Homeಕರ್ನಾಟಕಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

- Advertisement -
- Advertisement -

ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಕುಲಪತಿಗಳ ನೇಮಕ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಸಂಬಂಧಪಟ್ಟಂತೆ ಹೊರಡಿಸಿರುವ ಕರಡು ನಿಯಮಾವಳಿಗಳ ಕುರಿತು ಚರ್ಚಿಸಲು ಫೆಬ್ರವರಿ 05 ರಂದು ಬೆಂಗಳೂರಿನಲ್ಲಿ ಕರೆಯಲಾಗಿರುವ ಒಂದು ದಿನದ ಉನ್ನತ ಶಿಕ್ಷಣ ಸಚಿವರ ರಾಷ್ಟ್ರೀಯ ಮಟ್ಟದ ಸಮಾವೇಶದಲ್ಲಿ ದೇಶದ ಏಳು ರಾಜ್ಯಗಳ ಸಚಿವರು ಪಾಲ್ಗೊಳ್ಳುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು

ದೇಶದ ಕೆಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಎನ್‌ಡಿಎ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಹಿರಂಗವಾಗಿ ತಮ್ಮ ವಿರೋಧವನ್ನು ವ್ಯಕ್ತಪಡಿಸಲಾರದಂತ ಸ್ಥಿತಿಯಲ್ಲಿವೆ. ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಯು, ಟಿಡಿಪಿ ಹಾಗೂ ಎಲ್‌ಜೆಪಿ (ರಾಮ್ ವಿಲಾಸ್) ಪಕ್ಷಗಳು ಈಗಾಗಲೇ ಈ ಸಂಬಂಧ ಅತೃಪ್ತಿ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿರುವುದು ಬಹಿರಂಗಗೊಂಡಿದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೆಹಲಿಯಲ್ಲಿ ಚುನಾವಣೆ ಇರುವುದರಿಂದ ದೆಹಲಿಯ ಉನ್ನತ ಶಿಕ್ಷಣ ಸಚಿವರು ಪಾಲ್ಗೊಳ್ಳುತ್ತಿಲ್ಲ. ಉಳಿದಂತೆ ಆತಿಥ್ಯ ವಹಿಸಿರುವ ಕರ್ನಾಟಕವೂ ಸೇರಿದಂತೆ ಜಮ್ಮು ಕಾಶ್ಮೀರ, ಹಿಮಾಚಲ್ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ ಶಿಕ್ಷಣ ಸಚಿವರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಫೆಬ್ರವರಿ 5 ರಂದು ಬೆಳಗ್ಗೆ 10:30ಕ್ಕೆ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಯುಜಿಸಿ ಕರಡು ನಿಯಮಾವಳಿಗಳಿಂದ ದೇಶದ ಉನ್ನತ ಶಿಕ್ಷಣ ವ್ಯವಸ್ಥೆ ಮೇಲೆ ಕೇಂದ್ರ ಸರ್ಕಾರ ರಾಜ್ಯಗಳಿಗಿದ್ದ ಅಧಿಕಾರವನ್ನು ಮೊಟಕು ಗೊಳಿಸುವುದು ಮಾತ್ರವಲ್ಲದೆ ರಾಜ್ಯ ಸರ್ಕಾರಗಳ ಸಂವಿಧಾನಾತ್ಮಕ ಕರ್ತವ್ಯ ಮತ್ತು ಜವಾಬ್ದಾರಿಯನ್ನು ನಿಗ್ರಹಿಸ ಹೊರಟಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉನ್ನತ ಶಿಕ್ಷಣದ ಹಲವಾರು ಹಂತಗಳಲ್ಲಿ ಒತ್ತಾಯಪೂರ್ವಕವಾಗಿ ಕೆಲವು ನಿಯಮಾವಳಿಗಳನ್ನು ಹೇರಲಾಗುತ್ತಿದೆ. ಹಾಗಾಗಿ ಎಲ್ಲಾ ರಾಜ್ಯಗಳ ಒಕ್ಕೊರಲಿನ ಧ್ವನಿಯಾಗಿ ಕೇಂದ್ರಕ್ಕೆ ತಿಳಿಸಲು ಈ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಧೋರಣೆಯ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು. ಸಮಾವೇಶದ ನಿರ್ಣಯಗಳನ್ನು ಕೇಂದ್ರ ಸರ್ಕಾರ ಹಾಗೂ ಯು.ಜಿ.ಸಿ ಗೆ ಕಳುಹಿಸಿ ಕೊಡಲಾಗುವುದು ಎಂದು ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

ದೇಶದ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸುವುದು ಅತಿ ಮುಖ್ಯವಾಗಿದೆ. ಭಾರತದ ಶೈಕ್ಷಣಿಕ ವ್ಯವಸ್ಥೆ ಅತ್ಯಂತ ಸುಭದ್ರವಾದಂತದ್ದು, ಅದನ್ನು ಯಾವುದೇ ರಾಜ್ಯಗಳೊಂದಿಗೆ ಸಮಾಲೋಚಿಸದೆ ಏಕಾಏಕಿ ಕೇಂದ್ರ ಸರ್ಕಾರ ತನ್ನ ನಿಲುವುಗಳನ್ನು ಬಲವಂತವಾಗಿ ಹೇರುತ್ತಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸೂಕ್ತವಲ್ಲ. ಇದೊಂದು ಸಂವಿಧಾನ ವಿರೋಧಿ ಧೋರಣೆ ಎಂದು ಅವರು ಹೇಳಿದ್ದಾರೆ.

ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವರ ಅಭಿಪ್ರಾಯವನ್ನು ಕ್ರೂಡೀಕರಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಯು.ಜಿ.ಸಿ ಮಾಡಿರುವ ಮಾರ್ಪಾಡುಗಳನ್ನು ಪುನರ್ ಪರಿಶೀಲಿಸದಿದ್ದರೆ ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದರ ಬಗ್ಗೆಯೂ ಚರ್ಚಿಸಲಾಗುವುದು ಎಂದು ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...