗರಿಕ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸುವಂತೆ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಸಾಗರೋತ್ತರ ಪೌರತ್ವವು ವಲಸೆ ಸ್ಥಾನಮಾನವಾಗಿದ್ದು, ಇದು ಭಾರತೀಯ ಮೂಲದ ವಿದೇಶಿಯರು ಭಾರತದಲ್ಲಿ ಅನಿರ್ದಿಷ್ಟವಾಗಿ ವಾಸಿಸಲು ಮತ್ತು ಕೆಲಸ ಮಾಡಲು ಅನುವು ಮಾಡಿಕೊಡುತ್ತದೆ. ರದ್ದತಿಯು ಅವರು ಭಾರತಕ್ಕೆ ಮರುಳುವುದನ್ನು ನಿರ್ಬಂಧಿಸುತ್ತದೆ.

ಸ್ವೈನ್ ಅವರು ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮತ್ತು ಐದು ವರ್ಷಗಳಿಂದ ಭೇಟಿಯಾಗಲು ಸಾಧ್ಯವಾಗದ ತನ್ನ 82 ವರ್ಷದ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗುವ ಮನವಿಯನ್ನು ಸ್ವೈನ್ ಮುಂದಿಟ್ಟಿದ್ದಾರೆ.

ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ಭದ್ರತೆಯ ಹಿತಾಸಕ್ತಿಗಳಿಗೆ ವಿರುದ್ಧವಾದ “ಕಾನೂನುಬಾಹಿರ ಚಟುವಟಿಕೆಗಳಲ್ಲಿ” ತೊಡಗಿರುವುದು ಕಂಡುಬಂದಿದೆ ಎಂಬ ಆಧಾರದ ಮೇಲೆ ಕೇಂದ್ರ ಸರ್ಕಾರವು ಜುಲೈ 2023ರಲ್ಲಿ ಸ್ವೈನ್ ಅವರ ಸಾಗರೋತ್ತರ ಪೌರತ್ವ ನೋಂದಣಿಯನ್ನು ರದ್ದುಗೊಳಿಸಿತ್ತು.

ಫೆಬ್ರವರಿ 2024ರಲ್ಲಿ, ಭಾರತೀಯ ಮೂಲದ ಬ್ರಿಟಿಷ್ ಬರಹಗಾರ್ತಿ ಮತ್ತು ಲಂಡನ್‌ನ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದ ರಾಜಕೀಯ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು, “ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಮಾತನಾಡಿದ್ದಕ್ಕಾಗಿ” ಕೇಂದ್ರ ಸರ್ಕಾರದ ಆದೇಶದ ಮೇರೆಗೆ ದೇಶಕ್ಕೆ ಪ್ರವೇಶ ನಿರಾಕರಿಸಲಾಯಿತು ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಯಿತು ಎಂದು ಆರೋಪಿಸಿದ್ದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವ” ಎಂಬ ವಿಷಯದ ಕುರಿತು ಮಾತನಾಡಲು ಕೌಲ್ ಅವರನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶಕ್ಕೆ ಆಹ್ವಾನಿಸಿತ್ತು. ಕೌಲ್ ಅವರು ಬೆಂಗಳೂರಿಗೆ ಬಂದಿಳಿದ ನಂತರ, ಮಾನ್ಯ ವೀಸಾ ಹೊಂದಿದ್ದರೂ ವಿಮಾನ ನಿಲ್ದಾಣದಿಂದ ಹೊರಹೋಗಲು ಅವರಿಗೆ ಅನುಮತಿ ನಿರಾಕರಿಸಲಾಗಿತ್ತು.

ಭಾರತದ ಸಾಗರೋತ್ತರ ನಾಗರಿಕರಾಗಿರುವ ಕೌಲ್, ಭಾರತದ ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾತೃ ಪಕ್ಷವಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಟೀಕೆಗೆ ಗುರಿಯಾಗಿದ್ದರು. 2019ರಲ್ಲಿ, ಅವರು ಯುಎಸ್ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯ ಮುಂದೆ ಸಾಕ್ಷ್ಯ ನುಡಿದು, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದರು.

ಆಗಸ್ಟ್ 2022ರಲ್ಲಿ, ಅಮೆರಿಕ ಮೂಲದ ಪತ್ರಕರ್ತ ಅಂಗದ್ ಸಿಂಗ್ ಅವರು ಪಂಜಾಬ್‌ನಲ್ಲಿರುವ ತಮ್ಮ ಕುಟುಂಬವನ್ನು ಭೇಟಿ ಮಾಡಲು ನ್ಯೂಯಾರ್ಕ್‌ನಿಂದ ಆಗಮಿಸಿದ್ದಾಗ ದೆಹಲಿ ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಜನವರಿ 2023ರಲ್ಲಿ, ಸಿಂಗ್ ಅವರ ಸಾಕ್ಷ್ಯಚಿತ್ರ “ಇಂಡಿಯಾ ಬರ್ನಿಂಗ್” ಭಾರತದ ಜಾತ್ಯತೀತತೆಯ ಬಗ್ಗೆ ಅತ್ಯಂತ ನಕಾರಾತ್ಮಕ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದ ಕಾರಣ ಭಾರತಕ್ಕೆ ಭೇಟಿ ನೀಡದಂತೆ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್‌ ಮುಂದೆ ಸಮರ್ಥಿಸಿಕೊಂಡಿತ್ತು.

ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...