Homeಮುಖಪುಟ"ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು"...ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

- Advertisement -
- Advertisement -

ಅಕ್ರಮ ವಲಸಿಗರು ಎಂದು ಗುರುತಿಸಲಾದ ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿರುವ ಅಮೆರಿಕ ತನ್ನ ಸೇನಾ ವಿಮಾನದಲ್ಲಿ ಕಳುಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ 104 ಭಾರತೀಯರನ್ನು ಹೊತ್ತ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಬುಧವಾರ (ಫೆ.5) ಬಂದು ತಲುಪಿದೆ.

“ಎಲ್ಲಾ ಅಕ್ರಮ ವಲಸಿಗರನ್ನು ದೇಶದಿಂದ ಹೊರದುಬ್ಬುತ್ತೇವೆ” ಎಂದು ಚುನಾವಣಾ ಪೂರ್ವದಲ್ಲಿ ವಾಗ್ದಾನ ಮಾಡಿದ್ದ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧಿಕಾರಕ್ಕೇರಿದ ಬಳಿಕ ಹೇಳಿದಂತೆ ಮಾಡಿದ್ದಾರೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸಾವಿರಾರು ಜನರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಪ್ರಾರಂಭಗೊಂಡಿದೆ.

ಅಮೃತಸರ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂದಿಳಿದ ಪಂಜಾಬ್ ಮತ್ತು ಹರಿಯಾಣ ಮೂಲದ ಅಕ್ರಮ ವಲಸಿಗರು, ಎಲ್ಲಾ ವಿಧಿ ವಿಧಾನಗಳ ಬಳಿಕ ಪೊಲೀಸ್ ವಾಹನಗಳಲ್ಲಿ ತಮ್ಮ ಊರಿನತ್ತ ತೆರಳಿದ್ದಾರೆ.

ಗಡಿಪಾರು ಮಾಡಲಾದ ಭಾರತೀಯ ವಲಸಿಗರಲ್ಲಿ ಒಬ್ಬರಾದ ಹರಿಯಾಣದ ಜಸ್ಪಾಲ್ ಸಿಂಗ್ “ನಮ್ಮ ಕೈಗೆ ಬೇಡಿ, ಕಾಲಿಗೆ ಸಂಕೋಲೆ ಬಿಗಿದು ಅಮೆರಿಕದಿಂದ ಹೊರದಬ್ಬಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

“ಮೊದಲಿಗೆ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದಿರಲಿಲ್ಲ. ನಮ್ಮನ್ನು ಬೇರೆ ಶಿಬಿರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ನಾವು ಭಾವಿಸಿದ್ದೆವು. ನಂತರ ಒಬ್ಬರು ಪೊಲೀಸ್ ಅಧಿಕಾರಿ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು. ನಮ್ಮ ಕೈಗಳಿಗೆ ಕೋಳ ಹಾಕಿ, ಕಾಲುಗಳಿಗೆ ಸರಪಳಿ ಬಿಗಿಯಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ಜಸ್ಪಾಲ್ ಸಿಂಗ್ ವಿವರಿಸಿದ್ದಾರೆ.

“ಅಮೆರಿಕಕ್ಕೆ ಕಾನೂನುಬದ್ಧ ಪ್ರವೇಶದ ಭರವಸೆ ನೀಡಿದ್ದ ಟ್ರಾವೆಲ್ ಏಜೆಂಟ್‌ನಿಂದ ನನಗೆ ವಂಚನೆಯಾಗಿದೆ. ಸರಿಯಾದ ಯುಎಸ್ ವೀಸಾ ಪಡೆದ ನಂತರ ನನ್ನನ್ನು ಕಳುಹಿಸಲು ನಾನು ಏಜೆಂಟರನ್ನು ಕೇಳಿದ್ದೆ. ಆದರೆ, ಅವರು ನನ್ನನ್ನು ವಂಚಿಸಿದರು. ಏಜೆಂಟರೊಂದಿಗಿನ ಒಪ್ಪಂದವನ್ನು 30 ಲಕ್ಷ ರೂ.ಗೆ ಅಂತಿಮಗೊಳಿಸಲಾಗಿತ್ತು” ಎಂದು ಹೇಳಿದ್ದಾರೆ.

“ಕಳೆದ ವರ್ಷ ಜುಲೈನಲ್ಲಿ ತಾನು ವಿಮಾನದ ಮೂಲಕ ಬ್ರೆಝಿಲ್ ತಲುಪಿದ್ದಾಗಿ ಜಸ್ಪಾಲ್ ಹೇಳಿಕೊಂಡಿದ್ದಾರೆ. ಮುಂದಿನ ಹಂತದ ಅಮೆರಿಕ ಪ್ರಯಾಣವೂ ವಿಮಾನದ ಮೂಲಕವೇ ಆಗಲಿದೆ ಎಂದು ಭರವಸೆ ನೀಡಲಾಗಿತ್ತು. ಆದರೆ, ತನ್ನ ಏಜೆಂಟ್ ಅಕ್ರಮವಾಗಿ ಗಡಿ ದಾಟುವಂತೆ ಒತ್ತಾಯಿಸಿ ವಂಚಿಸಿದ” ಎಂದು ತಿಳಿಸಿದ್ದಾರೆ.

“ಬ್ರೆಝಿಲ್‌ನಲ್ಲಿ ಆರು ತಿಂಗಳು ತಂಗಿದ್ದ ನಾನು ಗಡಿ ದಾಟಿ ಅಮೆರಿಕ ತಲುಪಿದೆ. ಆದರೆ ಅಮೆರಿಕದ ಗಡಿ ಗಸ್ತು ಪಡೆಯಿಂದ ಬಂಧಿನಕ್ಕೊಳಗಾದೆ. ಅವರು 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟು ನಂತರ ಮನೆಗೆ ಕಳುಹಿಸಿದರು” ಎಂದು ಜಸ್ಪಾಲ್ ಹೇಳಿದ್ದಾರೆ.

“ಅಮೆರಿಕಕ್ಕೆ ತೆರಳಲು ಸಾಲ ಪಡೆದು ದೊಡ್ಡ ಮೊತ್ತದ ಹಣ ಖರ್ಚು ಮಾಡಿದ್ದೆ.ಇದೀಗ ಗಡಿಪಾರು ಮಾಡುವಿಕೆಯಿಂದ ತಾನು ಜರ್ಜರಿತನಾಗಿದ್ದೇನೆ” ಎಂದು ಜಸ್ಪಾಲ್ ಹೇಳಿಕೊಂಡಿದ್ದಾರೆ.

ಗಡಿಪಾರು ಪ್ರಕ್ರಿಯೆ ಕುರಿತು ಮಾತನಾಡಿರುವ ಜಸ್ಪಾಲ್, “ಇದು ಸರ್ಕಾರಗಳ ಸಮಸ್ಯೆ. ನಾವು ಕನಸುಗಳನ್ನು ಹೊತ್ತು ನಮ್ಮ ಕುಟುಂಬದ ಭವಿಷ್ಯಕ್ಕಾಗಿ ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗಿರುತ್ತೇವೆ. ಯಾರದ್ದೋ ತಪ್ಪಿಗೆ ನಾವು ಬಲಿಪಶುಗಳಾಗಿದ್ದೇವೆ” ಎಂದಿದ್ದಾರೆ.

Courtesy : timesofindia.indiatimes.com

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...