Homeಮುಖಪುಟಸಂಸತ್‌ನಲ್ಲಿ ಗಡಿಪಾರು ಗದ್ದಲ : ಉಭಯ ಸದನಗಳ ಕಲಾಪ ಮುಂದೂಡಿಕೆ

ಸಂಸತ್‌ನಲ್ಲಿ ಗಡಿಪಾರು ಗದ್ದಲ : ಉಭಯ ಸದನಗಳ ಕಲಾಪ ಮುಂದೂಡಿಕೆ

- Advertisement -
- Advertisement -

ಅಮೆರಿಕದಿಂದ ಭಾರತೀಯ ವಲಸಿಗರನ್ನು ಗಡಿಪಾರು ಮಾಡಿರುವ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದ ಕಾರಣ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿಕೆ ಮಾಡಲಾಗಿದೆ.

ಇಂದು (ಫೆ.6) ಬೆಳಿಗ್ಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು, ವಿಶೇಷವಾಗಿ ಕಾಂಗ್ರೆಸ್ ಸದಸ್ಯರು ಗಡಿಪಾರು ವಿಷಯವನ್ನು ಪ್ರಸ್ತಾಪಿಸಿ ಚರ್ಚೆಗೆ ಅಗ್ರಹಿಸಿದರು. ಸರ್ಕಾರದ ವಿರುದ್ದ ಪ್ರತಿಭಟನೆ ವ್ಯಕ್ತಪಡಿಸಿದರು.

ಸರ್ಕಾರವು ಅವರ ಕಳವಳಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳುವ ಮೂಲಕ ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.

“ಇದು ವಿದೇಶಾಂಗ ನೀತಿಯ ವಿಷಯ. ವಿದೇಶಕ್ಕೂ ತನ್ನದೇ ಆದ ನಿಯಮಗಳು ಮತ್ತು ನಿಬಂಧನೆಗಳಿವೆ. ನೀವು ಮಧ್ಯಾಹ್ನ ನಿಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಬಹುದು. ಪ್ರಶ್ನೋತ್ತರ ಅವಧಿಯನ್ನು ಸುಗಮವಾಗಿ ನಡೆಸಲು ಅವಕಾಶ ನೀಡಬೇಕು” ಎಂದು ಸ್ಪೀಕರ್ ಮನವಿ ಮಾಡಿದರು.

ಆದರೆ, ಪ್ರತಿಭಟನಾ ನಿರತ ಸದಸ್ಯರು ಸ್ಪೀಕರ್ ಮನವಿಯನ್ನು ನಿರ್ಲಕ್ಷಿಸಿ ಪ್ರತಿಭಟನೆ ಮುಂದುವರೆಸಿದರು. ನಂತರ ಸ್ಪೀಕರ್ ಬಿರ್ಲಾ ಅವರು ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ನಂತರ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ರಾಜ್ಯಸಭೆಯ ವಿರೋಧ ಪಕ್ಷದ ಸದಸ್ಯರು ನಿಯಮ 267 ರ ಅಡಿಯಲ್ಲಿ ನೋಟಿಸ್‌ಗಳನ್ನು ನೀಡಿದರು. ಪಟ್ಟಿ ಮಾಡಲಾದ ದಿನದ ವ್ಯವಹಾರಗಳನ್ನು ಬದಿಗಿಟ್ಟು ಗಡಿಪಾರು ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳುವಂತೆ ಆಗ್ರಹಿಸಿದರು. ಆದರೆ, ಸಭಾಧ್ಯಕ್ಷ ಮನವಿಯನ್ನು ತಿರಸ್ಕರಿಸಿದರು. ನಂತರ, ಸದಸ್ಯರು ತಮ್ಮ ಸ್ಥಳಗಳಲ್ಲಿ ನಿಂತು ವಿಷಯವನ್ನು ಪ್ರಸ್ತಾಪಿಸಿದರು.

ಅಮೆರಿಕವು ಭಾರತೀಯ ವಲಸಿಗರನ್ನು ಮಿಲಿಟರಿ ವಿಮಾನದಲ್ಲಿ ಅತ್ಯಂತ ಅಮಾನವೀಯ ರೀತಿಯಲ್ಲಿ ಗಡಿಪಾರು ಮಾಡಿದೆ. ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದರು.

ಸಭಾಧ್ಯಕ್ಷರ ಪೀಠದಲ್ಲಿದ್ದ ಉಪ ಸಭಾಧ್ಯಕ್ಷ ಹರಿವಂಶ್ ಅವರು ವಿರೋಧ ಪಕ್ಷದ ಸಂಸದರ ಹೇಳಿಕೆಗಳನ್ನು ದಾಖಲಿಸಬಾರದು ಎಂದು ಮೊದಲು ಆದೇಶಿಸಿದರು. ಸಂಸದರು ಚರ್ಚೆಗೆ ಪಟ್ಟು ಹಿಡಿದಾಗ ಮಧ್ಯಾಹ್ನ 12 ಗಂಟೆಯವರೆಗೆ ಕಲಾಪವನ್ನು ಮುಂದೂಡಿದರು.

104 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನವು ಬುಧವಾರ ಪಂಜಾಬ್‌ನ ಅಮೃತಸರಕ್ಕೆ ಬಂದಿಳಿದಿದೆ. ಅಕ್ರಮ ವಲಸಿಗರ ವಿರುದ್ಧದ ಕ್ರಮದ ಭಾಗವಾಗಿ ಡೊನಾಲ್ಡ್ ಟ್ರಂಪ್ ಸರ್ಕಾರವು ಗಡಿಪಾರು ಮಾಡಿದ ಭಾರತೀಯರ ಮೊದಲ ಬ್ಯಾಚ್ ಇದಾಗಿದೆ.

ಮೊದಲ ಬ್ಯಾಚ್‌ನಲ್ಲಿ ತಲಾ 33 ಜನರು ಹರಿಯಾಣ ಮತ್ತು ಗುಜರಾತ್‌ನವರು, 30 ಜನರು ಪಂಜಾಬ್‌ನವರು, ತಲಾ ಮೂವರು ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದವರು ಮತ್ತು ಇಬ್ಬರು ಚಂಡೀಗಢದವರು ಇದ್ದರು.

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...