Homeಕರ್ನಾಟಕಶಾಸಕ ಮುನಿರತ್ನ ಪ್ರಕರಣ | ಶೆಡ್‌ ತೆರವಿಗೆ ಆದೇಶಿಸಿದ್ದು ಯಾರು? ಕೋರ್ಟ್ ಪ್ರಶ್ನೆ

ಶಾಸಕ ಮುನಿರತ್ನ ಪ್ರಕರಣ | ಶೆಡ್‌ ತೆರವಿಗೆ ಆದೇಶಿಸಿದ್ದು ಯಾರು? ಕೋರ್ಟ್ ಪ್ರಶ್ನೆ

- Advertisement -
- Advertisement -

ಬೆಂಗಳೂರಿನ ಹೆಚ್‌ಎಂಟಿ ವಾರ್ಡ್‌ನ ಪೀಣ್ಯದ ಎಸ್‌ಆರ್‌ಎಸ್‌ ರಸ್ತೆಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 53 ಕುಟುಂಬಗಳನ್ನು ತೆರವುಗೊಳಿಸಲು ಯಾರ ಆದೇಶವಿತ್ತು ಎಂಬುದರ ಬಗ್ಗೆ ರಾಜ್ಯ ಸರ್ಕಾರ ವಿವರಣೆ ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ (ಫೆ.5) ಆದೇಶಿಸಿದೆ.

ತೆರವು ಕಾರ್ಯಾಚರಣೆ ವೇಳೆ ಮಾದಿಗ ಸಮುದಾಯದ ಮಹಿಳೆಯನ್ನು ನಿಂದಿಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಮುನಿರತ್ನ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ನಡೆಸಿದ್ದಾರೆ.

ಮುನಿರತ್ನ ಪರ ವಕೀಲ ಎಸ್‌ ಎಸ್‌ ಶ್ರೀನಿವಾಸ ರಾವ್‌ ವಾದ ಮಂಡಿಸಿ, “ಈ ಪ್ರಕರಣದಲ್ಲಿ ಮುನಿರತ್ನ ಮುಗ್ಧರು. ಮೇಲಿಂದ ಮೇಲೆ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿರುವುದರಿಂದ ಕ್ಷೇತ್ರದಲ್ಲಿ ಅವರು ಸಾರ್ವಜನಿಕರ ಕೆಲಸ ಮಾಡುವುದೇ ಕಷ್ಟವಾಗಿದೆ” ಎಂದಿದ್ದಾರೆ.

ಒಕ್ಕಲೆಬ್ಬಿಸುವ ಕಾರ್ಯಾಚರಣೆಯನ್ನು ಬಿಬಿಎಂಪಿ ಕಾನೂನುಬದ್ಧವಾಗಿ ನಡೆಸಿದೆ. ಆದರೆ, ಮಾಧ್ಯಮಗಳಲ್ಲಿ ಮುನಿರತ್ನ ಅವರ ವ್ಯಕ್ತಿತ್ವಕ್ಕೆ ಹಾನಿ ಮಾಡಲು ಅಪಪ್ರಚಾರ ಮಾಡಲಾಗುತ್ತಿದೆ. ದೂರುದಾರರ ಪರ ಹಿರಿಯ ವಕೀಲ ಸಿ. ಹೆಚ್‌ ಹನುಮಂತರಾಯ ಅವರು ಆರೋಪಿಸಿರುವಂತೆ ಅಲ್ಲಿ ಕೇವಲ ದಲಿತ ಕುಟುಂಬಗಳು ಮಾತ್ರವೇ ಇರಲಿಲ್ಲ. ಅವರಲ್ಲಿ ಮುಸ್ಲಿಂ ಮತ್ತು ಸಾಮಾನ್ಯ ವರ್ಗದ ಜನರೂ ಇದ್ದರು” ಎಂದಿದ್ದಾರೆ.

ಈ ವೇಳೆ ಹನುಮಂತರಾಯ ಅವರು “ಬಿಬಿಎಂಪಿ ಕಾರ್ಯಾಚರಣೆ ನಡೆಸಿದ್ದರೆ ಮುನಿರತ್ನ ಏಕೆ ಅದನ್ನು ಮೌನವಾಗಿ ವೀಕ್ಷಿಸಿದರು? ಕ್ಷೇತ್ರದ ಶಾಸಕರಾಗಿ ನಿರ್ಗತಿಕರಿಗೆ ಏಕೆ ಪುನರ್ವಸತಿ ಕಲ್ಪಿಸಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಆಗ ಮಧ್ಯಪ್ರವೇಶಿಸಿದ ಪೀಠ “ಈ ಪ್ರಕರಣದಲ್ಲಿ ಯಾರು ತೆರವು ಕಾರ್ಯಾಚರಣೆ ನಡೆಸಿದರು ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ. ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್‌ ಸಮರ್ಪಕವಾಗಿ ಉತ್ತರಿಸಿಲ್ಲ. ಇದರಿಂದ ಮಧ್ಯಂತರ ಆದೇಶವನ್ನು ಮತ್ತೆ ವಿಸ್ತರಿಸಬೇಕಾಗಿ ಬಂದಿದೆ. ಪೊಲೀಸ್ ಇಲಾಖೆ ಕ್ಷಮತೆಯಿಂದ ಕಾರ್ಯ ನಿರ್ವಹಿಸಬೇಕಾದ ಅವಶ್ಯಕತೆ ಇದೆ” ಎಂದು ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೇ, “ಯಾರ ಆದೇಶದ ಅನ್ವಯ ಒತ್ತುವರಿ ಕಾರ್ಯಾಚರಣೆ ನಡೆಸಲಾಗಿದೆ ಎಂಬುವುದನ್ನು ತಿಳಿಸಬೇಕು” ಎಂದು ಸರ್ಕಾರಿ ಅಭಿಯೋಜಕಿ ಪಾರ್ವತಿ ಅವರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 60ರಿಂದ 70ರಷ್ಟು ಉತ್ತರ ಕರ್ನಾಟಕದ ದಲಿತ ಕುಟುಂಬಗಳನ್ನು ಜನವರಿ 20ರಂದು ಶಾಸಕ ಮುನಿರತ್ನ ಮತ್ತು ಬೆಂಬಲಿಗರಾದ ವಸಂತಕುಮಾರ್, ಚನ್ನಕೇಶವ, ಗೊರಗುಂಟೆಪಾಳ್ಯದ ನವೀನ, ಶ್ರೀರಾಮ, ಪೀಣ್ಯದ ಕಿಟ್ಟಿ, ಗಂಗಾ ಮತ್ತು ಇತರರು ಕಾನೂನು ಬಾಹಿರವಾಗಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಅಲ್ಲದೆ, ನನಗೆ ಜಾತಿನಿಂದನೆ ಮಾಡಿ ಅಲ್ಲಿದ್ದ ಕೆಲ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಎದೆಗೆ ಮುನಿರತ್ನ ಒದ್ದಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಜನವರಿ 20ರಂದು ದೂರು ನೀಡಿದ್ದರು.

ಈ ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ-2023ರ ಸೆಕ್ಷನ್‌ಗಳಾದ 324(2),74,351(2), 351(3) ಮತ್ತು 190 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ–2014ರ ಸೆಕ್ಷನ್‌ 3(1), ಆರ್‌(ಎಸ್‌) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಬ್ಯಾಂಕ್‌ಗೆ ವಂಚನೆ ಸಾಬೀತು; ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...