Homeಕರ್ನಾಟಕಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

ಕಾಂತರಾಜು ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

- Advertisement -
- Advertisement -

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುತ್ತದೆ ಎಂದು ಭಾವಿಸಿದ್ದೆವು. ಆದರೆ, ಸರ್ಕಾರ ಬಲಿಷ್ಠ ಜಾತಿಗಳ ಒತ್ತಡಕ್ಕೆ ಒಳಗಾಗಿದ್ದು, ಶೋಷಿತರನ್ನು ಕಡೆಗಣಿಸುತ್ತಿದೆ” ಎಂದು ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಮೀಸಲಾತಿ ನಿಗದಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿರುವ ಕಾಂತರಾಜು ಆಯೋಗದ ವರದಿಯನ್ನೂ ಸರ್ಕಾರ ಜಾರಿಗೆ ತಂದಿಲ್ಲ. ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ, ಜನಾಭಿಪ್ರಾಯ ಪಡೆಯಬೇಕು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವರದಿಗಳು ಮತ್ತು ಅವುಗಳ ಜಾರಿಯ ಬಗ್ಗೆ ಸಂಪುಟ ಸಭೆಯಲ್ಲೂ ಚರ್ಚೆಯಾಗದಂತೆ ಬಲಿಷ್ಠ ಜಾತಿಗಳು ತಡೆಯುತ್ತಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ಜಾರಿಯ ಭರವಸೆ ನೀಡಿದೆ. ಈಗ ಅದರಂತೆ ನಡೆದುಕೊಳ್ಳಬೇಕು. ಸಮ ಸಮಾಜ ನಿರ್ಮಿಸಲು, ವಂಚಿತರ ಸ್ಥಿತಿ ತಿಳಿಯಲು, ತಳ ಸಮುದಾಯಗಳ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸುವ ಕಾಂತರಾಜು ವರದಿಯನ್ನು ಜನರ ಮುಂದಿಡಿ ಎಂದು ಒತ್ತಾಯಿಸಿದರು.

ಜಾತ್ಯತೀತ ಸರ್ಕಾರ ಬರಬೇಕು, ಕೋಮುವಾದಿ ಸರ್ಕಾರ ತೊಲಗಬೇಕು ಎಂದು ಶೋಷಿತ ಸಮುದಾಯಗಳು ಕಾಂಗ್ರೆಸ್‌ಗೆ ಮತ ಹಾಕಿ ಗೆಲ್ಲಿಸಿವೆ. ಶೋಷಿತ ಸಮುದಾಯಗಳ ಪಾಲುದಾರಿಕೆಯಲ್ಲಿ ಬಂದಿರುವ ಕಾಂಗ್ರೆಸ್ ಸರ್ಕಾರ, ಈಗ ವರದಿಯನ್ನು ಜನರ ಮುಂದೆ ಇಡುತ್ತಿಲ್ಲ. ಈ ಹಿಂದೆ, ವರದಿಯನ್ನು ಜಾರಿ ಮಾಡುವುದಾಗಿ ಹೇಳಿದ್ದ ಸರ್ಕಾರ ಈಗ ಯಾಕೆ ಕೈಕಟ್ಟಿ ಕುಳಿತಿದೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಕಾಂತರಾಜು ಆಯೋಗದ ವರದಿ ಜಾರಿ ಬಗ್ಗೆ ಭರವಸೆ ನೀಡಿದ್ದರು. ಸರ್ಕಾರ ರಚನೆಯಾಗಿ 2 ವರ್ಷಗಳಾಗುತ್ತಿವೆ. ಆದರೂ, ವರದಿಯನ್ನು ಬಿಡುಗಡೆ ಮಾಡದೆ, ಬರೀ ಸಬೂಬು ಹೇಳುತ್ತಿದ್ದಾರೆ. ಶೋಷಿತ ಸಮುದಾಯಗಳನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಹಲವು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ, ಉಪಯೋಗವಾಗಿಲ್ಲ. ಮುಖ್ಯಮಂತ್ರಿಗಳ ಕೈಕಟ್ಟಿ ಹಾಕಿರುವುದು ಯಾರು? ಒಳಮೀಸಲಾತಿ ಮತ್ತು ಕಾಂತರಾಜು ವರದಿಯ ಅನುಷ್ಠಾನಕ್ಕಾಗಿ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದ್ದೇವೆ ಎಂದು ತಿಳಿಸಿದರು.

ಕಾಂತರಾಜು ಆಯೋಗದ ವರದಿ ಸಾರ್ವಜನಿಕರ ಹಣದಿಂದ ಮಾಡಿದ ಈ ಸಮೀಕ್ಷಾ ವರದಿ. ಹಾಗಾಗಿ, ಅದು ಸಾರ್ವಜನಿಕರಿಗೆ ಸೇರಬೇಕು. ಆದರೆ, ಅದು ಜನರ ಕೈ ಸೇರುತ್ತಿಲ್ಲ. ಕರ್ನಾಟಕವನ್ನು ನೋಡಿಕೊಂಡು ಬಿಹಾರ ಜಾತಿ ಸಮೀಕ್ಷೆ ನಡೆಸಿದೆ. ಮೋದಿಗೆ ಬೆಂಬಲ ನೀಡಿರುವ ಬಿಹಾರ ಸರ್ಕಾರವೇ ವರದಿಯನ್ನು ಜಾರಿಗೊಳಿಸಿದೆ. ಆದರೆ, ಕರ್ನಾಟಕದಲ್ಲಿ ವರದಿ ಜಾರಿಯಾಗಿಲ್ಲ. ರಾಜ್ಯದಲ್ಲಿ ಯಾವ, ಯಾವ ಜಾತಿಗಳಿವೆ ಎಂದು ಅಧ್ಯಯನ ಮಾಡಿ ಅವುಗಳ ಆರ್ಥಿಕ, ಶಿಕ್ಷಣ ಸ್ಥಿತಿ ಏನು ಎಂಬುವುದರ ಆಧಾರದ ಮೇಲೆ ಸಾಮಾಜಿಕ ಸ್ಥಾನಮಾನ ನೀಡಬೇಕು. ಜನರ ಬೇಡಿಕೆಯೇನು ಎಂಬುವುದನ್ನು ಅರ್ಥ ಮಾಡಿಕೊಂಡು ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಬೇಕು. ಸರ್ಕಾರ ತ್ವರಿತವಾಗಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹಿರಿಯ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ಶೋಷಿತ ವರ್ಗಗಳ ಸಮಸ್ಯೆಗಳು ಏನೆಲ್ಲ ಇವೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಕೇಂದ್ರ ಸರ್ಕಾರ ಮನುಧರ್ಮ ತರಬೇಕು ಎಂದು ಹವಣಿಸುತ್ತಿದೆ. ಆದರೆ, ಸಂವಿಧಾನ ಆಶಯಗಳಿಗೆ ಅನುಗುಣವಾಗಿರುವ ನ್ಯಾಯಯುತ ಬೇಡಿಕೆಗೆ ಸರ್ಕಾರದಿಂದ ಸ್ಪಂದನೆ ಇಲ್ಲ. ಈ ಬಗ್ಗೆ ಪ್ರಶ್ನಿಸಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಕಾಂತರಾಜು ವರದಿಯನ್ನು ಸರ್ಕಾರ ಜಾರಿಗೆ ತರಲೇಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಅಬ್ದುಲ್ ಮನ್‌ ಸೇಠ್ ಮಾತನಾಡಿ, ಕಾಂತರಾಜು ವರದಿ ಏಕೆ ಜಾರಿಯಾಗುತ್ತಿಲ್ಲ ಎಂಬುವುದು ತಿಳಿಯುತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕಾಂತರಾಜು ವರದಿ ಜಾರಿ ಮಾಡಿರಲಿಲ್ಲ. ಈ ವರದಿಯನ್ನು ಮುಚ್ಚಿ ಹಾಕಿದ್ದಾರೆ ಎಂದು ಕೊಂಡಿದ್ದೆವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ವರದಿ ಜಾರಿ ಮಾಡುತ್ತದೆ ಎಂಬ ಭರವಸೆ ಇತ್ತು. ಆದರೆ, ಸರ್ಕಾರ ಈ ಬಗ್ಗೆ ಗಮನ ಕೊಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಕಿವಿಯಿಲ್ಲ ಎಂದು ಹೇಳುತ್ತೇವೆ. ಕಾಂಗ್ರೆಸ್ ಸರ್ಕಾರಕ್ಕೂ ಕೂಡ ಕಿವಿಯಲ್ಲ. ಉಪ-ಚುನಾವಣೆ ಮುಗಿದ ತಕ್ಷಣ ಈ ಬಗ್ಗೆ ಗಮನ ಹರಿಸಲಾಗುವುದು ಎಂದಿದ್ದರು. ಆದರೆ, ಯಾವುದೇ ರೀತಿಯ ಕೆಲಸ ಮಾಡಿಲ್ಲ. ನಾವು ಗಾಂಧೀಜಿಯ ಅಸ್ತ್ರ ಹಿಡಿಯಬೇಕಾಗಿದೆ ಎಂದರು.

ಡಾ. ಮನೋಹರ್ ಚಂದ್ರ ಪ್ರಸಾದ್ ಮಾತನಾಡಿ, ಕಾಂತರಾಜು ವರದಿ ಜಾರಿಗೆ ಬರಲೇಬೇಕು. ಕಳೆದ ಉಪ ಚುನಾವಣೆವರೆಗೂ ಕಾಂಗ್ರೆಸ್ ಮೇಲೆ ಭರವಸೆ ಇಟ್ಟು ಕೆಲಸ ಮಾಡಿದ್ದೇವೆ. ಈಗ ಎಲ್ಲ ಚುನಾವಣೆಗಳು ಮುಗಿದಿವೆ, ನಾವಿನ್ನೂ ನಿರೀಕ್ಷೆಯಲ್ಲಿದೆ. ಆದಷ್ಟು ಬೇಗ ಸರ್ಕಾರ ವರದಿಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಕಾಣುವುದು ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂತರಾಜು ವರದಿಯನ್ನು ಜಾರಿಗೆ ತನ್ನಿ ಎಂದು ಹೇಳುತ್ತಿಲ್ಲ. ಮೊದಲು ಅದನ್ನು ಬಿಡುಗಡೆ ಮಾಡಿ. ಜನರ ಮುಂದೆ ಇಡಿ ಎನ್ನುತ್ತಿದ್ದೇವೆ. ಯಾವ ಆಧಾರದ ಮೇಲೆ ನೀವು ಮೀಸಲಾತಿ ಹಂಚುತ್ತಿದ್ದೀರಿ? ಹಲವು ವರ್ಷಗಳ ಹಿಂದೆ ಇರುವ ವರದಿಯ ಆಧಾರದ ಮೇಲೆ ಮೀಸಲಾತಿ ಹಂಚಲಾಗುತ್ತಿದೆ. ಆದರೆ, ಈ ವರದಿ 11 ವರ್ಷ ಹಳೆಯದು ಎನ್ನುತ್ತೀರಿ. ಅದಕ್ಕೂ ಹಿಂದಿನ ವರದಿಗಳ ಆಧಾರದ ಮೇಲೆ ಮೀಸಲಾತಿ ನೀಡುತ್ತಿರುವಾಗ, 11 ವರ್ಷಗಳ ಹಿಂದಿನ ವರದಿಯನ್ನು ಜಾರಿಗೆ ತರುವುದರಲ್ಲಿ ಸಮಸ್ಯೆಯಿಲ್ಲ ಎಂದು ಕೆ.ಎಂ ರಾಮಚಂದ್ರಪ್ಪ ಹೇಳಿದರು.

ಸೌಜನ್ಯ : ಈದಿನ.ಕಾಂ 

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...