Homeಮುಖಪುಟಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಅರ್ಜಿ : ಚು. ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಅರ್ಜಿ : ಚು. ಆಯೋಗಕ್ಕೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಂಬೈನ ವಿಖ್ರೋಲಿಯ ನಿವಾಸಿ ಚೇತನ್ ಅಹಿರೆ ಎಂಬವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರನ ಪರ ಡಾ.ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ, ವಕೀಲ ಪ್ರಕಾಶ್ ಅಂಬೇಡ್ಕರ್ ವಾದ ಮಂಡಿಸಿದ್ದಾರೆ.

ಸೋಮವಾರ (ಫೆ.3) ಸ್ವಲ್ಪ ಹೊತ್ತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಸ್. ಗಡ್ಕರಿ ಮತ್ತು ಕಮಲ್ ಖಾಟಾ ಅವರ ಹೈಕೋರ್ಟ್ ಪೀಠ ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.

ನವೆಂಬರ್ 20, 2024ರಂದು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ, ಸಂಜೆ 6 ಗಂಟೆಯ ನಂತರ ಭಾರೀ ಪ್ರಮಾಣದಲ್ಲಿ ಮತದಾನ ನಡೆದಿದೆ. ಹಾಗಾಗಿ, ಪ್ರತಿ ಮತಗಟ್ಟೆಯಲ್ಲಿ ಪ್ರತಿ ಮತದಾರರಿಗೆ ವಿತರಿಸಲಾದ ಟೋಕನ್‌ಗಳ ಸಂಖ್ಯೆ ಮತ್ತು ಎಲ್ಲಾ ವಿಧಾನಸಭಾ ಕ್ಷೇತ್ರಗಳ ವಿಭಾಗಗಳಲ್ಲಿ ವಿತರಿಸಲಾದ ಒಟ್ಟು ಟೋಕನ್‌ಗಳನ್ನು ಬಹಿರಂಗಪಡಿಸಲು ರಾಜ್ಯ ಮತ್ತು ಚುನಾವಣಾ ಆಯೋಗಕ್ಕೆ ಸೂಚಿಸಬೇಕು. ಒಂದು ವೇಳೆ ಟೋಕನ್‌ಗಳ ಮಾಹಿತಿ ನೀಡಲು ಆಯೋಗ ವಿಫಲವಾದರೆ ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಅನೂರ್ಜಿತ ಮತ್ತು ಕಾನೂನುಬಾಹಿರವೆಂದು ಘೋಷಿಸಬೇಕು ಎಂದು ಅರ್ಜಿದಾರನ ಪರ ವಕೀಲ ಪ್ರಕಾಶ್ ಅಂಬೇಡ್ಕರ್ ನ್ಯಾಯಾಲಯವನ್ನು ಕೋರಿದ್ದಾರೆ.

https://twitter.com/INCKarnataka/status/1886633779684352373

ಮತದಾನದ ಅವಧಿಯ ಕೊನೆಯಲ್ಲಿ ಮತ್ತು ನಂತರ ಸರಿ ಸುಮಾರು 75 ಲಕ್ಷಕ್ಕೂ ಹೆಚ್ಚು ಮತಗಳು ಚಲಾವಣೆಯಾಗಿವೆ. ಆದರೆ, ಈ ಮತಗಳ ದೃಢೀಕರಣವನ್ನು ದಾಖಲಿಸುವ ಅಥವಾ ಪರಿಶೀಲಿಸುವ ಯಾವುದೇ ಪಾರದರ್ಶಕ ವ್ಯವಸ್ಥೆಯನ್ನು ಒದಗಿಸಲಾಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಮತದಾನದ ಅವಧಿಯ ಅಂತಿಮ ನಿಮಿಷಗಳಲ್ಲಿ ಮತ್ತು ಮತದಾನದ ಅಧಿಕೃತ ಸಮಯ ಮುಕ್ತಾಯದ ನಂತರವೂ ಹೆಚ್ಚಿನ ಶೇಕಡಾವಾರು ಮತಗಳು ಚಲಾವಣೆಯಾಗಿರುವುದು ಈ ಚುನಾವಣೆಯ ಬಗ್ಗೆ ಗಂಭೀರ ಕಳವಳವನ್ನು ಉಂಟು ಮಾಡಿದೆ ಎಂದು ಹೇಳಲಾಗಿದೆ.

ಅಧಿಕೃತ ಮತದಾನ ಅವಧಿ ಮುಕ್ತಾಯದ ನಂತರ ಹಾಜರಿದ್ದ ಮತದಾರರಿಗೆ ವಿತರಿಸಲಾದ ಪೂರ್ವ-ಸಂಖ್ಯೆಯ ಟೋಕನ್‌ಗಳನ್ನು ಬಹಿರಂಗಪಡಿಸಿಲ್ಲ. ಚುನಾವಣಾ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕುರಿತು ವಿವರವಾದ ಡೇಟಾ ಬಿಡುಗಡೆ ಮಾಡುವಲ್ಲಿ ವಿಫಲವಾಗಿದೆ. ಈ ಕುರಿತ ಡೇಟಾ ನಮ್ಮಲ್ಲಿ ಇಲ್ಲ ಎಂಬ ಚುನಾವಣಾ ಆಯೋಗದ ಲಿಖಿತ ಉತ್ತರವು ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು (ಇವಿಎಂ) ಬಳಸಿಕೊಂಡು ನಡೆಸುವ ಚುನಾವಣಾ ಪ್ರಕ್ರಿಯೆಯ ಸುರಕ್ಷತೆ, ನಿಖರತೆ, ವಿಶ್ವಾಸಾರ್ಹತೆ ಮತ್ತು ಪರಿಶೀಲನೆಯ ಬಗ್ಗೆ ಗಮನಾರ್ಹ ಅನುಮಾನಗಳನ್ನು ಹುಟ್ಟು ಹಾಕುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

288 ಕ್ಷೇತ್ರಗಳ ಪೈಕಿ ಸುಮಾರು 19 ಕ್ಷೇತ್ರಗಳಲ್ಲಿ ಇವಿಎಂಗಳಲ್ಲಿ ಎಣಿಕೆಯಾದ ಮತಗಳು ದಾಖಲಾದ ಮತಗಳ ಸಂಖ್ಯೆಯನ್ನು ಮೀರಿದೆ. ಇನ್ನು 76 ಕ್ಷೇತ್ರಗಳಲ್ಲಿ ಇವಿಎಂಗಳಲ್ಲಿ ಎಣಿಕೆಯಾದ ಮತಗಳು ಪೋಲಾದ ಮತಗಳಿಗಿಂತ ಕಡಿಮೆ ಇರುವುದು ಕಂಡು ಬಂದಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಪ್ರತಿ ಮತಗಟ್ಟೆಯಲ್ಲಿ ಅಧಿಕೃತ ಮತದಾನದ ಅವಧಿ ಮುಕ್ತಾಯ ನಂತರ (ಅಂದರೆ, ಸಂಜೆ 6 ಗಂಟೆಯ ನಂತರ) ಮತದಾರರಿಗೆ ವಿತರಿಸಲಾದ ನಿಖರವಾದ ಸಂಖ್ಯೆಯ ಟೋಕನ್‌ಗಳ ಬಗ್ಗೆ ಮತ್ತು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವಿಭಾಗಗಳಲ್ಲಿ ವಿತರಿಸಲಾದ ಒಟ್ಟು ಟೋಕನ್‌ಗಳ ಬಗ್ಗೆ ವಿವರವಾದ ಬಹಿರಂಗಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ನವೆಂಬರ್ 20, 2024ರಂದು ಸಂಜೆ 5 ರಿಂದ 6 ಗಂಟೆಯವರೆಗೆ ಮಹಾರಾಷ್ಟ್ರದ ಪ್ರತಿ ಕ್ಷೇತ್ರದಲ್ಲಿ ಚಲಾಯಿಸಲಾದ ಮತ್ತು ಮತದಾನವಾದ ಒಟ್ಟು ಮತಗಳ ಸಂಖ್ಯೆ. ಸಂಜೆ 6 ಗಂಟೆಯ ನಂತರ ಮತದಾನದ ಅಂತಿಮ ಮುಕ್ತಾಯದ ಸಮಯದವರೆಗೆ ಪ್ರತಿ ಕ್ಷೇತ್ರದಲ್ಲಿ ಚಲಾಯಿಸಲಾದ ಮತ್ತು ಮತದಾನವಾದ ಒಟ್ಟು ಮತಗಳ ಸಂಖ್ಯೆಯನ್ನು ಬಹಿರಂಗಪಡಿಸುವಂತೆಯೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಈ ಎಲ್ಲಾ ಮಾಹಿತಿಗಳನ್ನು ನೀಡುವಂತೆ ಆರ್‌ಟಿಐ ಮೂಲಕ ಚುನಾವಣಾ ಆಯೋಗವನ್ನು ಕೋರಿದ್ದೆವು. ಆದರೆ, ಆಯೋಗ ತಮ್ಮಲ್ಲಿ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿದೆ. ಚುನಾವಣಾ ಅಧಿಕಾರಿಗಳು ಈ ಮಾಹಿತಿಯನ್ನು ಬಹಿರಂಗಪಡಿಸಲು ವಿಫಲವಾದರೆ ಅದು ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದಂತೆ ಆಗುತ್ತದೆ ಮತ್ತು ಇದರಿಂದಾಗಿ ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆ ಹಾಳಾಗುತ್ತದೆ ಎಂದು ಅರ್ಜಿದಾರ ಚೇತನ್ ಅಹಿರೆ ಪರ ವಕೀಲ ಅಂಬೇಡ್ಕರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಬಳಸಲಾದ ಇವಿಎಂಗಳು ಮತ್ತು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರೇಲ್ಸ್ (ವಿವಿಪ್ಯಾಟ್‌) ಗಳ ಸಮಗ್ರ ಮತ್ತು ಸ್ವತಂತ್ರ ಲೆಕ್ಕಪರಿಶೋಧನೆಯನ್ನು ಸಹ ಅರ್ಜಿಯಲ್ಲಿ ಕೋರಲಾಗಿದೆ. ಎರಡು ವಾರಗಳ ನಂತರ ಪೀಠವು ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಿದೆ.

ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದರು

electo

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...