Homeಮುಖಪುಟ"ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು"...ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

- Advertisement -
- Advertisement -

ಅಕ್ರಮ ವಲಸಿಗರು ಎಂದು ಗುರುತಿಸಲಾದ ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿರುವ ಅಮೆರಿಕ ತನ್ನ ಸೇನಾ ವಿಮಾನದಲ್ಲಿ ಕಳುಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ 104 ಭಾರತೀಯರನ್ನು ಹೊತ್ತ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಬುಧವಾರ (ಫೆ.5) ಬಂದು ತಲುಪಿದೆ.

“ಎಲ್ಲಾ ಅಕ್ರಮ ವಲಸಿಗರನ್ನು ದೇಶದಿಂದ ಹೊರದುಬ್ಬುತ್ತೇವೆ” ಎಂದು ಚುನಾವಣಾ ಪೂರ್ವದಲ್ಲಿ ವಾಗ್ದಾನ ಮಾಡಿದ್ದ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧಿಕಾರಕ್ಕೇರಿದ ಬಳಿಕ ಹೇಳಿದಂತೆ ಮಾಡಿದ್ದಾರೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸಾವಿರಾರು ಜನರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಪ್ರಾರಂಭಗೊಂಡಿದೆ.

ಅಮೃತಸರ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂದಿಳಿದ ಪಂಜಾಬ್ ಮತ್ತು ಹರಿಯಾಣ ಮೂಲದ ಅಕ್ರಮ ವಲಸಿಗರು, ಎಲ್ಲಾ ವಿಧಿ ವಿಧಾನಗಳ ಬಳಿಕ ಪೊಲೀಸ್ ವಾಹನಗಳಲ್ಲಿ ತಮ್ಮ ಊರಿನತ್ತ ತೆರಳಿದ್ದಾರೆ.

ಗಡಿಪಾರು ಮಾಡಲಾದ ಭಾರತೀಯ ವಲಸಿಗರಲ್ಲಿ ಒಬ್ಬರಾದ ಹರಿಯಾಣದ ಜಸ್ಪಾಲ್ ಸಿಂಗ್ “ನಮ್ಮ ಕೈಗೆ ಬೇಡಿ, ಕಾಲಿಗೆ ಸಂಕೋಲೆ ಬಿಗಿದು ಅಮೆರಿಕದಿಂದ ಹೊರದಬ್ಬಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

“ಮೊದಲಿಗೆ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದಿರಲಿಲ್ಲ. ನಮ್ಮನ್ನು ಬೇರೆ ಶಿಬಿರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ನಾವು ಭಾವಿಸಿದ್ದೆವು. ನಂತರ ಒಬ್ಬರು ಪೊಲೀಸ್ ಅಧಿಕಾರಿ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು. ನಮ್ಮ ಕೈಗಳಿಗೆ ಕೋಳ ಹಾಕಿ, ಕಾಲುಗಳಿಗೆ ಸರಪಳಿ ಬಿಗಿಯಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ಜಸ್ಪಾಲ್ ಸಿಂಗ್ ವಿವರಿಸಿದ್ದಾರೆ.

“ಅಮೆರಿಕಕ್ಕೆ ಕಾನೂನುಬದ್ಧ ಪ್ರವೇಶದ ಭರವಸೆ ನೀಡಿದ್ದ ಟ್ರಾವೆಲ್ ಏಜೆಂಟ್‌ನಿಂದ ನನಗೆ ವಂಚನೆಯಾಗಿದೆ. ಸರಿಯಾದ ಯುಎಸ್ ವೀಸಾ ಪಡೆದ ನಂತರ ನನ್ನನ್ನು ಕಳುಹಿಸಲು ನಾನು ಏಜೆಂಟರನ್ನು ಕೇಳಿದ್ದೆ. ಆದರೆ, ಅವರು ನನ್ನನ್ನು ವಂಚಿಸಿದರು. ಏಜೆಂಟರೊಂದಿಗಿನ ಒಪ್ಪಂದವನ್ನು 30 ಲಕ್ಷ ರೂ.ಗೆ ಅಂತಿಮಗೊಳಿಸಲಾಗಿತ್ತು” ಎಂದು ಹೇಳಿದ್ದಾರೆ.

“ಕಳೆದ ವರ್ಷ ಜುಲೈನಲ್ಲಿ ತಾನು ವಿಮಾನದ ಮೂಲಕ ಬ್ರೆಝಿಲ್ ತಲುಪಿದ್ದಾಗಿ ಜಸ್ಪಾಲ್ ಹೇಳಿಕೊಂಡಿದ್ದಾರೆ. ಮುಂದಿನ ಹಂತದ ಅಮೆರಿಕ ಪ್ರಯಾಣವೂ ವಿಮಾನದ ಮೂಲಕವೇ ಆಗಲಿದೆ ಎಂದು ಭರವಸೆ ನೀಡಲಾಗಿತ್ತು. ಆದರೆ, ತನ್ನ ಏಜೆಂಟ್ ಅಕ್ರಮವಾಗಿ ಗಡಿ ದಾಟುವಂತೆ ಒತ್ತಾಯಿಸಿ ವಂಚಿಸಿದ” ಎಂದು ತಿಳಿಸಿದ್ದಾರೆ.

“ಬ್ರೆಝಿಲ್‌ನಲ್ಲಿ ಆರು ತಿಂಗಳು ತಂಗಿದ್ದ ನಾನು ಗಡಿ ದಾಟಿ ಅಮೆರಿಕ ತಲುಪಿದೆ. ಆದರೆ ಅಮೆರಿಕದ ಗಡಿ ಗಸ್ತು ಪಡೆಯಿಂದ ಬಂಧಿನಕ್ಕೊಳಗಾದೆ. ಅವರು 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟು ನಂತರ ಮನೆಗೆ ಕಳುಹಿಸಿದರು” ಎಂದು ಜಸ್ಪಾಲ್ ಹೇಳಿದ್ದಾರೆ.

“ಅಮೆರಿಕಕ್ಕೆ ತೆರಳಲು ಸಾಲ ಪಡೆದು ದೊಡ್ಡ ಮೊತ್ತದ ಹಣ ಖರ್ಚು ಮಾಡಿದ್ದೆ.ಇದೀಗ ಗಡಿಪಾರು ಮಾಡುವಿಕೆಯಿಂದ ತಾನು ಜರ್ಜರಿತನಾಗಿದ್ದೇನೆ” ಎಂದು ಜಸ್ಪಾಲ್ ಹೇಳಿಕೊಂಡಿದ್ದಾರೆ.

ಗಡಿಪಾರು ಪ್ರಕ್ರಿಯೆ ಕುರಿತು ಮಾತನಾಡಿರುವ ಜಸ್ಪಾಲ್, “ಇದು ಸರ್ಕಾರಗಳ ಸಮಸ್ಯೆ. ನಾವು ಕನಸುಗಳನ್ನು ಹೊತ್ತು ನಮ್ಮ ಕುಟುಂಬದ ಭವಿಷ್ಯಕ್ಕಾಗಿ ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗಿರುತ್ತೇವೆ. ಯಾರದ್ದೋ ತಪ್ಪಿಗೆ ನಾವು ಬಲಿಪಶುಗಳಾಗಿದ್ದೇವೆ” ಎಂದಿದ್ದಾರೆ.

Courtesy : timesofindia.indiatimes.com

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...