Homeಮುಖಪುಟಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಅರ್ಜಿ : ಚು. ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಅರ್ಜಿ : ಚು. ಆಯೋಗಕ್ಕೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಂಬೈನ ವಿಖ್ರೋಲಿಯ ನಿವಾಸಿ ಚೇತನ್ ಅಹಿರೆ ಎಂಬವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರನ ಪರ ಡಾ.ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ, ವಕೀಲ ಪ್ರಕಾಶ್ ಅಂಬೇಡ್ಕರ್ ವಾದ ಮಂಡಿಸಿದ್ದಾರೆ.

ಸೋಮವಾರ (ಫೆ.3) ಸ್ವಲ್ಪ ಹೊತ್ತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಸ್. ಗಡ್ಕರಿ ಮತ್ತು ಕಮಲ್ ಖಾಟಾ ಅವರ ಹೈಕೋರ್ಟ್ ಪೀಠ ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.

ನವೆಂಬರ್ 20, 2024ರಂದು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ, ಸಂಜೆ 6 ಗಂಟೆಯ ನಂತರ ಭಾರೀ ಪ್ರಮಾಣದಲ್ಲಿ ಮತದಾನ ನಡೆದಿದೆ. ಹಾಗಾಗಿ, ಪ್ರತಿ ಮತಗಟ್ಟೆಯಲ್ಲಿ ಪ್ರತಿ ಮತದಾರರಿಗೆ ವಿತರಿಸಲಾದ ಟೋಕನ್‌ಗಳ ಸಂಖ್ಯೆ ಮತ್ತು ಎಲ್ಲಾ ವಿಧಾನಸಭಾ ಕ್ಷೇತ್ರಗಳ ವಿಭಾಗಗಳಲ್ಲಿ ವಿತರಿಸಲಾದ ಒಟ್ಟು ಟೋಕನ್‌ಗಳನ್ನು ಬಹಿರಂಗಪಡಿಸಲು ರಾಜ್ಯ ಮತ್ತು ಚುನಾವಣಾ ಆಯೋಗಕ್ಕೆ ಸೂಚಿಸಬೇಕು. ಒಂದು ವೇಳೆ ಟೋಕನ್‌ಗಳ ಮಾಹಿತಿ ನೀಡಲು ಆಯೋಗ ವಿಫಲವಾದರೆ ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಅನೂರ್ಜಿತ ಮತ್ತು ಕಾನೂನುಬಾಹಿರವೆಂದು ಘೋಷಿಸಬೇಕು ಎಂದು ಅರ್ಜಿದಾರನ ಪರ ವಕೀಲ ಪ್ರಕಾಶ್ ಅಂಬೇಡ್ಕರ್ ನ್ಯಾಯಾಲಯವನ್ನು ಕೋರಿದ್ದಾರೆ.

https://twitter.com/INCKarnataka/status/1886633779684352373

ಮತದಾನದ ಅವಧಿಯ ಕೊನೆಯಲ್ಲಿ ಮತ್ತು ನಂತರ ಸರಿ ಸುಮಾರು 75 ಲಕ್ಷಕ್ಕೂ ಹೆಚ್ಚು ಮತಗಳು ಚಲಾವಣೆಯಾಗಿವೆ. ಆದರೆ, ಈ ಮತಗಳ ದೃಢೀಕರಣವನ್ನು ದಾಖಲಿಸುವ ಅಥವಾ ಪರಿಶೀಲಿಸುವ ಯಾವುದೇ ಪಾರದರ್ಶಕ ವ್ಯವಸ್ಥೆಯನ್ನು ಒದಗಿಸಲಾಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಮತದಾನದ ಅವಧಿಯ ಅಂತಿಮ ನಿಮಿಷಗಳಲ್ಲಿ ಮತ್ತು ಮತದಾನದ ಅಧಿಕೃತ ಸಮಯ ಮುಕ್ತಾಯದ ನಂತರವೂ ಹೆಚ್ಚಿನ ಶೇಕಡಾವಾರು ಮತಗಳು ಚಲಾವಣೆಯಾಗಿರುವುದು ಈ ಚುನಾವಣೆಯ ಬಗ್ಗೆ ಗಂಭೀರ ಕಳವಳವನ್ನು ಉಂಟು ಮಾಡಿದೆ ಎಂದು ಹೇಳಲಾಗಿದೆ.

ಅಧಿಕೃತ ಮತದಾನ ಅವಧಿ ಮುಕ್ತಾಯದ ನಂತರ ಹಾಜರಿದ್ದ ಮತದಾರರಿಗೆ ವಿತರಿಸಲಾದ ಪೂರ್ವ-ಸಂಖ್ಯೆಯ ಟೋಕನ್‌ಗಳನ್ನು ಬಹಿರಂಗಪಡಿಸಿಲ್ಲ. ಚುನಾವಣಾ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕುರಿತು ವಿವರವಾದ ಡೇಟಾ ಬಿಡುಗಡೆ ಮಾಡುವಲ್ಲಿ ವಿಫಲವಾಗಿದೆ. ಈ ಕುರಿತ ಡೇಟಾ ನಮ್ಮಲ್ಲಿ ಇಲ್ಲ ಎಂಬ ಚುನಾವಣಾ ಆಯೋಗದ ಲಿಖಿತ ಉತ್ತರವು ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು (ಇವಿಎಂ) ಬಳಸಿಕೊಂಡು ನಡೆಸುವ ಚುನಾವಣಾ ಪ್ರಕ್ರಿಯೆಯ ಸುರಕ್ಷತೆ, ನಿಖರತೆ, ವಿಶ್ವಾಸಾರ್ಹತೆ ಮತ್ತು ಪರಿಶೀಲನೆಯ ಬಗ್ಗೆ ಗಮನಾರ್ಹ ಅನುಮಾನಗಳನ್ನು ಹುಟ್ಟು ಹಾಕುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

288 ಕ್ಷೇತ್ರಗಳ ಪೈಕಿ ಸುಮಾರು 19 ಕ್ಷೇತ್ರಗಳಲ್ಲಿ ಇವಿಎಂಗಳಲ್ಲಿ ಎಣಿಕೆಯಾದ ಮತಗಳು ದಾಖಲಾದ ಮತಗಳ ಸಂಖ್ಯೆಯನ್ನು ಮೀರಿದೆ. ಇನ್ನು 76 ಕ್ಷೇತ್ರಗಳಲ್ಲಿ ಇವಿಎಂಗಳಲ್ಲಿ ಎಣಿಕೆಯಾದ ಮತಗಳು ಪೋಲಾದ ಮತಗಳಿಗಿಂತ ಕಡಿಮೆ ಇರುವುದು ಕಂಡು ಬಂದಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಪ್ರತಿ ಮತಗಟ್ಟೆಯಲ್ಲಿ ಅಧಿಕೃತ ಮತದಾನದ ಅವಧಿ ಮುಕ್ತಾಯ ನಂತರ (ಅಂದರೆ, ಸಂಜೆ 6 ಗಂಟೆಯ ನಂತರ) ಮತದಾರರಿಗೆ ವಿತರಿಸಲಾದ ನಿಖರವಾದ ಸಂಖ್ಯೆಯ ಟೋಕನ್‌ಗಳ ಬಗ್ಗೆ ಮತ್ತು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವಿಭಾಗಗಳಲ್ಲಿ ವಿತರಿಸಲಾದ ಒಟ್ಟು ಟೋಕನ್‌ಗಳ ಬಗ್ಗೆ ವಿವರವಾದ ಬಹಿರಂಗಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ನವೆಂಬರ್ 20, 2024ರಂದು ಸಂಜೆ 5 ರಿಂದ 6 ಗಂಟೆಯವರೆಗೆ ಮಹಾರಾಷ್ಟ್ರದ ಪ್ರತಿ ಕ್ಷೇತ್ರದಲ್ಲಿ ಚಲಾಯಿಸಲಾದ ಮತ್ತು ಮತದಾನವಾದ ಒಟ್ಟು ಮತಗಳ ಸಂಖ್ಯೆ. ಸಂಜೆ 6 ಗಂಟೆಯ ನಂತರ ಮತದಾನದ ಅಂತಿಮ ಮುಕ್ತಾಯದ ಸಮಯದವರೆಗೆ ಪ್ರತಿ ಕ್ಷೇತ್ರದಲ್ಲಿ ಚಲಾಯಿಸಲಾದ ಮತ್ತು ಮತದಾನವಾದ ಒಟ್ಟು ಮತಗಳ ಸಂಖ್ಯೆಯನ್ನು ಬಹಿರಂಗಪಡಿಸುವಂತೆಯೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಈ ಎಲ್ಲಾ ಮಾಹಿತಿಗಳನ್ನು ನೀಡುವಂತೆ ಆರ್‌ಟಿಐ ಮೂಲಕ ಚುನಾವಣಾ ಆಯೋಗವನ್ನು ಕೋರಿದ್ದೆವು. ಆದರೆ, ಆಯೋಗ ತಮ್ಮಲ್ಲಿ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿದೆ. ಚುನಾವಣಾ ಅಧಿಕಾರಿಗಳು ಈ ಮಾಹಿತಿಯನ್ನು ಬಹಿರಂಗಪಡಿಸಲು ವಿಫಲವಾದರೆ ಅದು ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದಂತೆ ಆಗುತ್ತದೆ ಮತ್ತು ಇದರಿಂದಾಗಿ ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆ ಹಾಳಾಗುತ್ತದೆ ಎಂದು ಅರ್ಜಿದಾರ ಚೇತನ್ ಅಹಿರೆ ಪರ ವಕೀಲ ಅಂಬೇಡ್ಕರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಬಳಸಲಾದ ಇವಿಎಂಗಳು ಮತ್ತು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರೇಲ್ಸ್ (ವಿವಿಪ್ಯಾಟ್‌) ಗಳ ಸಮಗ್ರ ಮತ್ತು ಸ್ವತಂತ್ರ ಲೆಕ್ಕಪರಿಶೋಧನೆಯನ್ನು ಸಹ ಅರ್ಜಿಯಲ್ಲಿ ಕೋರಲಾಗಿದೆ. ಎರಡು ವಾರಗಳ ನಂತರ ಪೀಠವು ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಿದೆ.

ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದರು

electo

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...