Homeಮುಖಪುಟಭಾರತೀಯರಿಗೆ ಕೈಕೋಳ ಹಾಕಿ ಗಡೀಪಾರು ಮಾಡಲು ಮೋದಿ ಅವಕಾಶ ನೀಡಿದ್ದು ಯಾಕೆ: ಪ್ರಿಯಾಂಕಾ ಗಾಂಧಿ

ಭಾರತೀಯರಿಗೆ ಕೈಕೋಳ ಹಾಕಿ ಗಡೀಪಾರು ಮಾಡಲು ಮೋದಿ ಅವಕಾಶ ನೀಡಿದ್ದು ಯಾಕೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರನ್ನು ಗಡೀಪಾರು ಮಾಡಿದ ರೀತಿಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. “ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಈ ವಿಷಯದ ಬಗ್ಗೆ ಉತ್ತರಿಸಬೇಕು” ಎಂದು ಒತ್ತಾಯಿಸಿದರು.

104 ಜನ ಅಕ್ರಮ ಭಾರತೀಯ ವಲಸಿಗರನ್ನು ಹೊತ್ತೊಯ್ಯುವ ಯುಎಸ್ ಮಿಲಿಟರಿ ವಿಮಾನ ಬುಧವಾರ ಅಮೃತಸರದಲ್ಲಿ ಇಳಿಯಿತು. ಅಕ್ರಮ ವಲಸಿಗರ ವಿರುದ್ಧದ ಕ್ರಮದ ಭಾಗವಾಗಿ ಡೊನಾಲ್ಡ್ ಟ್ರಂಪ್ ಸರ್ಕಾರವು ಗಡೀಪಾರು ಮಾಡಿದ ಭಾರತೀಯರ ಮೊದಲ ಬ್ಯಾಚ್ ಇದು. ಪ್ರಯಾಣದುದ್ದಕ್ಕೂ ತಮ್ಮ ಕೈಗಳು ಮತ್ತು ಕಾಲುಗಳನ್ನು ಬಂಧಿಸಲಾಗಿತ್ತು, ಅಮೃತಸರ ವಿಮಾನ ನಿಲ್ದಾಣದಲ್ಲಿ ಇಳಿದ ನಂತರವೇ ಅವರ ಸಂಕೋಲೆಗಳನ್ನು ಬಿಚ್ಚಲಾಯಿತು ಎಂದು ಗಡೀಪಾರಾದ ಭಾರತೀಯರೊಬ್ಬರು ಹೇಳಿಕೊಂಡರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾತನಾಡಿ, “ಮೋದಿ ಜಿ ಮತ್ತು ಟ್ರಂಪ್ ಜಿ ತುಂಬಾ ಒಳ್ಳೆಯ ಸ್ನೇಹಿತರು ಎಂದು ಬಹಳಷ್ಟು ಹೇಳಲಾಗಿತ್ತು. ಆದರೂ ಅವರ ಕೈಗೆ ಕೋಳ ಹಾಕಲು ಮೋದಿ ಜಿ ಅವಕಾಶ ನೀಡಿದದ್ದು ಯಾಕೆ? ಅವರನ್ನು ಕರೆತರಲು ನಾವು ನಮ್ಮ ವಿಮಾನವನ್ನು ಕಳುಹಿಸಬಹುದಿತ್ತಲ್ಲವೇ ಮನುಷ್ಯರೊಂದಿಗೆ ವರ್ತಿಸಬೇಕಾದ ರೀತಿ ಇದೇನಾ” ಎಂದು ಅವರು ಹೇಳಿದರು.

ವಿದೇಶಾಂಗ ಸಚಿವರು ಉತ್ತರ ನೀಡಬೇಕೇ ಎಂದು ಕೇಳಿದಾಗ, “ಅವರು ಉತ್ತರಿಸಬೇಕು, ಪ್ರಧಾನಿಯೂ ಉತ್ತರ ನೀಡಬೇಕು. ಇದೇನಾ ದಾರಿ?” ಎಂದು ಅವರು ಹೇಳಿದರು.

ಭಾರತೀಯರ ಘನತೆಗೆ ಮಾಡಿದ ಅವಮಾನ: ಶಶಿ ತರೂರ್

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರನ್ನು ಗಡೀಪಾರು ಮಾಡುವ ವಿಧಾನವು “ಭಾರತ ಮತ್ತು ಭಾರತೀಯರ ಘನತೆಗೆ ಮಾಡಿದ ಅವಮಾನ” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಗುರುವಾರ ಹೇಳಿದ್ದಾರೆ.

ಸರ್ಕಾರವು ಅಮೆರಿಕಕ್ಕೆ ಸಂದೇಶವನ್ನು ನೀಡಬೇಕಾಗಿದೆ. ಅವಮಾನಕರ ರೀತಿಯಲ್ಲಿ ಗಡೀಪಾರು ಮಾಡಲು ಯಾವುದೇ ಹಕ್ಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಭಾರತೀಯರ ಗಡೀಪಾರು ಬಗ್ಗೆ ಕೇಳಿದಾಗ, “ಗಡೀಪಾರು ಮಾಡಿದ ರೀತಿಯ ಬಗ್ಗೆ ನಾವು ಪ್ರತಿಭಟಿಸುತ್ತಿದ್ದೇವೆ. ಅವರ ದೇಶದಲ್ಲಿ ಅಕ್ರಮವಾಗಿ ವಾಸಿಸುವ ಜನರನ್ನು ಗಡೀಪಾರು ಮಾಡಲು ಅವರಿಗೆ ಎಲ್ಲಾ ಕಾನೂನುಬದ್ಧ ಹಕ್ಕಿದೆ. ಅವರು ಭಾರತೀಯರು ಎಂದು ಸಾಬೀತಾದರೆ, ನಾವು ಅವರನ್ನು ಸ್ವೀಕರಿಸುವ ಬಾಧ್ಯತೆಯನ್ನು ಹೊಂದಿದ್ದೇವೆ. ಆದರೆ, ಅವರನ್ನು ಈ ರೀತಿ ಹಠಾತ್ತನೆ ಮಿಲಿಟರಿ ವಿಮಾನದಲ್ಲಿ ಮತ್ತು ಕೈಕೋಳದಲ್ಲಿ ಕಳುಹಿಸುವುದು ಭಾರತಕ್ಕೆ ಮಾಡಿದ ಅವಮಾನ, ಇದು ಭಾರತೀಯರ ಘನತೆಗೆ ಮಾಡಿದ ಅವಮಾನ ಮತ್ತು ನಾವು ಖಂಡಿತವಾಗಿಯೂ ಪ್ರತಿಭಟಿಸಬೇಕು” ಎಂದು ತರೂರ್ ಪ್ರತಿಪಾದಿಸಿದರು.

ಇದನ್ನೂ ಓದಿ; ಗಡೀಪಾರಾದವರನ್ನು ಬಂಧಿಸುವುದು ಭಾರತಕ್ಕೆ ಮಾಡಿದ ಅವಮಾನ: ಪಂಜಾಬ್ ಸಿಎಂ ಮಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...