Homeಕರ್ನಾಟಕಶಾಸಕ ಮುನಿರತ್ನ ಪ್ರಕರಣ | ಶೆಡ್‌ ತೆರವಿಗೆ ಆದೇಶಿಸಿದ್ದು ಯಾರು? ಕೋರ್ಟ್ ಪ್ರಶ್ನೆ

ಶಾಸಕ ಮುನಿರತ್ನ ಪ್ರಕರಣ | ಶೆಡ್‌ ತೆರವಿಗೆ ಆದೇಶಿಸಿದ್ದು ಯಾರು? ಕೋರ್ಟ್ ಪ್ರಶ್ನೆ

- Advertisement -
- Advertisement -

ಬೆಂಗಳೂರಿನ ಹೆಚ್‌ಎಂಟಿ ವಾರ್ಡ್‌ನ ಪೀಣ್ಯದ ಎಸ್‌ಆರ್‌ಎಸ್‌ ರಸ್ತೆಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 53 ಕುಟುಂಬಗಳನ್ನು ತೆರವುಗೊಳಿಸಲು ಯಾರ ಆದೇಶವಿತ್ತು ಎಂಬುದರ ಬಗ್ಗೆ ರಾಜ್ಯ ಸರ್ಕಾರ ವಿವರಣೆ ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ (ಫೆ.5) ಆದೇಶಿಸಿದೆ.

ತೆರವು ಕಾರ್ಯಾಚರಣೆ ವೇಳೆ ಮಾದಿಗ ಸಮುದಾಯದ ಮಹಿಳೆಯನ್ನು ನಿಂದಿಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಮುನಿರತ್ನ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ನಡೆಸಿದ್ದಾರೆ.

ಮುನಿರತ್ನ ಪರ ವಕೀಲ ಎಸ್‌ ಎಸ್‌ ಶ್ರೀನಿವಾಸ ರಾವ್‌ ವಾದ ಮಂಡಿಸಿ, “ಈ ಪ್ರಕರಣದಲ್ಲಿ ಮುನಿರತ್ನ ಮುಗ್ಧರು. ಮೇಲಿಂದ ಮೇಲೆ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿರುವುದರಿಂದ ಕ್ಷೇತ್ರದಲ್ಲಿ ಅವರು ಸಾರ್ವಜನಿಕರ ಕೆಲಸ ಮಾಡುವುದೇ ಕಷ್ಟವಾಗಿದೆ” ಎಂದಿದ್ದಾರೆ.

ಒಕ್ಕಲೆಬ್ಬಿಸುವ ಕಾರ್ಯಾಚರಣೆಯನ್ನು ಬಿಬಿಎಂಪಿ ಕಾನೂನುಬದ್ಧವಾಗಿ ನಡೆಸಿದೆ. ಆದರೆ, ಮಾಧ್ಯಮಗಳಲ್ಲಿ ಮುನಿರತ್ನ ಅವರ ವ್ಯಕ್ತಿತ್ವಕ್ಕೆ ಹಾನಿ ಮಾಡಲು ಅಪಪ್ರಚಾರ ಮಾಡಲಾಗುತ್ತಿದೆ. ದೂರುದಾರರ ಪರ ಹಿರಿಯ ವಕೀಲ ಸಿ. ಹೆಚ್‌ ಹನುಮಂತರಾಯ ಅವರು ಆರೋಪಿಸಿರುವಂತೆ ಅಲ್ಲಿ ಕೇವಲ ದಲಿತ ಕುಟುಂಬಗಳು ಮಾತ್ರವೇ ಇರಲಿಲ್ಲ. ಅವರಲ್ಲಿ ಮುಸ್ಲಿಂ ಮತ್ತು ಸಾಮಾನ್ಯ ವರ್ಗದ ಜನರೂ ಇದ್ದರು” ಎಂದಿದ್ದಾರೆ.

ಈ ವೇಳೆ ಹನುಮಂತರಾಯ ಅವರು “ಬಿಬಿಎಂಪಿ ಕಾರ್ಯಾಚರಣೆ ನಡೆಸಿದ್ದರೆ ಮುನಿರತ್ನ ಏಕೆ ಅದನ್ನು ಮೌನವಾಗಿ ವೀಕ್ಷಿಸಿದರು? ಕ್ಷೇತ್ರದ ಶಾಸಕರಾಗಿ ನಿರ್ಗತಿಕರಿಗೆ ಏಕೆ ಪುನರ್ವಸತಿ ಕಲ್ಪಿಸಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಆಗ ಮಧ್ಯಪ್ರವೇಶಿಸಿದ ಪೀಠ “ಈ ಪ್ರಕರಣದಲ್ಲಿ ಯಾರು ತೆರವು ಕಾರ್ಯಾಚರಣೆ ನಡೆಸಿದರು ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ. ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್‌ ಸಮರ್ಪಕವಾಗಿ ಉತ್ತರಿಸಿಲ್ಲ. ಇದರಿಂದ ಮಧ್ಯಂತರ ಆದೇಶವನ್ನು ಮತ್ತೆ ವಿಸ್ತರಿಸಬೇಕಾಗಿ ಬಂದಿದೆ. ಪೊಲೀಸ್ ಇಲಾಖೆ ಕ್ಷಮತೆಯಿಂದ ಕಾರ್ಯ ನಿರ್ವಹಿಸಬೇಕಾದ ಅವಶ್ಯಕತೆ ಇದೆ” ಎಂದು ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೇ, “ಯಾರ ಆದೇಶದ ಅನ್ವಯ ಒತ್ತುವರಿ ಕಾರ್ಯಾಚರಣೆ ನಡೆಸಲಾಗಿದೆ ಎಂಬುವುದನ್ನು ತಿಳಿಸಬೇಕು” ಎಂದು ಸರ್ಕಾರಿ ಅಭಿಯೋಜಕಿ ಪಾರ್ವತಿ ಅವರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 60ರಿಂದ 70ರಷ್ಟು ಉತ್ತರ ಕರ್ನಾಟಕದ ದಲಿತ ಕುಟುಂಬಗಳನ್ನು ಜನವರಿ 20ರಂದು ಶಾಸಕ ಮುನಿರತ್ನ ಮತ್ತು ಬೆಂಬಲಿಗರಾದ ವಸಂತಕುಮಾರ್, ಚನ್ನಕೇಶವ, ಗೊರಗುಂಟೆಪಾಳ್ಯದ ನವೀನ, ಶ್ರೀರಾಮ, ಪೀಣ್ಯದ ಕಿಟ್ಟಿ, ಗಂಗಾ ಮತ್ತು ಇತರರು ಕಾನೂನು ಬಾಹಿರವಾಗಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಅಲ್ಲದೆ, ನನಗೆ ಜಾತಿನಿಂದನೆ ಮಾಡಿ ಅಲ್ಲಿದ್ದ ಕೆಲ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಎದೆಗೆ ಮುನಿರತ್ನ ಒದ್ದಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಜನವರಿ 20ರಂದು ದೂರು ನೀಡಿದ್ದರು.

ಈ ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ-2023ರ ಸೆಕ್ಷನ್‌ಗಳಾದ 324(2),74,351(2), 351(3) ಮತ್ತು 190 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ–2014ರ ಸೆಕ್ಷನ್‌ 3(1), ಆರ್‌(ಎಸ್‌) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಬ್ಯಾಂಕ್‌ಗೆ ವಂಚನೆ ಸಾಬೀತು; ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...