Homeಮುಖಪುಟತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

ತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

- Advertisement -
- Advertisement -

ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮಂಗಳವಾರ (ಫೆ.4) ವಿಧಾನಸಭೆಯಲ್ಲಿ ಮಂಡಿಸಿದ ಸಾಮಾಜಿಕ-ಆರ್ಥಿಕ, ರಾಜಕೀಯ, ಜಾತಿ, ಶಿಕ್ಷಣ ಮತ್ತು ಉದ್ಯೋಗ ಸಮೀಕ್ಷೆ (ಜಾತಿ ಸಮೀಕ್ಷೆ) ವರದಿಯನ್ನು ವಿಧಾನಪರಿಷತ್‌ನ ಕಾಂಗ್ರೆಸ್‌ ಸದಸ್ಯ ಚಿಂತಪಾಂಡು ನವೀನ್ ಅಲಿಯಾಸ್ ತೀನ್ಮಾರ್ ಮಲ್ಲಣ್ಣ ಸುಟ್ಟು ಹಾಕಿದ್ದಾರೆ.

ನಾನು ಈ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದು ಹಿಂದುಳಿದ ಜಾತಿಗಳ ಭವಿಷ್ಯವನ್ನು ನಾಶ ಮಾಡುವ ಪಿತೂರಿ ಎಂದು ಮಲ್ಲಣ್ಣ ಹೇಳಿದ್ದಾರೆ. ವರದಿಯಲ್ಲಿರುವ ಅಂಕಿ ಅಂಶಗಳು ನಕಲಿ. ಹಿಂದುಳಿದ ಜಾತಿಗಳು ಇದನ್ನು ಒಪ್ಪುವುದಿಲ್ಲ. ಸಮೀಕ್ಷೆ ವೇಳೆ 40 ಲಕ್ಷ ಹಿಂದುಳಿದ ಜಾತಿಗಳ ಜನರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಮಲ್ಲಣ್ಣ ಆರೋಪಿಸಿದ್ದಾರೆ.

ಸರ್ಕಾರ ನಕಲಿ ಅಂಕಿ ಅಂಶಗಳೊಂದಿಗೆ ಹಿಂದುಳಿದ ಜಾತಿಗಳನ್ನು ದಾರಿ ತಪ್ಪಿಸಿದೆ ಮತ್ತು ವಂಚಿಸಿದೆ. ರಾಜ್ಯದ ಜನ ಸಂಖ್ಯೆಯಲ್ಲಿ ಹಿಂದುಳಿದ ಹಿಂದೂಗಳ ಸಂಖ್ಯೆ ಶೇಖಡ 60ರಷ್ಟಿದೆ. ಆದರೆ, ಸಮೀಕ್ಷೆ ಕೇವಲ 46 ಶೇಖಡ ಎಂದು ತೋರಿಸಿದೆ. ಇತರ ಜಾತಿಗಳ ಜನ ಸಂಖ್ಯೆ ಶೇಖಡ 15 ಎಂದಿದೆ. ವಾಸ್ತವದಲ್ಲಿ ಅವರು ಕೇವಲ 8 ಶೇಖಡ ಮಾತ್ರ ಇದ್ದಾರೆ ಎಂದು ಮಲ್ಲಣ್ಣ ಹೇಳಿದ್ದಾರೆ.

ಈ ಸಮೀಕ್ಷೆಯ ಹಿಂದೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಕೆ. ಜನಾ ರೆಡ್ಡಿ ಅವರ ಕೈವಾಡವಿದೆ ಎಂದು ಮಲ್ಲಣ್ಣ ಆರೋಪಿಸಿದ್ದಾರೆ.

ಮಲ್ಲಣ್ಣ ಅವರ ನಡೆಗೆ ಕಾಂಗ್ರೆಸ್ ಪಕ್ಷದ ನಾಯಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಜಾತಿ ಸಮೀಕ್ಷೆ ವರದಿಗೆ ಬೆಂಕಿ ಹಚ್ಚಿದ್ದಕ್ಕಾಗಿ ಮತ್ತು ರೆಡ್ಡಿ ಸಮುದಾಯದ ವಿರುದ್ಧ ಮಲ್ಲಣ್ಣ ನೀಡಿರುವ ಹೇಳಿಕೆಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ (ಟಿಪಿಸಿಸಿ) ಶಿಸ್ತು ಸಮಿತಿ ಮಲ್ಲಣ್ಣ ಅವರಿಗೆ ಶೋಕಾಸ್ (ಕಾರಣ ಕೇಳಿ) ನೋಟಿಸ್ ನೀಡಿದೆ. ನಿಮ್ಮ ವಿರುದ್ದ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? ಎಂದು ಪ್ರತಿಕ್ರಿಯೆ ಕೇಳಿದೆ.

ಮಲ್ಲಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಟಿಪಿಸಿಸಿ ಅಧ್ಯಕ್ಷ ಮಹೇಶ್ ಕುಮಾರ್ ಗೌಡ್ ಅವರಿಗೆ ಹಲವಾರು ನಾಯಕರು ಮತ್ತು ಕಾರ್ಯಕರ್ತರು ಮನವಿ ಮಾಡಿದ್ದಾರೆ. ಮಲ್ಲಣ್ಣ ತಮ್ಮ ಮಿತಿಯನ್ನು ಮೀರುತ್ತಿದ್ದಾರೆ ಎಂದು ಯಾದಾದ್ರಿ ಭೋಂಗಿರ್‌ನ ಕಾಂಗ್ರೆಸ್ ಶಾಸಕ ಕುಂಭಮ್ ಅನಿಲ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಪಕ್ಷದ ನಾಯಕತ್ವ ಶೀಘ್ರದಲ್ಲೇ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಈ ನಡುವೆ ರೆಡ್ಡಿ ಸಮುದಾಯದ ಮುಖಂಡರು ಮಲ್ಲಣ್ಣ ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ದೂರು ನೀಡಿದ್ದಾರೆ. ಎರಡು ದಿನಗಳ ಹಿಂದೆ ವಾರಂಗಲ್‌ನಲ್ಲಿ ಹಿಂದುಳಿದ ಜಾತಿಗಳ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಮಲ್ಲಣ್ಣ, ರೆಡ್ಡಿಗಳ ವಿರುದ್ಧ ಅಸಭ್ಯ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.

ತೀನ್ಮಾರ್ ಮಲ್ಲಣ್ಣ ಎಂದೇ ಪ್ರಸಿದ್ಧರಾಗಿರುವ ಚಿಂತಪಾಂಡು ನವೀನ್ ಅವರು ಸಾಮಾಜಿಕ ಮಾಧ್ಯಮ (ಯೂಟ್ಯೂಬ್) ಚಾನೆಲ್ ನಡೆಸುತ್ತಿದ್ದಾರೆ. ಹಿಂದಿನ ಬಿಆರ್‌ಎಸ್ ಸರ್ಕಾರದ ಕಟು ಟೀಕಾಕಾರರಾಗಿದ್ದ ಇವರು, ನಂತರ ಬಿಜೆಪಿ ಸೇರಿದ್ದರು. ನವೆಂಬರ್ 2023ರಲ್ಲಿ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಜೂನ್ 2024ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ವಾರಂಗಲ್-ನಲ್ಗೊಂಡ-ಖಮ್ಮಾಮ್ ಪದವೀಧರ ಎಂಎಲ್‌ಸಿ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರು.

ತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...