HomeUncategorizedಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

ಅನಂತ್ ಕುಮಾರ್ ಹೆಗಡೆಯ ಹರಕುಬಾಯಿ, ಜಗ್ಗೇಶ್ ಮಾತಿಗೆ ತಾತ್ಕಾಲಿಕವಾಗಿ ಬಿತ್ತು ಬ್ರೇಕ್

- Advertisement -
- Advertisement -

ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ದತೆ ನಡೆಸುತ್ತಿರುವಾಗಲೇ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೆಲವು ಹರಕುಬಾಯಿಯ, ಕೊಳಕು ಮಾತುಗಳ ಸರದಾರರನ್ನು
ಸದ್ದಿಲ್ಲದೆ ಕೈಬಿಡಲಾಗಿದೆ. ಜನರನ್ನು ಪ್ರಚೋದಿಸುವುದು ಮತ್ತು ದ್ವಂದ್ವಾರ್ಥದ ಡೈಲಾಗ್ ಹೇಳಿ ಜನರನ್ನು ನಗಿಸುತ್ತಾ ತಾನು ನಗೆಪಾಟಲಿಗೆ ಒಳಗಾಗುತ್ತಿದ್ದ ವ್ಯಕ್ತಿಗಳನ್ನು ಪ್ರಚಾರಸಭೆಗಳಿಂದ ಕೈಬಿಟ್ಟು ಬಿಜೆಪಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಹೊರಟಿದೆ.

ಹೌದು, ಸಂಸದ ಅನಂತಕುಮಾರ್ ಹೆಗಡೆ ಬಾಯಿ ಬಿಟ್ಟರೆ ಸಾಕು ಬರೀ ದ್ವೇಷದ ಬೆಂಕಿಯನ್ನೇ ಉಗುಳುತ್ತಿದ್ದ ವ್ಯಕ್ತಿ. ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲೀಮರು ಮತ್ತು ದಲಿತರು, ಬಿಜೆಪಿಯೇತರ ಯಾವುದೇ  ಮುಖಂಡರಾಗಲಿ ಅವರ ವಿರುದ್ದ  ಕೆಂಡ ಕಾರುತ್ತಿದ್ದರು.

ಕರಾವಳಿಯವರನ್ನು ಬಿಟ್ಟರೆ ಬೇರೆ ಯಾರಿಗೂ ಕನ್ನಡ ಮಾತನಾಡುವುದೇ ಬರುವುದಿಲ್ಲ ಎಂದು ಹೇಳಿ ಭಾರೀ ಪ್ರಚಾರ ಪಡೆದಿದ್ದರು. ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಮೇಲೆ ಹಲ್ಲೆಯೂ ನಡೆಸಿದ್ದರು. ಸಂವಿಧಾನವನ್ನು ಬದಲಾಯಿಸಲೆಂದೇ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಅನಂತಕುಮಾರ್ ಹೆಗಡೆ ಹೇಳಿಕೆಗೆ ರಾಜ್ಯ ಮತ್ತು ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಇಂತಹ ಪ್ರಚೋದನಾತ್ಮಕ ಮಾತುಗಳಿಂದಲೇ ಅಧಿಕಾರದ ಗದ್ದುಗೆ ಹಿಡಿಯುತ್ತಿರುವ ಬಿಜೆಪಿ ಅದ್ಯಾಕೋ ಅನಂತ ಎಂದರೆ ಅನಂತ ದೂರ ಎಂಬಂತೆ ದೂರದೂರ ಸರಿದಿದೆ.

ಯಾವಾಗಲೇ ಚುನಾವಣೆ ನಡೆಯಲಿ ಅನಂತಕುಮಾರ್ ಹೆಗಡೆ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇರುತ್ತಿತ್ತು. ಆದರೆ ಬಿಜೆಪಿಗೆ ಜ್ಞಾನೋದಯವಾಗಿದೆಯೋ ಅಥವಾ ಬೇಕೆಂದೇ ಅನಂತ ಹೆಗಡೆ ಹೆಸರು ಬಿಟ್ಟಿದೆಯೋ ಗೊತ್ತಿಲ್ಲ. ಆದರೆ ಅವರ ಹೆಸರನ್ನು ಮೆಲ್ಲಗೆ ಇಲ್ಲದಂತೆ ಮಾಡಿದೆ. ಪ್ರಚೋದನೆಯ ಹೇಳಿಕೆಗಳು ಲಾಭವನ್ನು ತಂದುಕೊಡುವುದಿಲ್ಲ ಎಂಬ ಭಾವನೆ ಬಿಜೆಪಿಯಲ್ಲಿ ಬಂದಿದೆಯೋ ಎನ್ನುವ ಅನುಮಾನ ಕಾಡುತ್ತದೆ.

ತಾನು ಹೀಗೆ ಮಾತನಾಡಿದರೆ ಪ್ರಚಾರ ಪಡೆದುಕೊಳ್ಳಬಹುದು ಎಂದುಕೊಂಡಿದ್ದ ಅನಂತಕುಮಾರ್ ಹೆಗಡೆ ಇದೀಗ ಬಾಯಿ ಒಲಿದುಕೊಂಡು ಕೂರುವಂತೆ ಮಾಡಿದೆ ಬಿಜೆಪಿ. ಸಚಿವ ಸ್ಥಾನವೂ ಇಲ್ಲದೆ, ಪ್ರಚಾರ ಸಭೆಗಳಲ್ಲೂ ಭಾಗವಹಿಸದೇ ಅನಂತ ಇರಬೇಕಾಗಿದೆ. ಅಂದರೆ ಇಂತಹ ಹರಕುಬಾಯಿಯಿಂದ ಪಕ್ಷಕ್ಕೆ ಮತಗಳು ಬರುವುದಿಲ್ಲ. ಇವರನ್ನು ಪ್ರಚಾರಕ್ಕೆ ಕರೆದು ತಂದರೆ ಬರುವ ಮತಗಳು ಹೋಗುತ್ತವೆ. ಅವರೇನಿದ್ದರೂ ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತ ಎಂಬ ತೀರ್ಮಾನಕ್ಕೆ ಬಿಜೆಪಿ ಬಂದಂತಿದೆ.

ಇನ್ನೊಂದು ಕಡೆ ಸಿನಿಮಾ ನಟ ಜಗ್ಗೇಶ್ ಅವರ ಹೆಸರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ತುರುವೇಕೆರೆ ಜಡೇಮಾಯಸಂದ್ರದ ಜಗ್ಗೇಶಣ್ಣ ಪ್ರಚಾರ ಪಟ್ಟಿಗೆ ಸೇರ್ಪಡೆ ಮಾಡಲು ಬಿಜೆಪಿ ರಾಜ್ಯ ನಾಯಕತ್ವ ಹಿಂದೇಟು ಹಾಕಿದೆ. ನಟಿಯರಾದ ತಾರ ಮತ್ತು ಶ್ರುತಿ ಅವರ ಜೊತೆ ಜಗ್ಗೇಶ್ ಕೂಡ ಇರುತ್ತಿದ್ದರು. ಈಗ ಅವರು ಬಿಜೆಪಿಯಲ್ಲಿ ಲೆಕ್ಕಕ್ಕೂ, ಆಟಕ್ಕೂ ಇಲ್ಲದ ವ್ಯಕ್ತಿಯಾಗಿದ್ದಾರೆ.

ಸಿನಿಮಾ ಡೈಲಾಗ್ ಹೊಡೆದು ಜನರನ್ನು ರಂಜಿಸುತ್ತಿದ್ದ ಜಗ್ಗೇಶ್ ಈಗ ಸ್ಟಾರ್ ಅಲ್ಲ ಎಂಬುದನ್ನು ಬಿಜೆಪಿ ಕಂಡುಕೊಂಡಿದೆ. ಇದುವರೆಗೂ ಚುನಾವಣೆಗಳಲ್ಲಿ ಅವರನ್ನು ಬಳಸಿಕೊಂಡು ಕಸದಂತೆ ಬಿಸಾಕಿದೆ. ಬಿಜೆಪಿಯಲ್ಲಿ ಗಿಮಿಕ್ ಮಾಡಬಹುದು ಅಂದುಕೊಂಡಿದ್ದ ಜಗ್ಗೇಶಣ್ಣ ಸಿನಿಮಾದ ಜಪ ಮಾಡುತ್ತಿದ್ದಾರೆ ಎಂದು ಕೆಲವರು ಗೇಲಿ ಮಾಡುತ್ತಿದ್ದಾರೆ. ಜಗ್ಗೇಶ್ ಕೂಡಾ ಕೊಳಕು ಮಾತುಗಳನ್ನು ಆಡುತ್ತಿದ್ದರು. ಈಗ ಬಿಜೆಪಿಯಲ್ಲಿ ಅವರ ಪಾತ್ರವೇನು ಎನ್ನುವ ಪ್ರಶ್ನೆ ಎದುರಾಗಿದೆ.

ಕುಮಾರಸ್ವಾಮಿ ಸರ್ಕಾರ ಅಧಿಕಾರದಿಂದ ಇಳಿದು ಯಡಿಯೂರಪ್ಪ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಬಿಜೆಪಿಯನ್ನು ಸಮರ್ಥವಾಗಿ ಸಮರ್ಥಿಸಿಕೊಂಡಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಚಾರಕರ ಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿಪಡುವಂತಾಗಿದೆ. ಆರ್. ಅಶೋಕ ಅವರ ಹೆಸರೂ ಕೂಡ 18ನೇ ಸ್ಥಾನಕ್ಕೆ ಕುಸಿದಿದೆ. ‘ತೆಂಗಿನಕಾಯಿ’ ಬೆಲೆಗಿಂತಲೂ ಕಡಿಮೆ ಎಂದು ಅಶೋಕ್ ಸ್ಥಾನದ ಕುರಿತು ಗೇಲಿ ಮಾಡಿದ್ದಾರೆ.

ಸಜ್ಜನ ರಾಜಕಾರಣಿಯೆಂದು ಘೋಷಿಸಿಕೊಂಡಿರುವ ಎಸ್. ಸುರೇಶ್ ಕುಮಾರ್ ಅವರಿಗೂ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಕಾಂಗ್ರೆಸ್ ನಲ್ಲಿ ಪಾಂಚಜನ್ಯ ಮೊಳಗಿಸಿ ಕೊನೆಗಾಲದಲ್ಲಿ ಬಿಜೆಪಿ ಸೇರ್ಪಡೆಗೊಂಡ ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿಯ ಗರ್ಭಗುಡಿಗೆ ಬಿಟ್ಟುಕೊಂಡಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆಕ್ರೋಶ ಹೊರಹಾಕಿ ಹೊರನಡೆದ ದಲಿತ ನಾಯಕ ವಿ.ಶ್ರೀನಿವಾಸ್ ಪ್ರಸಾದ್ ಅವರಿಗೂ ಪಕ್ಷದ ಹತ್ತಿರ ಸುಳಿಯಗೊಟ್ಟಿಲ್ಲ.

ಆರ್ ಎಸ್ ಎಸ್ ನಿಂದ ರಾಜಕಾರಣಕ್ಕೆ ಬಂದ ಬಿ.ಎಲ್.ಸಂತೋಷ್, ಎಬಿವಿಪಿಯಿಂದ ಬಂದ ಎನ್. ರವಿಕುಮಾರ್ ಮತ್ತು, ಪ್ರಹ್ಲಾದ ಜೋಶಿ ಸೇರಿದಂತೆ ಪ್ರಮುಖ ಬ್ರಾಹ್ಮಣರು ಮತ್ತು ಲಿಂಗಾಯತ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಾಪ್ ಸಿಂಹ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರೂ ಹಿಂದೆ ಕೂರುವಂತಹ ಪರಿಸ್ಥಿತಿ ಇದೆ.

ಗರ್ಭಗುಡಿ ಸಂಸ್ಕೃತಿಯಲ್ಲಿ ಆರ್ ಎಸ್ಎಸ್ ಮೂಲದವರಿಗೆ ಮೊದಲ ಆದ್ಯತೆ ನೀಡಿರುವುದು ಎದ್ದು ಕಾಣುತ್ತದೆ. ಯಡಿಯೂರಪ್ಪ ಬೆಂಬಲಿಗರನ್ನು ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು ಬಿ.ಎಲ್. ಸಂತೋಷ್ ಮತ್ತು ಅಧ್ಯಕ್ಷರ ಕೈ ಮೇಲಾಗಿರುವುದು ಪಟ್ಟಿಯಲ್ಲಿರುವ ಹೆಸರುಗಳನ್ನು ನೋಡಿದರೆ ಗೊತ್ತಾಗುತ್ತದೆ. ಇನ್ನು ಕಾಂಗ್ರೆಸ್ ನಲ್ಲಿ ಸ್ಟಾರ್ ಪ್ರಚಾರಕರಾಗಿದ್ದ,  ಜೆಡಿಎಸ್ ನಲ್ಲಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ಎಚ್.ವಿಶ್ವನಾಥ್ ಬಿಜೆಪಿಯಲ್ಲಿ ಕೇವಲ ಸ್ಥಳೀಯ ಮುಖಂಡರಂತೆ ಇರಬೇಕಾಗಿದೆ.

ಗೋವಿಂದ ಕಾರಜೋಳ ಸೇರಿದಂತೆ ಒಂದಿಬ್ಬರು ಮೂವರು ದಲಿತ ನಾಯಕರ ಹೆಸರನ್ನು ಮತ ಗಳಿಕೆಗೆ ಮಾತ್ರ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹಾಕಲಾಗಿದೆ. ಅದು ನೆಪ ಮಾತ್ರ. ಹಿಂದೆ ಯಡಿಯೂರಪ್ಪ ಸರ್ಕಾರದಲ್ಲಿ ಎ. ನಾರಾಯಣಸ್ವಾಮಿ ಅವರನ್ನು ಪ್ರಚಾರಕರ ಪಟ್ಟಿಯಲ್ಲಿ ಹಾಕಿಕೊಂಡಿದ್ದರು. ಈಗ ಅವರ ಹೆಸರನ್ನು ಕೈಬಿಟ್ಟು ಕೇವಲ ಬ್ರಾಹ್ಮಣರು ಮತ್ತು ಲಿಂಗಾಯತರು ಅದರಲ್ಲೂ ಆರ್ ಎಸ್ ಎಸ್ ಹಿನ್ನೆಲೆಯಿಂದ ಬಂದವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಿಕೊಂಡಿದ್ದಾರೆ.

ಕೆ.ಈ.ಸಿದ್ದಯ್ಯ

 

(ಅತಿಥಿ ಲೇಖಕರ ಬರಹಗಳಲ್ಲಿನ ಅಭಿಪ್ರಾಯಗಳು ಅವರ ಸ್ವಂತದ್ದೇ ಹೊರತು, ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅನಿಸಿಕೆಗಳಾಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...