Homeಮುಖಪುಟತಮಿಳುನಾಡು| ತಿರುಪರಂಕುಂದ್ರಂ ಬೆಟ್ಟ ವಿವಾದದ ಹಿನ್ನೆಲೆ ನಿಷೇಧಾಜ್ಞೆ ಜಾರಿ

ತಮಿಳುನಾಡು| ತಿರುಪರಂಕುಂದ್ರಂ ಬೆಟ್ಟ ವಿವಾದದ ಹಿನ್ನೆಲೆ ನಿಷೇಧಾಜ್ಞೆ ಜಾರಿ

- Advertisement -
- Advertisement -

ತಮಿಳುನಾಡಿನ ತಿರುಪರಂಕುಂದ್ರಂ ಅರುಲ್ಮಿಗು ಸುಬ್ರಮಣಿಯ ಸ್ವಾಮಿ ದೇವಾಲಯ ಬೆಟ್ಟದ ವಿಷಯಕ್ಕೆ ಸಂಬಂಧಿಸಿದ ಪ್ರತಿಭಟನೆಗಳನ್ನು ತಡೆಯಲು ಸರ್ಕಾರವು ಪ್ರದೇಶದಾದ್ಯಂತ ಸೆಕ್ಷನ್ 144 ವಿಧಿಸಿದ ನಂತರ ಮಂಗಳವಾರ ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ ಕಂಡುಬಂದಿದೆ.

ರಾಜ್ಯ ಸರ್ಕಾರದ ಕ್ರಮಗಳ ವಿರುದ್ಧ ಹಿಂದುತ್ವ ಸಂಘಟನೆಗಳು ಹೋರಾಟ ಯೋಜಿಸುತ್ತಿರುವುದಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ತಿರುಪರಂಕುಂದ್ರಂ ಬೆಟ್ಟದಲ್ಲಿ ಎಐಎಎಂಐ ಸಂಸದ ಸೇರಿದಂತೆ ಹಲವರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ ವಿಡಿಯೊ ವೈರಲ್ ಆದ ಬಳಿಕ ವಿವಾದ ಉಂಟಾಗಿದೆ. ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರೂ ಸಹ ಹಿಂದೂ ಮುನ್ನಾನಿ ಸುಬ್ರಮಣಿಯ ಸ್ವಾಮಿ ದೇವಾಲಯದ ಬಳಿ ಪ್ರತಿಭಟನೆ ನಡೆಸಲು ಹಿಂದುತ್ವ ಗುಂಪುಗಳು ಯೋಜಿಸಿದ್ದವು. ಬೆಟ್ಟದಲ್ಲಿ ಒಂದು ದರ್ಗಾ ಕೂಡ ಇದೆ, ಮುಸ್ಲಿಮರ ಒಂದು ವರ್ಗವು ತಿರುಪರಂಕುಂದ್ರಂ ಬೆಟ್ಟಗಳನ್ನು ಸಿಕ್ಕಂದರ್ ಮಲೈ ಎಂದು ಮರುನಾಮಕರಣ ಮಾಡಲು ಪ್ರಯತ್ನಿಸಿದೆ ಎಂದು ವರದಿಯಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಅಧಿಕಾರಿಗಳು, ಮಧುರೈನಾದ್ಯಂತ ಸಭೆಗಳನ್ನು ನಿರ್ಬಂಧಿಸಿ, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಬೆಟ್ಟದ ಪ್ರವೇಶದ್ವಾರದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದರು, ಇದರಿಂದಾಗಿ ದೇವಸ್ಥಾನ ಮತ್ತು ದರ್ಗಾ ಎರಡರಲ್ಲೂ ಭಕ್ತರು ದರ್ಶನ ಪಡೆಯುವುದನ್ನು ತಡೆಯಲಾಯಿತು. ಥೇಣಿ ಜಿಲ್ಲಾ ಗಡಿಯ ಬಳಿಯ ಆಂಡಿಪಟ್ಟಿ ಕಣವೈ, ಉಸಿಲಂಪಟ್ಟಿ ತೇವರ್ ಪ್ರತಿಮೆ ಪ್ರದೇಶ, ದಿಂಡಿಗಲ್ ಜಿಲ್ಲಾ ಗಡಿಯ ಬಳಿಯ ಉತ್ತಪ್ಪನಾಯಕನೂರ್ ಮತ್ತು ಏಳುಮಲೈ ಜಂಕ್ಷನ್ ಸೇರಿದಂತೆ ಪ್ರಮುಖ ಚೆಕ್‌ಪೋಸ್ಟ್‌ಗಳಲ್ಲಿ ಕಠಿಣ ವಾಹನ ತಪಾಸಣೆ ನಡೆಸಲಾಯಿತು.

ತಿರುಪ್ಪೂರಿನಲ್ಲಿ ಉದ್ವಿಗ್ನತೆ ಹೆಚ್ಚಾಯಿತು, ಪ್ರತಿಭಟನೆಗಾಗಿ ಮಧುರೈ ತಲುಪಲು ಯತ್ನಿಸಿದ ಪೊಲೀಸರು ಮತ್ತು ಹಿಂದೂ ಪರ ಗುಂಪುಗಳ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಕಾನೂನು ಜಾರಿ ಸಂಸ್ಥೆಗಳು ಗುಂಪಿನ ಪ್ರಮುಖ ನಾಯಕನನ್ನು ಬಂಧಿಸಿದವು, ಇದು ಘರ್ಷಣೆಗೆ ಕಾರಣವಾಯಿತು.

ಬಿಜೆಪಿ ತಮಿಳುನಾಡು ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ ಪರಿಸ್ಥಿತಿಯನ್ನು ನಿಭಾಯಿಸಿದ್ದಕ್ಕಾಗಿ ಡಿಎಂಕೆ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ಎಕ್ಸ್ ಪೋಸ್ಟ್‌ ಮಾಡಿರುವ ಅವರು, ವಿರುಧುನಗರ ಪೂರ್ವ ಜಿಲ್ಲಾ ಅಧ್ಯಕ್ಷ ಪೆಂಟಗನ್ ಜಿ. ಪಾಂಡುರಂಗನ್, ಕೊಯಮತ್ತೂರು ನಗರ ಜಿಲ್ಲಾ ಅಧ್ಯಕ್ಷ ರಮೇಶ್, ತೂತುಕುಡಿ ಉತ್ತರ ಜಿಲ್ಲಾ ಅಧ್ಯಕ್ಷ ಕೆ. ಸರವಣಕೃಷ್ಣನ್ ಮತ್ತು ಸೇಲಂ ನಗರ ಜಿಲ್ಲಾ ಅಧ್ಯಕ್ಷ ಟಿವಿ ಶಶಿಕುಮಾರ್ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ನಾಯಕರು ಮತ್ತು ಸದಸ್ಯರನ್ನು ಬಂಧಿಸುವ ಮೂಲಕ ಆಡಳಿತ ಪಕ್ಷವು “ಪ್ರಜಾಪ್ರಭುತ್ವ ವಿರೋಧಿ” ರೀತಿಯಲ್ಲಿ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಮಧುರೈನಲ್ಲಿ ಸೆಕ್ಷನ್ 144 ರ ಹೊರತಾಗಿಯೂ ಡಿಎಂಕೆ ನಾಯಕರೊಬ್ಬರು ರ್ಯಾಲಿ ನಡೆಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ. “ಎಲ್ಲದಕ್ಕೂ ಒಂದು ಮಿತಿ ಇದೆ. ಡಿಎಂಕೆ ಸಚಿವರಿಗೆ ಒಂದು ನಿಯಮ ಮತ್ತು ಸಾರ್ವಜನಿಕರಿಗೆ ಇನ್ನೊಂದು ನಿಯಮವಿದೆಯೇ? ಬಂಧಿಸಲ್ಪಟ್ಟ ಎಲ್ಲರನ್ನು ತಕ್ಷಣ ಬಿಡುಗಡೆ ಮಾಡಬೇಕು ಮತ್ತು ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಗೆ ಅವಕಾಶ ನೀಡಬೇಕು” ಎಂದು ಅಣ್ಣಾಮಲೈ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಯುಎಪಿಎ ತಿದ್ದುಪಡಿ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್; ದೆಹಲಿ ಹೈಕೋರ್ಟ್‌ಗೆ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...