Homeಮುಖಪುಟಗುಜರಾತ್ | ಏಕರೂಪ ನಾಗರಿಕ ಸಂಹಿತೆ ಕರಡು ರಚನೆಗೆ ಸಮಿತಿ ನೇಮಿಸಿದ ಬಿಜೆಪಿ ಸರ್ಕಾರ

ಗುಜರಾತ್ | ಏಕರೂಪ ನಾಗರಿಕ ಸಂಹಿತೆ ಕರಡು ರಚನೆಗೆ ಸಮಿತಿ ನೇಮಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

ರಾಜ್ಯಕ್ಕೆ ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯ ಕರಡು ಸಿದ್ಧಪಡಿಸಲು ಐದು ಸದಸ್ಯರ ಸಮಿತಿಯನ್ನುಗುಜರಾತ್ ಸರ್ಕಾರ ಮಂಗಳವಾರ ನೇಮಿಸಿದೆ ಎಂದು ANI ವರದಿ ಮಾಡಿದೆ. ಸಮಿತಿಯು 45 ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ. ಗುಜರಾತ್

ಭಾರತೀಯತೆ ನಮ್ಮ ಧರ್ಮ, ಸಂವಿಧಾನವು ನಮ್ಮ ‘ಪವಿತ್ರ ಗ್ರಂಥ’ ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ನಾವು ಸಂವಿಧಾನದ 75 ವರ್ಷಗಳನ್ನು ಆಚರಿಸುತ್ತಿದ್ದೇವೆ. ಸಮಾನ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಏಕರೂಪ ಕಾನೂನನ್ನು ಜಾರಿಗೆ ತರಲು ನಿರ್ಧರಿಸಿದ್ದಾರೆ.” ಎಂದು ಅವರು ಹೇಳಿದ್ದಾರೆ. ಗುಜರಾತ್

ಸಮಿತಿಯು ಸಾಮಾನ್ಯ ವೈಯಕ್ತಿಕ ಸಂಹಿತೆಯನ್ನು ಜಾರಿಗೆ ತರುವ ಹಲವಾರು ಅಂಶಗಳನ್ನು ಪರಿಶೀಲಿಸುತ್ತದೆ ಮತ್ತು ಎಲ್ಲಾ ವಲಯಗಳ ವ್ಯಕ್ತಿಗಳಿಂದ ಪ್ರತಿಕ್ರಿಯೆಯನ್ನು ಸಂಗ್ರಹಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶೆ ರಂಜನಾ ದೇಸಾಯಿ ಈ ಸಮಿತಿಯ ನೇತೃತ್ವ ವಹಿಸಲಿದ್ದು, ಹಲವಾರು ಧಾರ್ಮಿಕ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ರಾಜ್ಯದ ಗೃಹ ಸಚಿವ ಹರ್ಷ ಸಂಘವಿ ಪಿಟಿಐಗೆ ತಿಳಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ

ಜನವರಿ 27 ರಂದು ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿತ್ತು. ಉತ್ತರಾಖಂಡವು ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆಯನ್ನಿ ಜಾರಿಗೆ ತಂದ ಮೊದಲ ರಾಜ್ಯವಾಗಿದೆ. 1867 ರಲ್ಲಿ ಪೋರ್ಚುಗೀಸರು ನಾಗರಿಕ ಸಂಹಿತೆಯನ್ನು ಅಂಗೀಕರಿಸಿದ್ದರು. ಅಂದಿನಿಂದ ಗೋವಾದಲ್ಲಿ ಸಾಮಾನ್ಯ ನಾಗರಿಕ ಸಂಹಿತೆ ಜಾರಿಯಲ್ಲಿದೆ.

ಈ ಸಂಹಿತೆಯು ಎಲ್ಲಾ ನಾಗರಿಕರಿಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರವನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ. ಪ್ರಸ್ತುತ ಎಲ್ಲಾ ಕಾರ್ಯಗಳು ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ವೈಯಕ್ತಿಕ ವ್ಯವಹಾರಗಳು ಎಂದು ಪರಿಗಣಿಸಲಾಗಿದ್ದು, ಸಮುದಾಯಗಳ ನಿರ್ದಿಷ್ಟ ಧರ್ಮ ಗ್ರಂಥಗಳ ಕಾನೂನುಗಳನ್ನು ಆಧರಿಸಿ ನಡೆಯುತ್ತವೆ.

ಸಾಮಾನ್ಯ ವೈಯಕ್ತಿಕ ಕಾನೂನಿನ ಪರಿಚಯ ಮಾಡುವುದು ಬಹಳ ಹಿಂದಿನಿಂದಲೂ ಬಿಜೆಪಿಯ  ಕಾರ್ಯಸೂಚಿಯಲ್ಲಿದ್ದು, ಪಕ್ಷ ಆಳದಲ್ಲಿರುವ ಹಲವಾರು ರಾಜ್ಯಗಳು ಅದನ್ನು ಅನುಷ್ಠಾನಗೊಳಿಸುವತ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಉತ್ತರಾಖಂಡದಲ್ಲಿ ಈ ನಿಯಮಗಳ ಅನುಷ್ಠಾನವು ಇತರ ಬಿಜೆಪಿ ಆಡಳಿತದ ರಾಜ್ಯಗಳು ಇದನ್ನು ಅನುಸರಿಸಲು ಒಂದು ಪೂರ್ವನಿದರ್ಶನವಾಲಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯ ತನ್ನ ಅಭಿಯಾನದಲ್ಲಿ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿತ್ತು. ಈ ಅಭಿಯಾನದ ವೇಳೆ ಬಿಜೆಪಿಯು, ಮುಸ್ಲಿಂ ಪುರುಷರು ಬಹುಪತ್ನಿತ್ವವನ್ನು ಆಚರಿಸಲು, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನವನ್ನು ಪ್ರಾರಂಭಿಸಲು ಮತ್ತು ಜೀವನಾಂಶವನ್ನು ನಿರಾಕರಿಸಲು ಅನುವು ಮಾಡಿಕೊಡುವುದರಿಂದ ಮುಸ್ಲಿಂ ಮಹಿಳೆಯರ ವಿರುದ್ಧ ತಾರತಮ್ಯ ಆಗುತ್ತಿವೆ ಎಂದು ವಾದಿಸಿತ್ತು.

ಉತ್ತರಾಖಂಡದ ಬಿಜೆಪಿ ಸರ್ಕಾರ ಅನುಷ್ಠಾನ ಮಾಡಿರುವ ಕಾನೂನು, ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಾಗಿದ್ದು, ಅದು ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಲಿದೆ ಎಂದು ಕಾನೂನು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ:  ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಇದನ್ನೂಓದಿ:  ಛತ್ತೀಸ್‌ಗಢ| ಬಿಜಾಪುರ-ದಂತೇವಾಡ ಗಡಿ ಪ್ರದೇಶದಲ್ಲಿ ಐಇಡಿ ಸ್ಫೋಟ; ಮೂವರು ಯೋಧರಿಗೆ ಗಾಯ

ಛತ್ತೀಸ್‌ಗಢ| ಬಿಜಾಪುರ-ದಂತೇವಾಡ ಗಡಿ ಪ್ರದೇಶದಲ್ಲಿ ಐಇಡಿ ಸ್ಫೋಟ; ಮೂವರು ಯೋಧರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...