Homeಕರ್ನಾಟಕಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

ಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

- Advertisement -
- Advertisement -

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುತ್ತದೆ ಎಂದು ಭಾವಿಸಿದ್ದೆವು. ಆದರೆ, ಸರ್ಕಾರ ಬಲಿಷ್ಠ ಜಾತಿಗಳ ಒತ್ತಡಕ್ಕೆ ಒಳಗಾಗಿದ್ದು, ಶೋಷಿತರನ್ನು ಕಡೆಗಣಿಸುತ್ತಿದೆ” ಎಂದು ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಮೀಸಲಾತಿ ನಿಗದಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿರುವ ಕಾಂತರಾಜು ಆಯೋಗದ ವರದಿಯನ್ನೂ ಸರ್ಕಾರ ಜಾರಿಗೆ ತಂದಿಲ್ಲ. ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ, ಜನಾಭಿಪ್ರಾಯ ಪಡೆಯಬೇಕು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವರದಿಗಳು ಮತ್ತು ಅವುಗಳ ಜಾರಿಯ ಬಗ್ಗೆ ಸಂಪುಟ ಸಭೆಯಲ್ಲೂ ಚರ್ಚೆಯಾಗದಂತೆ ಬಲಿಷ್ಠ ಜಾತಿಗಳು ತಡೆಯುತ್ತಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ಜಾರಿಯ ಭರವಸೆ ನೀಡಿದೆ. ಈಗ ಅದರಂತೆ ನಡೆದುಕೊಳ್ಳಬೇಕು. ಸಮ ಸಮಾಜ ನಿರ್ಮಿಸಲು, ವಂಚಿತರ ಸ್ಥಿತಿ ತಿಳಿಯಲು, ತಳ ಸಮುದಾಯಗಳ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸುವ ಕಾಂತರಾಜು ವರದಿಯನ್ನು ಜನರ ಮುಂದಿಡಿ ಎಂದು ಒತ್ತಾಯಿಸಿದರು.

ಜಾತ್ಯತೀತ ಸರ್ಕಾರ ಬರಬೇಕು, ಕೋಮುವಾದಿ ಸರ್ಕಾರ ತೊಲಗಬೇಕು ಎಂದು ಶೋಷಿತ ಸಮುದಾಯಗಳು ಕಾಂಗ್ರೆಸ್‌ಗೆ ಮತ ಹಾಕಿ ಗೆಲ್ಲಿಸಿವೆ. ಶೋಷಿತ ಸಮುದಾಯಗಳ ಪಾಲುದಾರಿಕೆಯಲ್ಲಿ ಬಂದಿರುವ ಕಾಂಗ್ರೆಸ್ ಸರ್ಕಾರ, ಈಗ ವರದಿಯನ್ನು ಜನರ ಮುಂದೆ ಇಡುತ್ತಿಲ್ಲ. ಈ ಹಿಂದೆ, ವರದಿಯನ್ನು ಜಾರಿ ಮಾಡುವುದಾಗಿ ಹೇಳಿದ್ದ ಸರ್ಕಾರ ಈಗ ಯಾಕೆ ಕೈಕಟ್ಟಿ ಕುಳಿತಿದೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಕಾಂತರಾಜು ಆಯೋಗದ ವರದಿ ಜಾರಿ ಬಗ್ಗೆ ಭರವಸೆ ನೀಡಿದ್ದರು. ಸರ್ಕಾರ ರಚನೆಯಾಗಿ 2 ವರ್ಷಗಳಾಗುತ್ತಿವೆ. ಆದರೂ, ವರದಿಯನ್ನು ಬಿಡುಗಡೆ ಮಾಡದೆ, ಬರೀ ಸಬೂಬು ಹೇಳುತ್ತಿದ್ದಾರೆ. ಶೋಷಿತ ಸಮುದಾಯಗಳನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಹಲವು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ, ಉಪಯೋಗವಾಗಿಲ್ಲ. ಮುಖ್ಯಮಂತ್ರಿಗಳ ಕೈಕಟ್ಟಿ ಹಾಕಿರುವುದು ಯಾರು? ಒಳಮೀಸಲಾತಿ ಮತ್ತು ಕಾಂತರಾಜು ವರದಿಯ ಅನುಷ್ಠಾನಕ್ಕಾಗಿ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದ್ದೇವೆ ಎಂದು ತಿಳಿಸಿದರು.

ಕಾಂತರಾಜು ಆಯೋಗದ ವರದಿ ಸಾರ್ವಜನಿಕರ ಹಣದಿಂದ ಮಾಡಿದ ಈ ಸಮೀಕ್ಷಾ ವರದಿ. ಹಾಗಾಗಿ, ಅದು ಸಾರ್ವಜನಿಕರಿಗೆ ಸೇರಬೇಕು. ಆದರೆ, ಅದು ಜನರ ಕೈ ಸೇರುತ್ತಿಲ್ಲ. ಕರ್ನಾಟಕವನ್ನು ನೋಡಿಕೊಂಡು ಬಿಹಾರ ಜಾತಿ ಸಮೀಕ್ಷೆ ನಡೆಸಿದೆ. ಮೋದಿಗೆ ಬೆಂಬಲ ನೀಡಿರುವ ಬಿಹಾರ ಸರ್ಕಾರವೇ ವರದಿಯನ್ನು ಜಾರಿಗೊಳಿಸಿದೆ. ಆದರೆ, ಕರ್ನಾಟಕದಲ್ಲಿ ವರದಿ ಜಾರಿಯಾಗಿಲ್ಲ. ರಾಜ್ಯದಲ್ಲಿ ಯಾವ, ಯಾವ ಜಾತಿಗಳಿವೆ ಎಂದು ಅಧ್ಯಯನ ಮಾಡಿ ಅವುಗಳ ಆರ್ಥಿಕ, ಶಿಕ್ಷಣ ಸ್ಥಿತಿ ಏನು ಎಂಬುವುದರ ಆಧಾರದ ಮೇಲೆ ಸಾಮಾಜಿಕ ಸ್ಥಾನಮಾನ ನೀಡಬೇಕು. ಜನರ ಬೇಡಿಕೆಯೇನು ಎಂಬುವುದನ್ನು ಅರ್ಥ ಮಾಡಿಕೊಂಡು ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಬೇಕು. ಸರ್ಕಾರ ತ್ವರಿತವಾಗಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹಿರಿಯ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ಶೋಷಿತ ವರ್ಗಗಳ ಸಮಸ್ಯೆಗಳು ಏನೆಲ್ಲ ಇವೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಕೇಂದ್ರ ಸರ್ಕಾರ ಮನುಧರ್ಮ ತರಬೇಕು ಎಂದು ಹವಣಿಸುತ್ತಿದೆ. ಆದರೆ, ಸಂವಿಧಾನ ಆಶಯಗಳಿಗೆ ಅನುಗುಣವಾಗಿರುವ ನ್ಯಾಯಯುತ ಬೇಡಿಕೆಗೆ ಸರ್ಕಾರದಿಂದ ಸ್ಪಂದನೆ ಇಲ್ಲ. ಈ ಬಗ್ಗೆ ಪ್ರಶ್ನಿಸಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಕಾಂತರಾಜು ವರದಿಯನ್ನು ಸರ್ಕಾರ ಜಾರಿಗೆ ತರಲೇಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಅಬ್ದುಲ್ ಮನ್‌ ಸೇಠ್ ಮಾತನಾಡಿ, ಕಾಂತರಾಜು ವರದಿ ಏಕೆ ಜಾರಿಯಾಗುತ್ತಿಲ್ಲ ಎಂಬುವುದು ತಿಳಿಯುತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕಾಂತರಾಜು ವರದಿ ಜಾರಿ ಮಾಡಿರಲಿಲ್ಲ. ಈ ವರದಿಯನ್ನು ಮುಚ್ಚಿ ಹಾಕಿದ್ದಾರೆ ಎಂದು ಕೊಂಡಿದ್ದೆವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವರದಿ ಜಾರಿ ಮಾಡುತ್ತದೆ ಎಂಬ ಭರವಸೆ ಇತ್ತು. ಆದರೆ, ಸರ್ಕಾರ ಈ ಬಗ್ಗೆ ಗಮನ ಕೊಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಕಿವಿಯಿಲ್ಲ ಎಂದು ಹೇಳುತ್ತೇವೆ. ಕಾಂಗ್ರೆಸ್ ಸರ್ಕಾರಕ್ಕೂ ಕೂಡ ಕಿವಿಯಲ್ಲ. ಉಪ-ಚುನಾವಣೆ ಮುಗಿದ ತಕ್ಷಣ ಈ ಬಗ್ಗೆ ಗಮನ ಹರಿಸಲಾಗುವುದು ಎಂದಿದ್ದರು. ಆದರೆ, ಯಾವುದೇ ರೀತಿಯ ಕೆಲಸ ಮಾಡಿಲ್ಲ. ನಾವು ಗಾಂಧೀಜಿಯ ಅಸ್ತ್ರ ಹಿಡಿಯಬೇಕಾಗಿದೆ ಎಂದರು.

ಡಾ. ಮನೋಹರ್ ಚಂದ್ರ ಪ್ರಸಾದ್ ಮಾತನಾಡಿ, ಕಾಂತರಾಜು ವರದಿ ಜಾರಿಗೆ ಬರಲೇಬೇಕು. ಕಳೆದ ಉಪ ಚುನಾವಣೆವರೆಗೂ ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಕೆಲಸ ಮಾಡಿದ್ದೇವೆ. ಈಗ ಎಲ್ಲ ಚುನಾವಣೆಗಳು ಮುಗಿದಿವೆ, ನಾವಿನ್ನೂ ನಿರೀಕ್ಷೆಯಲ್ಲಿದೆ. ಆದಷ್ಟು ಬೇಗ ಸರ್ಕಾರ ವರದಿಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಕಾಣುವುದು ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂತರಾಜು ವರದಿಯನ್ನು ಜಾರಿಗೆ ತನ್ನಿ ಎಂದು ಹೇಳುತ್ತಿಲ್ಲ. ಮೊದಲು ಅದನ್ನು ಬಿಡುಗಡೆ ಮಾಡಿ. ಜನರ ಮುಂದೆ ಇಡಿ ಎನ್ನುತ್ತಿದ್ದೇವೆ. ಯಾವ ಆಧಾರದ ಮೇಲೆ ನೀವು ಮೀಸಲಾತಿ ಹಂಚುತ್ತಿದ್ದೀರಿ? ಹಲವು ವರ್ಷಗಳ ಹಿಂದೆ ಇರುವ ವರದಿಯ ಆಧಾರದ ಮೇಲೆ ಮೀಸಲಾತಿ ಹಂಚಲಾಗುತ್ತಿದೆ. ಆದರೆ, ಈ ವರದಿ 11 ವರ್ಷ ಹಳೆಯದು ಎನ್ನುತ್ತೀರಿ. ಅದಕ್ಕೂ ಹಿಂದಿನ ವರದಿಗಳ ಆಧಾರದ ಮೇಲೆ ಮೀಸಲಾತಿ ನೀಡುತ್ತಿರುವಾಗ, 11 ವರ್ಷಗಳ ಹಿಂದಿನ ವರದಿಯನ್ನು ಜಾರಿಗೆ ತರುವುದರಲ್ಲಿ ಸಮಸ್ಯೆಯಿಲ್ಲ ಎಂದು ಕೆ.ಎಂ ರಾಮಚಂದ್ರಪ್ಪ ಹೇಳಿದರು.

ಸೌಜನ್ಯ : ಈದಿನ.ಕಾಂ 

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...