Homeಮುಖಪುಟಭಾರತೀಯರಿಗೆ ಕೈಕೋಳ ಹಾಕಿ ಗಡೀಪಾರು ಮಾಡಲು ಮೋದಿ ಅವಕಾಶ ನೀಡಿದ್ದು ಯಾಕೆ: ಪ್ರಿಯಾಂಕಾ ಗಾಂಧಿ

ಭಾರತೀಯರಿಗೆ ಕೈಕೋಳ ಹಾಕಿ ಗಡೀಪಾರು ಮಾಡಲು ಮೋದಿ ಅವಕಾಶ ನೀಡಿದ್ದು ಯಾಕೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರನ್ನು ಗಡೀಪಾರು ಮಾಡಿದ ರೀತಿಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. “ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಈ ವಿಷಯದ ಬಗ್ಗೆ ಉತ್ತರಿಸಬೇಕು” ಎಂದು ಒತ್ತಾಯಿಸಿದರು.

104 ಜನ ಅಕ್ರಮ ಭಾರತೀಯ ವಲಸಿಗರನ್ನು ಹೊತ್ತೊಯ್ಯುವ ಯುಎಸ್ ಮಿಲಿಟರಿ ವಿಮಾನ ಬುಧವಾರ ಅಮೃತಸರದಲ್ಲಿ ಇಳಿಯಿತು. ಅಕ್ರಮ ವಲಸಿಗರ ವಿರುದ್ಧದ ಕ್ರಮದ ಭಾಗವಾಗಿ ಡೊನಾಲ್ಡ್ ಟ್ರಂಪ್ ಸರ್ಕಾರವು ಗಡೀಪಾರು ಮಾಡಿದ ಭಾರತೀಯರ ಮೊದಲ ಬ್ಯಾಚ್ ಇದು. ಪ್ರಯಾಣದುದ್ದಕ್ಕೂ ತಮ್ಮ ಕೈಗಳು ಮತ್ತು ಕಾಲುಗಳನ್ನು ಬಂಧಿಸಲಾಗಿತ್ತು, ಅಮೃತಸರ ವಿಮಾನ ನಿಲ್ದಾಣದಲ್ಲಿ ಇಳಿದ ನಂತರವೇ ಅವರ ಸಂಕೋಲೆಗಳನ್ನು ಬಿಚ್ಚಲಾಯಿತು ಎಂದು ಗಡೀಪಾರಾದ ಭಾರತೀಯರೊಬ್ಬರು ಹೇಳಿಕೊಂಡರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾತನಾಡಿ, “ಮೋದಿ ಜಿ ಮತ್ತು ಟ್ರಂಪ್ ಜಿ ತುಂಬಾ ಒಳ್ಳೆಯ ಸ್ನೇಹಿತರು ಎಂದು ಬಹಳಷ್ಟು ಹೇಳಲಾಗಿತ್ತು. ಆದರೂ ಅವರ ಕೈಗೆ ಕೋಳ ಹಾಕಲು ಮೋದಿ ಜಿ ಅವಕಾಶ ನೀಡಿದದ್ದು ಯಾಕೆ? ಅವರನ್ನು ಕರೆತರಲು ನಾವು ನಮ್ಮ ವಿಮಾನವನ್ನು ಕಳುಹಿಸಬಹುದಿತ್ತಲ್ಲವೇ ಮನುಷ್ಯರೊಂದಿಗೆ ವರ್ತಿಸಬೇಕಾದ ರೀತಿ ಇದೇನಾ” ಎಂದು ಅವರು ಹೇಳಿದರು.

ವಿದೇಶಾಂಗ ಸಚಿವರು ಉತ್ತರ ನೀಡಬೇಕೇ ಎಂದು ಕೇಳಿದಾಗ, “ಅವರು ಉತ್ತರಿಸಬೇಕು, ಪ್ರಧಾನಿಯೂ ಉತ್ತರ ನೀಡಬೇಕು. ಇದೇನಾ ದಾರಿ?” ಎಂದು ಅವರು ಹೇಳಿದರು.

ಭಾರತೀಯರ ಘನತೆಗೆ ಮಾಡಿದ ಅವಮಾನ: ಶಶಿ ತರೂರ್

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರನ್ನು ಗಡೀಪಾರು ಮಾಡುವ ವಿಧಾನವು “ಭಾರತ ಮತ್ತು ಭಾರತೀಯರ ಘನತೆಗೆ ಮಾಡಿದ ಅವಮಾನ” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಗುರುವಾರ ಹೇಳಿದ್ದಾರೆ.

ಸರ್ಕಾರವು ಅಮೆರಿಕಕ್ಕೆ ಸಂದೇಶವನ್ನು ನೀಡಬೇಕಾಗಿದೆ. ಅವಮಾನಕರ ರೀತಿಯಲ್ಲಿ ಗಡೀಪಾರು ಮಾಡಲು ಯಾವುದೇ ಹಕ್ಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಭಾರತೀಯರ ಗಡೀಪಾರು ಬಗ್ಗೆ ಕೇಳಿದಾಗ, “ಗಡೀಪಾರು ಮಾಡಿದ ರೀತಿಯ ಬಗ್ಗೆ ನಾವು ಪ್ರತಿಭಟಿಸುತ್ತಿದ್ದೇವೆ. ಅವರ ದೇಶದಲ್ಲಿ ಅಕ್ರಮವಾಗಿ ವಾಸಿಸುವ ಜನರನ್ನು ಗಡೀಪಾರು ಮಾಡಲು ಅವರಿಗೆ ಎಲ್ಲಾ ಕಾನೂನುಬದ್ಧ ಹಕ್ಕಿದೆ. ಅವರು ಭಾರತೀಯರು ಎಂದು ಸಾಬೀತಾದರೆ, ನಾವು ಅವರನ್ನು ಸ್ವೀಕರಿಸುವ ಬಾಧ್ಯತೆಯನ್ನು ಹೊಂದಿದ್ದೇವೆ. ಆದರೆ, ಅವರನ್ನು ಈ ರೀತಿ ಹಠಾತ್ತನೆ ಮಿಲಿಟರಿ ವಿಮಾನದಲ್ಲಿ ಮತ್ತು ಕೈಕೋಳದಲ್ಲಿ ಕಳುಹಿಸುವುದು ಭಾರತಕ್ಕೆ ಮಾಡಿದ ಅವಮಾನ, ಇದು ಭಾರತೀಯರ ಘನತೆಗೆ ಮಾಡಿದ ಅವಮಾನ ಮತ್ತು ನಾವು ಖಂಡಿತವಾಗಿಯೂ ಪ್ರತಿಭಟಿಸಬೇಕು” ಎಂದು ತರೂರ್ ಪ್ರತಿಪಾದಿಸಿದರು.

ಇದನ್ನೂ ಓದಿ; ಗಡೀಪಾರಾದವರನ್ನು ಬಂಧಿಸುವುದು ಭಾರತಕ್ಕೆ ಮಾಡಿದ ಅವಮಾನ: ಪಂಜಾಬ್ ಸಿಎಂ ಮಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...