Homeಕರ್ನಾಟಕರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ...

ರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ ತುರ್ತು ಬಹಿರಂಗ ಪತ್ರ

- Advertisement -
- Advertisement -

ರೈತ ಸಂಘಟನೆಗಳ ತೀವ್ರ ಪ್ರತಿರೋಧದಿಂದಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದ್ದ ಮೂರು ಕೃಷಿ ಕಾಯ್ದೆಗಳ ಮೂಲಕವೇ ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚಿಸಿರುವುದಾಗಿ ಮಂಗಳವಾರ (ಫೆ.4) ವರದಿಯಾಗಿದೆ.

ಈ ಬೆನ್ನಲ್ಲೇ ರಾಜ್ಯದ ರೈತ ಸಂಘಟನೆಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಬಹಿರಂಗ ಪತ್ರ ಬರೆದಿರುವ ಸಂಯುಕ್ತ ಹೋರಾಟ ಸಮಿತಿ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಒತ್ತಾಯಿಸಿದೆ. ಹೋರಾಟದ ಎಚ್ಚರಿಕೆ ನೀಡಿದೆ.

ಪತ್ರಿಕೆಯ ವರದಿಯನ್ನು ಓದಿ ನಾವು ಆಘಾತಕ್ಕೊಳಗಾಗಿದ್ದೇವೆ. ಸರ್ಕಾರದ ನಿಲುವು ಇದೇ ಆಗಿದ್ದರೆ, ಇದು ರೈತ ಕುಲಕ್ಕೆ ಮಾಡುತ್ತಿರುವ ಮಹಾದ್ರೋಹವಾಗಿದೆ. ನಾವಿದನ್ನು ಉಗ್ರವಾಗಿ ಪ್ರತಿಭಟಿಸಿ ಬೀದಿಗೆ ಇಳಿಯಬೇಕಾಗುತ್ತದೆ. ನಿಮ್ಮಿಂದ ಸ್ಪಷ್ಟನೆ ಪಡೆಯಲು ಈ ಬಹಿರಂಗ ಪತ್ರ ಬರೆಯುತ್ತಿದ್ದೇವೆ ಎಂದು ಸಮಿತಿಯ ಪ್ರಮುಖರು ಸಿಎಂಗೆ ತಿಳಿಸಿದ್ದಾರೆ.

“ರೈತರ ಆದಾಯವನ್ನು ದ್ವಿಗುಣಗೊಳಿಸುವ ಬೋಗಸ್ ಮಾತುಗಳೊಂದಿಗೆ ಬಿಜೆಪಿ ಪಕ್ಷ ಕೃಷಿ ಭೂಮಿಯನ್ನು, ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಸಂಪೂರ್ಣವಾಗಿ ಕಾರ್ಪೋರೇಟ್ ಕಂಪನಿಗಳಿಗೆ ಹಸ್ತಾಂತರಿಸುವ ಹುನ್ನಾರ ನಡೆಸುತ್ತಿದೆ. ಅದರ ಭಾಗವಾಗಿ ಮೂರು ಕರಾಳ ಕೃಷಿ ಕಾನೂನುಗಳನ್ನು ಜಾರಿಗೊಳಿಸಿತ್ತು. ದೇಶದ 562 ರೈತ ಸಂಘಟನೆಗಳು ಒಂದು ವರ್ಷಕ್ಕೂ ಹೆಚ್ಚು ಸಮಯ ನಿರಂತರ ಹೋರಾಟ ನಡೆಸಿದ ಪರಿಣಾಮವಾಗಿ ಕೇಂದ್ರ ಸರ್ಕಾರ ಮೂರು ಕಾನೂನುಗಳನ್ನು ವಾಪಸ್ ಪಡೆಯಿತು. ಈ ಹೋರಾಟದ ಸಂದರ್ಭದಲ್ಲಿ 700ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

“ರೈತರ ಹೋರಾಟಕ್ಕೆ ಮಣಿದ ಸರ್ಕಾರ ಮೂರು ಕಾನೂನುಗಳನ್ನು ಹಿಂಪಡೆಯುದಾಗಿ ಹೇಳಿತ್ತು. ಆದರೆ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಹಿಂಬಾಗಿಲ ಮೂಲಕ ಅದನ್ನು ಜಾರಿಗೊಳಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಭೂ ಸುಧಾರಣೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವುದು ಅದರ ಭಾಗವಾಗಿಯೇ. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ರೈತರ ಹೋರಾಟಕ್ಕೆ ಬೆಂಬಲ ಕೊಟ್ಟಿತ್ತು. ಇಬ್ಬರೂ ಸೇರಿ ಹೋರಾಡೋಣ ಎಂದಿತ್ತು. 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುತ್ತೇವೆ, ರೈತರ ಮೇಲೆ ಹಾಕಿರುವ ರಾಜಕೀಯ ಪ್ರೇರಿತ ಪ್ರಕರಣಗಳನ್ನು ವಾಪಸ್ ಪಡೆಯುತ್ತೇವೆ, ಎಂಎಸ್‌ಪಿ ಜಾರಿಗೊಳಿಸುತ್ತೇವೆ ಮತ್ತು ಬಡ್ಡಿ ರಹಿತ ಸಾಲದ ಪ್ರಮಾಣ ಹೆಚ್ಚಿಸುತ್ತೇವೆ ಎಂಬುವುದಾಗಿ ಭರವಸೆ ನೀಡಿತ್ತು” ಎಂದು ನೆನಪಿಸಲಾಗಿದೆ.

“ಬಿಜೆಪಿಯ ಕಾಯ್ದೆಗಳನ್ನು ಹಾಗೆಯೇ ಮುಂದುವರಿಸಿದ್ದೀರಿ, ಬಿಜೆಪಿ ನೇಮಿಸಿದ್ದ ಬೆಲೆ ಆಯೋಗವನ್ನು ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಿದ್ದೀರಿ, ಬಿಜೆಪಿ ನೀಡಿದ್ದ ಮಾರ್ಗಸೂಚಿಗಳನ್ನೇ ನಿಮ್ಮ ಸರ್ಕಾರವೂ ನೀಡಿದೆ. ಅದರಲ್ಲಿ ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ಮಾಡಿದ್ದ, ರೈತ ಹೋರಾಟದಿಂದ ಹಿಂಪಡೆದಿರುವ ತಿದ್ದುಪಡಿ ಕಾಯ್ದೆಗಳನ್ನೇ ಉಲ್ಲೇಖಿಸಿ, ಇವುಗಳನ್ನು ಅನುಷ್ಠಾನ ಮಾಡಲು ಏನೆಲ್ಲಾ ಮಾಡಬೇಕು ಎಂದು ಅಧ್ಯಯನ ಮಾಡಿ ಶಿಫಾರಸು ಮಾಡಿ ಎಂದು ಕೇಳಿದ್ದೀರಿ. ಎಂಎಸ್‌ಪಿ ಜಾರಿ ಮಾಡುವ, ಸರ್ಕಾರ ರೈತರ ಸಹಾಯಕ್ಕೆ ಬರುವ ಒಂದೇ ಒಂದು ಮಾತೂ ಇದರಲ್ಲಿ ಇಲ್ಲ. ಇದು ನಮಗೆ ಅಪಾರ ನೋವು ತಂದಿದೆ. ಇದಕ್ಕೆ ಕೂಡಲೇ ಸರ್ಕಾರ ಉತ್ತರ ನೀಡಲೇಬೇಕಿದೆ” ಎಂದು ಸಂಯುಕ್ತ ಹೋರಾಟ ಸಮಿತಿಯ ಪತ್ರದಲ್ಲಿ ಒತ್ತಾಯಿಸಲಾಗಿದೆ.

ತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ : ಕೆನೆಪದರ ಪ್ರಸ್ತಾವನೆ ತಿರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...