Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ : ಇಂದು ಮತದಾನ

ದೆಹಲಿ ವಿಧಾನಸಭೆ ಚುನಾವಣೆ : ಇಂದು ಮತದಾನ

ಈ ಬಾರಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ

- Advertisement -
- Advertisement -

ದೆಹಲಿಯ 70 ಸದಸ್ಯ ಬಲದ ವಿಧಾನಸಭೆಗೆ ಇಂದು (ಫೆ.5) ಮತದಾನ ನಡೆಯುತ್ತಿದೆ. ಮುಂದಿನ ಐದು ವರ್ಷಗಳ ಕಾಲ ಕೇಂದ್ರಾಡಳಿತ ಪ್ರದೇಶವಾದ ರಾಷ್ಟ್ರ ರಾಜಧಾನಿಯನ್ನು ಯಾರು ಮುನ್ನಡೆಸುತ್ತಾರೆ ಎಂಬುವುದನ್ನು ಈ ಚುನಾವಣೆ ನಿರ್ಧರಿಸಲಿದೆ. ಒಂದೇ ಹಂತದಲ್ಲಿ ನಡೆಯುವ ಚುನಾವಣೆಗೆ 13,033 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದೆ.

ಈ ಬಾರಿಯ ಚುನಾವಣೆಯಲ್ಲಿ ಆಡಳಿತರೂಢ ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಫೆಬ್ರವರಿ 8ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಒಟ್ಟು 1.5 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸುವ ಅರ್ಹತೆ ಹೊಂದಿದ್ದು, 699 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಅಭ್ಯರ್ಥಿಗಳಲ್ಲಿ 603 ಪುರುಷರು, 95 ಮಹಿಳೆಯರು ಮತ್ತು ಒಬ್ಬರು ತೃತೀಯ ಲಿಂಗಿ ಇದ್ದಾರೆ.

ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಎಎಪಿಯೇ ಪ್ರಾಬಲ್ಯ ಹೊಂದಿತ್ತು. ಚುನಾವಣಾ ಪೂರ್ವದ ನಿರೀಕ್ಷೆಯಂತೆ ಗೆದ್ದು ಸರ್ಕಾರ ರಚಿಸಿತ್ತು. ಬಿಜೆಪಿ ಸಂಪೂರ್ಣ ನೆಲ ಕಚ್ಚಿತ್ತು, ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿತ್ತು.

2015ರ ಚುನಾವಣೆಯಲ್ಲಿ ಎಎಪಿ ಶೇಖಡ 54.6ರಷ್ಟು ಮತಗಳನ್ನು ಪಡೆದು ದಾಖಲೆಯ 67 ಸ್ಥಾನಗಳೊಂದಿಗೆ ಭರ್ಜರಿ ಜಯ ಸಾಧಿಸಿತ್ತು. ಉಳಿದ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. 2020ರ ಚುನಾವಣೆಯಲ್ಲಿ ಎಎಪಿಯ ಮತ ಹಂಚಿಕೆ ಮತ್ತು ಸ್ಥಾನಗಳು ಕ್ರಮವಾಗಿ ಶೇಖಡ 53.6 ಮತ್ತು 62ಕ್ಕೆ ಅಲ್ಪ ಕುಸಿತ ಕಂಡಿತ್ತು. ಬಿಜೆಪಿ ಉಳಿದ ಎಂಟು ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತೆ ತನ್ನ ಖಾತೆ ತೆರೆಯಲು ವಿಫಲವಾಗಿತ್ತು.

ಆದರೆ, ಈ ಬಾರಿ ಸಂಪೂರ್ಣ ಚಿತ್ರಣ ಬದಲಾಗಿದೆ. ಎಎಪಿಯ ಪ್ರಾಬಲ್ಯ ಕಳೆಗುಂದಿದಂತೆ ಕಾಣುತ್ತಿದೆ. ಬಿಜೆಪಿ ಮತ್ತೆ ಪುಟಿದೆದ್ದಿದೆ. ಕಾಂಗ್ರೆಸ್ ಕೂಡ ಗೆಲ್ಲುವ ಉತ್ಸಾಹದಲ್ಲಿದೆ. ಹಾಗಾಗಿ, ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಮೂರೂ ಪಕ್ಷಗಳು ಆರೋಪ-ಪ್ರತ್ಯಾರೋಪ, ದೂರು-ಪ್ರತಿದೂರು, ನೂರಾರು ಭರವಸೆಗಳೊಂದಿಗೆ ಮತದಾರರ ಮನವೊಲಿಸಲು ಶತ ಪ್ರಯತ್ನ ಮಾಡಿವೆ. ಅಂತಿಮವಾಗಿ ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎನ್ನುವುದು ಫಲಿತಾಂಶ ಬಂದ ಬಳಿಕ ಗೊತ್ತಾಗಲಿದೆ.

ಕೆಲವೊಂದು ಕ್ಷೇತ್ರಗಳಲ್ಲಿ ಘಟಾನುಘಟಿಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ನವ ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಸಂಚಾಲಕ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಅಗ್ನಿ ಪರೀಕ್ಷೆಗೆ ಇಳಿದಿದ್ದಾರೆ. ಇವರ ವಿರುದ್ದ ಬಿಜೆಪಿಯಿಂದ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಸ್ಪರ್ಧಿಸಿದ್ದಾರೆ. ಈ ಇಬ್ಬರೂ ಮಾಜಿ ಸಂಸದರು. ವಿಶೇಷವಾಗಿ ಸಂದೀಪ್ ದೀಕ್ಷಿತ್ ಅವರು ಮಾಜಿ ಸಿಎಂ, ಹಿರಿಯ ಕಾಂಗ್ರೆಸ್‌ ನಾಯಕಿ ದಿವಂಗತ ಶೀಲಾ ದೀಕ್ಷಿತ್ ಅವರ ಮಗನೂ ಹೌದು.

ಕಲ್ಕಾಜಿ ಕ್ಷೇತ್ರದಲ್ಲಿ ದೆಹಲಿಯ ಹಾಲಿ ಸಿಎಂ ಅತಿಶಿ ಮರ್ಲೇನಾ ಎಎಪಿಯಿಂದ ಮತ್ತೆ ಸ್ಪರ್ಧಿಸಿದ್ದಾರೆ. ಇವರ ವಿರುದ್ದ ಬಿಜೆಪಿ ಮಾಜಿ ಸಂಸದ, ವಿವಾದಾತ್ಮಕ ಹೇಳಿಕೆಗಳಿಂದ ಕುಖ್ಯಾತಿ ಪಡೆದಿರುವ ರಮೇಶ್ ಬಿಧುರಿ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಅಲ್ಕಾ ಲಂಬಾ ಸ್ಪರ್ಧೆ ಮಾಡಿದ್ದಾರೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಈ ಬಾರಿ ಪತ್ಪರ್‌ಗಂಜ್‌ ಬದಲಾಗಿ ಜಂಗ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇವರ ವಿರುದ್ದ ಬಿಜೆಪಿಯ ತರವಿಂದರ್ ಸಿಂಗ್ ಮಾರ್ವಾ ಮತ್ತು ಕಾಂಗ್ರೆಸ್‌ನ ಫರ್ಹಾದ್ ಸೂರಿ ಕಣಕ್ಕಿಳಿದಿದ್ದಾರೆ.

ಬಲ್ಲಿಮಾರನ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಹಾರೂನ್ ಯೂಸುಫ್ ಮತ್ತು ಹಾಲಿ ಎಎಪಿ ಸಚಿವ ಇಮ್ರಾನ್ ಹುಸೇನ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

ಗ್ರೇಟರ್ ಕೈಲಾಶ್, ಮಾಳವೀಯ ನಗರ, ಗಾಂಧಿ ನಗರ, ಮಂಗೋಲ್‌ಪುರಿ, ಪತ್ಪರ್‌ಗಂಜ್ ಮತ್ತು ಮಾಟಿಯಾ ಮಹಲ್ ಈ ಬಾರಿಯ ಚುನಾವಣೆಯಲ್ಲಿ ಪ್ರಾಮುಖ್ಯತೆ ಪಡೆದಿರುವ ವಿಧಾನಸಭಾ ಕ್ಷೇತ್ರಗಳಾಗಿವೆ.

ವಿಪಕ್ಷ ನಾಯಕರದ್ದು ‘ಅರ್ಬನ್ ನಕ್ಸಲರ ಭಾಷೆ’ ಎಂದ ಪ್ರಧಾನಿ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...