Homeಮುಖಪುಟಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

- Advertisement -
- Advertisement -

ಮುಂದಿನ ಗುರುವಾರ (ಫೆ.6) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.

ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ, ಅವರನ್ನು ಭೇಟಿಯಾಗುತ್ತಿರುವ ಮೊದಲ ವಿದೇಶ ನಾಯಕ ನೆತನ್ಯಾಹು ಆಗಿದ್ದಾರೆ.

ನೆತನ್ಯಾಹು ಭೇಟಿಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, “ಗಾಝಾ ಕದನ ವಿರಾಮ ಮುಂದುವರಿಯುವ ಯಾವುದೇ ಗ್ಯಾರಂಟಿ ನನಗಿಲ್ಲ” ಎಂದಿದ್ದಾರೆ.

ವಿವಿಧ ‍‍ಷರತ್ತುಗಳನ್ನು ಒಳಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದ ಜನವರಿ 16, 2025ರಿಂದ ಜಾರಿಗೆ ಬಂದಿದೆ. ಅದರ ಮೊದಲ ಹಂತವಾಗಿ ಪರಸ್ಪರ ಬಂಧಿತರು, ಒತ್ತೆಯಾಳುಗಳ ಬಿಡುಗಡೆ ಯಶಸ್ವಿಯಾಗಿ ನಡೆಯುತ್ತಿದೆ. ಶಿಬಿರಗಳಲ್ಲಿ ಇದ್ದ ಲಕ್ಷಾಂತರ ಜನರು ಉತ್ತರ ಗಾಝಾಗೆ ಮರಳುತ್ತಿದ್ದಾರೆ.

ಈ ನಡುವೆ ಕದನ ವಿರಾಮ ವಿಫಲಗೊಳ್ಳುವ ಬಗ್ಗೆ ಟ್ರಂಪ್ ಮಾತನಾಡಿರುವುದು ಆತಂಕ್ಕೆ ಕಾರಣವಾಗಿದೆ. ಏಕೆಂದರೆ, ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸಲು ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಿರುವುದು ಇದೇ ಅಮೆರಿಕವಾಗಿದೆ.

ಈ ಹಿಂದೆ ಜೋ ಬೈಡೆನ್ ಅಮೆರಿಕದ ಅಧ್ಯಕ್ಷರಾಗಿದ್ದಾಗ ಮಾಧ್ಯಮಗಳ ಮುಂದೆ ಗಾಝಾ ಆಕ್ರಮಣವನ್ನು ಖಂಡಿಸುತ್ತಿದ್ದರು. ಜೀವ ಹಾನಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದರು. ಆದರೆ, ಹಿಂಬದಿಯಲ್ಲಿ ಇಸ್ರೇಲ್‌ಗೆ ಬೇಕಾದ ಮದ್ದು, ಗುಂಡು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು.

ಇದೀಗ ಬೈಡೆನ್‌ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುವ ಟ್ರಂಪ್ ಕೈಗೆ ಅಮೆರಿಕದ ಆಡಳಿತ ಸಿಕ್ಕಿದೆ. ಹಾಗಾಗಿ, ಯಾವ ರೀತಿಯ ಹುಚ್ಚು ನಿರ್ಧಾರಗಳನ್ನು ಬೇಕಾದರು ತೆಗೆದುಕೊಳ್ಳಬಹುದು. ಈ ಕಾರಣಕ್ಕೆ ಟ್ರಂಪ್ ಹೇಳಿಕೆ ಮಹತ್ವವೆನಿಸಿದೆ.

ಕದನ ವಿರಾಮದ ಬಳಿಕ ಸದ್ಯಕ್ಕೆ ಗಾಝಾದಲ್ಲಿ ಆಕ್ರಮಣ ಕೊನೆಗೊಳಿಸಿರುವ ಇಸ್ರೇಲ್, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದಾಳಿ ಮುಂದುವರೆಸಿದೆ. ಇತ್ತೀಚಿನ ಘಟನೆಗಳಲ್ಲಿ ಓರ್ವ ಬಂದೂಕುಧಾರಿಯನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ. ಆತ ಮಿಲಿಟರಿ ಚೆಕ್‌ ಪಾಯಿಂಟ್ ಮೇಲೆ ಗುಂಡು ಹಾರಿಸಿ ಹಲವಾರು ಜನರನ್ನು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಟ್ರಂಪ್ ಭೇಟಿಗೆ ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಸಚಿವ ಸಂಪುಟದ ಜೊತೆ ಸಭೆ ನಡೆಸಿದ್ದಾರೆ. ಅದರಲ್ಲಿ ಗಾಝಾ ಯುದ್ಧದ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾದಲ್ಲಿರುವ ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೊಳಿಸುವುದು, ಹಮಾಸ್ ವಿರುದ್ದ ಪೂರ್ಣ ಜಯ ಸಾಧಿಸುವುದು, ಇರಾನ್ ಬೆಂಬಲಿತ ಪಡೆಗಳನ್ನು ಹಿಮ್ಮೆಟಿಸುವುದು ನೆತನ್ಯಾಹು ಸಭೆಯ ಮುಖ್ಯ ಚರ್ಚಾ ವಿಷಯಗಳು ಎಂದು ಹೇಳಲಾಗಿದೆ.

ಈ ನಡುವೆ, ಹಮಾಸ್ ಗಾಝಾದ ಮೇಲೆ ಶೀಘ್ರವಾಗಿ ನಿಯಂತ್ರಣವನ್ನು ಮರಳಿ ಪಡೆದಂತೆ ಕಂಡುಬರುತ್ತಿದೆ. ಇಸ್ರೇಲಿ ಪಡೆಗಳು ಗಾಝಾ ಪ್ರದೇಶದ ಮೇಲಿನ ತನ್ನ ಮಿಲಿಟರಿ ಆಕ್ರಮಣವನ್ನು ಕೊನೆಗೊಳಿಸುವ ಮೂಲಕ ತನ್ನ ಬದ್ಧತೆಗಳನ್ನು ಪೂರೈಸದಿದ್ದರೆ, ಎರಡನೇ ಹಂತದ ಕದನ ವಿರಾಮದ ಸಮಯದಲ್ಲಿ ಹೆಚ್ಚಿನ ಸೆರೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹಮಾಸ್ ಒತ್ತಿ ಹೇಳಿದೆ.

ಯುದ್ಧದ ಸಮಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ತೆಗೆದುಕೊಂಡ ನಿರ್ಧಾರಗಳು ಈಗಾಗಲೇ ಮಧ್ಯಪ್ರಾಚ್ಯದ ಮುಖವನ್ನೇ ಬದಲಾಯಿಸಿದೆ. ಈ ನಕ್ಷೆಯನ್ನು ಇನ್ನಷ್ಟು ಮತ್ತು ಉತ್ತಮವಾಗಿ ಪುನಃ ರಚಿಸುವ ಉದ್ದೇಶವನ್ನು ಹೊಂದಿರುವುದಾಗಿ ನೆತನ್ಯಾಹು ಹೇಳಿದ್ದಾರೆ.

ಯುದ್ಧದ ವಿನಾಶ, ಈಜಿಪ್ಟ್ ಮತ್ತು ಜೋರ್ಡಾನ್ ಮೇಲೆ ಲಕ್ಷಾಂತರ ಪ್ಯಾಲೆಸ್ತೀನಿಯನ್ ನಿರಾಶ್ರಿತರನ್ನು ಸ್ವೀಕರಿಸಲು ಒತ್ತಡ ಹೇರುವ ಮೂಲಕ ಗಾಝಾವನ್ನು ಸ್ವಚ್ಛಗೊಳಿಸುವ ಟ್ರಂಪ್ ಸಲಹೆಯ ಹೊರತಾಗಿಯೂ, ನೆತನ್ಯಾಹು ಅರಬ್ ರಾಷ್ಟ್ರಗಳೊಂದಿಗಿನ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಕೈರೋ ಮತ್ತು ಅಮ್ಮನ್ ಸರ್ಕಾರಗಳು ಟ್ರಂಪ್ ಪ್ರಸ್ತಾಪವನ್ನು ತಿರಸ್ಕರಿಸಿವೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಬಿಡುಗಡೆಗೊಳಿಸಿದವರು ಗಡಿಪಾರು!

ಇಸ್ರೇಲ್ ಬಂಧಿಸಿಟ್ಟಿದ್ದ ನೂರಾರು ಮಂದಿ ಪ್ಯಾಲೆಸ್ತೀನ್ ನಾಗರಿಕರನ್ನು ಕದನ ವಿರಾಮದ ಒಪ್ಪದಂತೆ ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ಆದರೆ, ಈಗಾಗಲೇ ಬಿಡುಗಡೆಗೊಂಡವರನ್ನು ವಿವಿಧ ದೇಶಗಳಿಗೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ.

ಗಾಝಾ ಕದನ ವಿರಾಮ ಮತ್ತು ವಿನಿಮಯ ಒಪ್ಪಂದದ ಭಾಗವಾಗಿ ಇಸ್ರೇಲ್ ಬಿಡುಗಡೆ ಮಾಡಿದ 79 ಪ್ಯಾಲೆಸ್ತೀನ್ ಕೈದಿಗಳನ್ನು ಈಜಿಪ್ಟ್‌ಗೆ ಗಡಿಪಾರು ಮಾಡಿದ ನಂತರ, ಅವರು ಕೈರೋ ತಲುಪಿದ್ದಾರೆ ಎಂದು ಹಮಾಸ್‌ನ ಕೈದಿಗಳ ಕಚೇರಿಯ ಮಾಧ್ಯಮ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

ಗಡಿಪಾರಾದ ಕೆಲವರು ಈಜಿಪ್ಟ್‌ನಲ್ಲಿ ನೆಲೆಸಲಿದ್ದಾರೆ. ಮುಂದೆಯೂ ಬಿಡುಗಡೆಯಾಗುವ ಹೆಚ್ಚಿನ ಕೈದಿಗಳು ಕೈರೋಗೆ ಗಡಿಪಾರು ಆಗಬಹುದು ಎಂದು ಹಿರಿಯ ಹಮಾಸ್ ನಾಯಕ ನಹೇದ್ ಅಲ್-ಫಖೌರಿ ಹೇಳಿದ್ದಾರೆ.

ಬಿಡುಗಡೆಯಾದ ಕೈದಿಗಳನ್ನು ಸ್ವೀಕರಿಸಲು ಇತರ ದೇಶಗಳಲ್ಲೂ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹಮಾಸ್ ಅಧಿಕಾರಿ ತಿಳಿಸಿದ್ದಾರೆ. ಮಂಗಳವಾರ 15 ಮಂದಿ ಟರ್ಕಿ ತಲುಪುವ ನಿರೀಕ್ಷೆಯಿದೆ. ನಂತರದ ದಿನಗಳಲ್ಲಿ ಇನ್ನೂ 15 ಮಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಲ್-ಫಖೌರಿ ಪ್ರಕಾರ, ಇಸ್ರೇಲ್ ಗಡಿಪಾರು ಮಾಡುವಂತೆ ಒತ್ತಾಯಿಸಿದ ಪ್ಯಾಲೆಸ್ತೀನಿಯರನ್ನು ಸ್ವೀಕರಿಸಲು ಅಲ್ಜೀರಿಯಾ ಕೂಡ ಆರಂಭಿಕ ಅನುಮೋದನೆಯನ್ನು ನೀಡಿದೆ. ಆದರೆ, ಟುನೀಶಿಯಾ ಯಾವುದೇ ಜನರನ್ನು ಸ್ವೀಕರಿಸಲು ನಿರಾಕರಿಸಿದೆ.

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಿಂದ ಹಲವಾರು ಇತರ ಕೈದಿಗಳನ್ನು ಮತ್ತು ಒಬ್ಬ ಜೋರ್ಡಾನ್ ಕೈದಿಯನ್ನು ಗಾಝಾಗೆ ಗಡಿಪಾರು ಮಾಡಿವೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 61, 700ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜನವರಿ16, 2025ರಂದು ಕದನ ವಿರಾಮ ಜಾರಿಯಾಗುವವರೆಗೆ 47ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಕದನ ವಿರಾಮದ ಬಳಿಕ ಸುಮಾರು 3 ಲಕ್ಷದಷ್ಟು ಜನರು ಉತ್ತರ ಗಾಝಾದ ತಮ್ಮ ಮೂಲ ಸ್ಥಳಗಳಿಗೆ ಮರಳಿದ್ದಾರೆ. ಅಲ್ಲಿ ಧ್ವಂಸಗೊಂಡ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿದ್ದ ನೂರಾರು ಜನರ ಮೃತದೇಹಗಳು ಸಿಗುತ್ತಿವೆ ಎಂದು ವರದಿಯಾಗಿದೆ. ಈ ಕಾರಣಕ್ಕೆ ಮೃತರ ಸಂಖ್ಯೆ ಒಂದೇ ಸಮನೆ 61 ಸಾವಿರಕ್ಕೆ ತಲುಪಿದೆ.

ಗಾಝಾದಲ್ಲಿ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಆಕ್ರಮಣ ಮುಂದುವರಿಸಿದೆ. ಅಲ್ಲಿ ಇತ್ತೀಚಿನ ದಾಳಿಯಲ್ಲಿ ಒಂದೇ ಸಮನೆ 20 ಮನೆಗಳನ್ನು ಸ್ಪೋಟಗೊಳಿಸಿ ಧ್ವಂಸ ಮಾಡಿದೆ. ಪರಿಣಾಮ 15 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ನೂರಾರು ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟಿನಲ್ಲಿ, ಗಾಝಾದಲ್ಲಿ ಕದನ ವಿರಾಮ ಜಾರಿಯಾದರೂ ಅನಿಶ್ಚತತೆ ಮುಂದುವರೆದಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ.

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...