Homeಮುಖಪುಟಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ 'ಪಕ್ಷಪಾತಿ' ಎಂದ ದೆಹಲಿ ಸಿಎಂ ಅತಿಶಿ

ಎಫ್‌ಐಆರ್ ದಾಖಲಿಸಿದ ಪೊಲೀಸರು : ಚು. ಆಯೋಗ ‘ಪಕ್ಷಪಾತಿ’ ಎಂದ ದೆಹಲಿ ಸಿಎಂ ಅತಿಶಿ

- Advertisement -
- Advertisement -

ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಮತ್ತು ಕರ್ತವ್ಯದಲ್ಲಿರುವ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೆಹಲಿಯ ಮುಖ್ಯಮಂತ್ರಿ ಹಾಗೂ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಅತಿಶಿ ಮರ್ಲೇನಾ ವಿರುದ್ಧ ಪೊಲೀಸರು ಮಂಗಳವಾರ (ಫೆಬ್ರವರಿ 4,2025) ಎಫ್‌ಐಆರ್ ದಾಖಲಿಸಿದ್ದಾರೆ.

“ನಾವು ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯ ವಿರುದ್ಧ ಗೋವಿಂದಪುರಿ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಫತೇ ಸಿಂಗ್ ಮಾರ್ಗದಲ್ಲಿ 50-70 ಬೆಂಬಲಿಗರು ಮತ್ತು 10 ವಾಹನಗಳೊಂದಿಗೆ ಅತಿಶಿ ಅವರು ಕಾಣಿಸಿಕೊಂಡಿದ್ದರು. ಚುನಾವಣೆಯ ಮಾದರಿ ನೀತಿ ಸಂಹಿತೆಯ ಮಾರ್ಗಸೂಚಿಗಳ ಪ್ರಕಾರ, ಆ ಪ್ರದೇಶವನ್ನು ಖಾಲಿ ಮಾಡುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಅತಿಶಿ ಅವರು ಅಧಿಕಾರಿಯೊಬ್ಬರು ತಮ್ಮ ಕರ್ತವ್ಯ ನಿರ್ವಹಿಸದಂತೆ ತಡೆದಿದ್ದಾರೆ. ಹಾಗಾಗಿ, ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಾಗಿರುವ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅತಿಶಿ ಅವರು ಚುನಾವಣಾ ಆಯೋಗದ ವಿರುದ್ದ ಕಿಡಿಕಾರಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬದ ಸದಸ್ಯರು ಬಹಿರಂಗವಾಗಿ ‘ಗೂಂಡಾಗಿರಿ’ ನಡೆಸುತ್ತಿದ್ದಾರೆ. ಅವರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅತಿಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ದೆಹಲಿ ಸಿಎಂ ಬಹಿರಂಗ ಗೂಂಡಾಗಿರಿಯ ಬಗ್ಗೆ ದೂರು ನೀಡಿದ ನಂತರ ಚುನಾವಣಾ ಆಯೋಗ ಅವರ ವಿರುದ್ಧವೇ ಪೊಲೀಸ್ ಪ್ರಕರಣ ದಾಖಲಿಸಿದೆ” ಎಂದು ಆರೋಪಿಸಿದ್ದಾರೆ.

“ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕೃತ ನಿಲುವು ಇದು. ದೆಹಲಿ ಪೊಲೀಸರು ಮತ್ತು ಚುನಾವಣಾ ಆಯೋಗದ ಕೆಲಸವೆಂದರೆ ಆಮ್ ಆದ್ಮಿ ಪಕ್ಷದ ವಿರುದ್ಧ ಗೂಂಡಾಗಿರಿ ಮಾಡುವುದು. ಬಿಜೆಪಿಯ ಗೂಂಡಾಗಿರಿಗೆ ರಕ್ಷಣೆ ನೀಡುವುದು. ಮದ್ಯ, ಹಣ ಮತ್ತು ವಸ್ತುಗಳನ್ನು ವಿತರಿಸುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದೆ, ಚು. ಆಯೋಗ ಪಕ್ಷಪಾತಿ”: ಅತಿಶಿ

ಎಫ್‌ಐಆರ್ ದಾಖಲಾದ ನಂತರ, ಅತಿಶಿ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ‘ಗೂಂಡಾಗಿರಿ’ಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗ ಮತ್ತು ದೆಹಲಿ ಪೊಲೀಸರು ಎಎಪಿ ನಾಯಕರು ಮತ್ತು ಸದಸ್ಯರನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ಕೇಸರಿ ಪಕ್ಷದ ಕಾರ್ಯಕರ್ತರನ್ನು ರಕ್ಷಿಸುತ್ತಿದ್ದಾರೆ” ಎಂದು ಅತಿಶಿ ಆರೋಪಿಸಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಕೈಯಲ್ಲಿದೆ. ಅದು ರಾಷ್ಟ್ರ ರಾಜಧಾನಿಯಲ್ಲಿ ಉಳಿಯುತ್ತದೆಯೇ ಎಂದು ದೇಶ ನೋಡುತ್ತಿದೆ ಎಂದು ಅತಿಶಿ ಹೇಳಿದ್ದಾರೆ.

“ಬಿಜೆಪಿ ಬಹಿರಂಗವಾಗಿ ಗೂಂಡಾಗಿರಿಯಲ್ಲಿ ತೊಡಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸರು ರಕ್ಷಿಸುತ್ತಿದ್ದಾರೆ. ಚುನಾವಣಾ ಆಯೋಗ ದೂರು ನೀಡುತ್ತಿರುವವರ ವಿರುದ್ಧವೇ ಪ್ರಕರಣಗಳನ್ನು ದಾಖಲಿಸುತ್ತಿದೆ” ಎಂದು ಅತಿಶಿ ಆರೋಪಿಸಿದ್ದಾರೆ.

ತನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬ ಸದಸ್ಯರು ಕಲ್ಕಾಜಿಯಲ್ಲಿ ‘ಗೂಂಡಾಗಿರಿ’ಯಲ್ಲಿ ತೊಡಗಿದ್ದಾರೆ ಎಂದು ಅತಿಶಿ ನಿರ್ದಿಷ್ಟವಾಗಿ ಆರೋಪಿಸಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

“ದೆಹಲಿಯ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಒಂದೆಡೆ, ಉಚಿತ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಲು ಬಯಸುವ ಮತ್ತು ಹಿಂಸಾಚಾರದಲ್ಲಿ ತೊಡಗಿರುವ ಪಕ್ಷವಿದೆ. ಮತ್ತೊಂದೆಡೆ, ಪ್ರತಿ ಮನೆಯೂ ತಿಂಗಳಿಗೆ ₹25,000 ಉಳಿಸುವಂತೆ ಎಎಪಿ ಕೆಲಸ ಮಾಡುತ್ತಿದೆ” ಎಂದು ಅತಿಶಿ ಪ್ರತಿಪಾದಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಫೆಬ್ರವರಿ 5ರಂದು ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಮಹಾರಾಷ್ಟ್ರ | ಎಲ್ಲಾ ಸರ್ಕಾರಿ ಸಂವಹನಗಳಿಗೆ ಮರಾಠಿ ಭಾಷೆ ಬಳಕೆ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...