Homeಮುಖಪುಟಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

ಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

- Advertisement -
- Advertisement -

ಬೆಂಗಳೂರಿನಲ್ಲಿರುವ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಭಾರತ ಸರ್ಕಾರ ವೀಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಭಾನುವಾರ (ಫೆ.3) ಆರೋಪಿಸಿದ್ದಾರೆ.

ಅಮೆರಿಕಲ್ಲಿ ವಾಸವಿರುವ ಸಾವಂತ್ ಅವರು 2013ರಿಂದ 2023 ರವರೆಗೆ, ಅಲ್ಲಿನ ಸಿಯಾಟಲ್ ಸಿಟಿ ಕೌನ್ಸಿಲ್‌ನಲ್ಲಿ ಚುನಾಯಿತ ಪ್ರತಿನಿಧಿಯಾಗಿದ್ದರು.

ಫೆಬ್ರವರಿ 2023ರಲ್ಲಿ, ಸಾವಂತ್ ಅವರು ಮಂಡಿಸಿದ ನಿರ್ಣಯ ಅಂಗೀಕಾರ ಪಡೆಯುವ ಮೂಲಕ, ಸಿಯಾಟಲ್ ಜಾತಿ ಆಧಾರಿತ ತಾರತಮ್ಯವನ್ನು ನಿಷೇಧಿಸಿದ ಮೊದಲ ಅಮೆರಿಕನ್ ನಗರ ಎನಿಸಿಕೊಂಡಿತ್ತು.

ತನ್ನ ವೀಸಾ ನಿರಾಕರಣೆಯನ್ನು “ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ರಾಜಕೀಯ ಪ್ರತೀಕಾರ” ಎಂದು ಸಾವಂತ್ ಆರೋಪಿಸಿದ್ದಾರೆ. ಈ ಕ್ರಮವನ್ನು ಪ್ರತಿಭಟಿಸಿ ಭಾರತ ಸರ್ಕಾರದ ವಿರುದ್ದ ಅವರು ಆನ್‌ಲೈನ್ ದೂರು ಆರಂಭಿಸಿದ್ದಾರೆ.

“ಮೋದಿ ಇತರ ಹೋರಾಟಗಾರರು ಮತ್ತು ಪತ್ರಕರ್ತರ ವಿರುದ್ಧವೂ ಇದೇ ರೀತಿ ಸೇಡು ತೀರಿಸಿಕೊಂಡಿದ್ದಾರೆ. ಭಾರತಕ್ಕೆ ಪ್ರವೇಶ ನಿರಾಕರಿಸಿದ್ದಾರೆ ಅಥವಾ ರದ್ದುಗೊಳಿಸಿದ್ದಾರೆ” ಎಂದು ಸಾವಂತ್ ದೂರಿದ್ದಾರೆ. ತನ್ನ 82 ವರ್ಷದ ತಾಯಿಯ ಆರೋಗ್ಯವು ವೇಗವಾಗಿ ಕ್ಷೀಣಿಸುತ್ತಿದೆ ಎಂದಿದ್ದಾರೆ.

“ಕ್ಷಮಾ ಸಾವಂತ್ ಮತ್ತು ಅವರ ಪತಿ ಕ್ಯಾಲ್ವಿನ್ ಪ್ರೀಸ್ಟ್ ಅವರಿಗೆ ಭಾರತಕ್ಕೆ ಪ್ರಯಾಣಿಸಲು ಮತ್ತು ಕ್ಷಮಾ ಅವರಿಗೆ ತಾಯಿಯನ್ನು ಭೇಟಿ ಮಾಡಲು ಸಾಧ್ಯವಾಗುವಂತೆ ಮಾನವೀಯ ನೆಲೆಯಲ್ಲಿ ತುರ್ತಾಗಿ ವೀಸಾ ಮಂಜೂರು ಮಾಡುವಂತೆ ನಾವು ಮೋದಿ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಆನ್‌ಲೈನ್‌ ದೂರಿನಲ್ಲಿ ಹೇಳಲಾಗಿದೆ.

ಯಾವುದೇ ವಿವರಣೆ ನೀಡದೆ ಸಾವಂತ್ ಅವರಿಗೆ ಮೂರು ಬಾರಿ ಭಾರತ ವೀಸಾವನ್ನು ನಿರಾಕರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಸಲ್ಲಿಸಿದ ಮನವಿಯನ್ನೂ ತಿರಸ್ಕರಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಆ ಸಮಯದಲ್ಲಿ, ಕ್ಷಮಾ ಅವರು ಮೋದಿ ಮತ್ತು ಬಿಜೆಪಿ ಸರ್ಕಾರದ ಮುಸ್ಲಿಂ ವಿರೋಧಿ, ಬಡವರ ವಿರೋಧಿ ಸಿಎಎ-ಎನ್‌ಆರ್‌ಸಿ [ಪೌರತ್ವ ತಿದ್ದುಪಡಿ ಕಾಯ್ದೆ-ನಾಗರಿಕರ ರಾಷ್ಟ್ರೀಯ ನೋಂದಣಿ] ಕಾನೂನುಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದರು ಮತ್ತು ಮೋದಿಯವರ ಕ್ರೂರ ಮತ್ತು ಶೋಷಣಾ ನೀತಿಗಳ ವಿರುದ್ಧ ರೈತರ ಚಳವಳಿಗೆ ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದರು” ಎಂದು ದೂರಿನಲ್ಲಿ ಹೇಳಲಾಗಿದೆ.

ಜನವರಿಯಲ್ಲಿ, ಸ್ವೀಡಿಷ್ ಭಾರತೀಯ ಮೂಲದ ಪ್ರಾಧ್ಯಾಪಕ ಅಶೋಕ್ ಸ್ವೈನ್ ಅವರು ತಮ್ಮ ಸಾಗರೋತ್ತರ ಭಾರತೀಯ ನಾಗರಿಕ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸುವಂತೆ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಸಾಗರೋತ್ತರ ಪೌರತ್ವವು ವಲಸೆ ಸ್ಥಾನಮಾನವಾಗಿದ್ದು, ಇದು ಭಾರತೀಯ ಮೂಲದ ವಿದೇಶಿಯರು ಭಾರತದಲ್ಲಿ ಅನಿರ್ದಿಷ್ಟವಾಗಿ ವಾಸಿಸಲು ಮತ್ತು ಕೆಲಸ ಮಾಡಲು ಅನುವು ಮಾಡಿಕೊಡುತ್ತದೆ. ರದ್ದತಿಯು ಅವರು ಭಾರತಕ್ಕೆ ಮರುಳುವುದನ್ನು ನಿರ್ಬಂಧಿಸುತ್ತದೆ.

ಸ್ವೈನ್ ಅವರು ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮತ್ತು ಐದು ವರ್ಷಗಳಿಂದ ಭೇಟಿಯಾಗಲು ಸಾಧ್ಯವಾಗದ ತನ್ನ 82 ವರ್ಷದ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗುವ ಮನವಿಯನ್ನು ಸ್ವೈನ್ ಮುಂದಿಟ್ಟಿದ್ದಾರೆ.

ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ಭದ್ರತೆಯ ಹಿತಾಸಕ್ತಿಗಳಿಗೆ ವಿರುದ್ಧವಾದ “ಕಾನೂನುಬಾಹಿರ ಚಟುವಟಿಕೆಗಳಲ್ಲಿ” ತೊಡಗಿರುವುದು ಕಂಡುಬಂದಿದೆ ಎಂಬ ಆಧಾರದ ಮೇಲೆ ಕೇಂದ್ರ ಸರ್ಕಾರವು ಜುಲೈ 2023ರಲ್ಲಿ ಸ್ವೈನ್ ಅವರ ಸಾಗರೋತ್ತರ ಪೌರತ್ವ ನೋಂದಣಿಯನ್ನು ರದ್ದುಗೊಳಿಸಿತ್ತು.

ಫೆಬ್ರವರಿ 2024ರಲ್ಲಿ, ಭಾರತೀಯ ಮೂಲದ ಬ್ರಿಟಿಷ್ ಬರಹಗಾರ್ತಿ ಮತ್ತು ಲಂಡನ್‌ನ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದ ರಾಜಕೀಯ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು, “ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಮಾತನಾಡಿದ್ದಕ್ಕಾಗಿ” ಕೇಂದ್ರ ಸರ್ಕಾರದ ಆದೇಶದ ಮೇರೆಗೆ ದೇಶಕ್ಕೆ ಪ್ರವೇಶ ನಿರಾಕರಿಸಲಾಯಿತು ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಯಿತು ಎಂದು ಆರೋಪಿಸಿದ್ದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವ” ಎಂಬ ವಿಷಯದ ಕುರಿತು ಮಾತನಾಡಲು ಕೌಲ್ ಅವರನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶಕ್ಕೆ ಆಹ್ವಾನಿಸಿತ್ತು. ಕೌಲ್ ಅವರು ಬೆಂಗಳೂರಿಗೆ ಬಂದಿಳಿದ ನಂತರ, ಮಾನ್ಯ ವೀಸಾ ಹೊಂದಿದ್ದರೂ ವಿಮಾನ ನಿಲ್ದಾಣದಿಂದ ಹೊರಹೋಗಲು ಅವರಿಗೆ ಅನುಮತಿ ನಿರಾಕರಿಸಲಾಗಿತ್ತು.

ಭಾರತದ ಸಾಗರೋತ್ತರ ನಾಗರಿಕರಾಗಿರುವ ಕೌಲ್, ಭಾರತದ ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾತೃ ಪಕ್ಷವಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಟೀಕೆಗೆ ಗುರಿಯಾಗಿದ್ದರು. 2019ರಲ್ಲಿ, ಅವರು ಯುಎಸ್ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯ ಮುಂದೆ ಸಾಕ್ಷ್ಯ ನುಡಿದು, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದರು.

ಆಗಸ್ಟ್ 2022ರಲ್ಲಿ, ಅಮೆರಿಕ ಮೂಲದ ಪತ್ರಕರ್ತ ಅಂಗದ್ ಸಿಂಗ್ ಅವರು ಪಂಜಾಬ್‌ನಲ್ಲಿರುವ ತಮ್ಮ ಕುಟುಂಬವನ್ನು ಭೇಟಿ ಮಾಡಲು ನ್ಯೂಯಾರ್ಕ್‌ನಿಂದ ಆಗಮಿಸಿದ್ದಾಗ ದೆಹಲಿ ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಜನವರಿ 2023ರಲ್ಲಿ, ಸಿಂಗ್ ಅವರ ಸಾಕ್ಷ್ಯಚಿತ್ರ “ಇಂಡಿಯಾ ಬರ್ನಿಂಗ್” ಭಾರತದ ಜಾತ್ಯತೀತತೆಯ ಬಗ್ಗೆ ಅತ್ಯಂತ ನಕಾರಾತ್ಮಕ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದ ಕಾರಣ ಭಾರತಕ್ಕೆ ಭೇಟಿ ನೀಡದಂತೆ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್‌ ಮುಂದೆ ಸಮರ್ಥಿಸಿಕೊಂಡಿತ್ತು.

ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...