Homeಮುಖಪುಟಭಾರತೀಯರಿಗೆ ಕೈಕೋಳ ಹಾಕಿ ಗಡೀಪಾರು ಮಾಡಲು ಮೋದಿ ಅವಕಾಶ ನೀಡಿದ್ದು ಯಾಕೆ: ಪ್ರಿಯಾಂಕಾ ಗಾಂಧಿ

ಭಾರತೀಯರಿಗೆ ಕೈಕೋಳ ಹಾಕಿ ಗಡೀಪಾರು ಮಾಡಲು ಮೋದಿ ಅವಕಾಶ ನೀಡಿದ್ದು ಯಾಕೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರನ್ನು ಗಡೀಪಾರು ಮಾಡಿದ ರೀತಿಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. “ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಈ ವಿಷಯದ ಬಗ್ಗೆ ಉತ್ತರಿಸಬೇಕು” ಎಂದು ಒತ್ತಾಯಿಸಿದರು.

104 ಜನ ಅಕ್ರಮ ಭಾರತೀಯ ವಲಸಿಗರನ್ನು ಹೊತ್ತೊಯ್ಯುವ ಯುಎಸ್ ಮಿಲಿಟರಿ ವಿಮಾನ ಬುಧವಾರ ಅಮೃತಸರದಲ್ಲಿ ಇಳಿಯಿತು. ಅಕ್ರಮ ವಲಸಿಗರ ವಿರುದ್ಧದ ಕ್ರಮದ ಭಾಗವಾಗಿ ಡೊನಾಲ್ಡ್ ಟ್ರಂಪ್ ಸರ್ಕಾರವು ಗಡೀಪಾರು ಮಾಡಿದ ಭಾರತೀಯರ ಮೊದಲ ಬ್ಯಾಚ್ ಇದು. ಪ್ರಯಾಣದುದ್ದಕ್ಕೂ ತಮ್ಮ ಕೈಗಳು ಮತ್ತು ಕಾಲುಗಳನ್ನು ಬಂಧಿಸಲಾಗಿತ್ತು, ಅಮೃತಸರ ವಿಮಾನ ನಿಲ್ದಾಣದಲ್ಲಿ ಇಳಿದ ನಂತರವೇ ಅವರ ಸಂಕೋಲೆಗಳನ್ನು ಬಿಚ್ಚಲಾಯಿತು ಎಂದು ಗಡೀಪಾರಾದ ಭಾರತೀಯರೊಬ್ಬರು ಹೇಳಿಕೊಂಡರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾತನಾಡಿ, “ಮೋದಿ ಜಿ ಮತ್ತು ಟ್ರಂಪ್ ಜಿ ತುಂಬಾ ಒಳ್ಳೆಯ ಸ್ನೇಹಿತರು ಎಂದು ಬಹಳಷ್ಟು ಹೇಳಲಾಗಿತ್ತು. ಆದರೂ ಅವರ ಕೈಗೆ ಕೋಳ ಹಾಕಲು ಮೋದಿ ಜಿ ಅವಕಾಶ ನೀಡಿದದ್ದು ಯಾಕೆ? ಅವರನ್ನು ಕರೆತರಲು ನಾವು ನಮ್ಮ ವಿಮಾನವನ್ನು ಕಳುಹಿಸಬಹುದಿತ್ತಲ್ಲವೇ ಮನುಷ್ಯರೊಂದಿಗೆ ವರ್ತಿಸಬೇಕಾದ ರೀತಿ ಇದೇನಾ” ಎಂದು ಅವರು ಹೇಳಿದರು.

ವಿದೇಶಾಂಗ ಸಚಿವರು ಉತ್ತರ ನೀಡಬೇಕೇ ಎಂದು ಕೇಳಿದಾಗ, “ಅವರು ಉತ್ತರಿಸಬೇಕು, ಪ್ರಧಾನಿಯೂ ಉತ್ತರ ನೀಡಬೇಕು. ಇದೇನಾ ದಾರಿ?” ಎಂದು ಅವರು ಹೇಳಿದರು.

ಭಾರತೀಯರ ಘನತೆಗೆ ಮಾಡಿದ ಅವಮಾನ: ಶಶಿ ತರೂರ್

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರನ್ನು ಗಡೀಪಾರು ಮಾಡುವ ವಿಧಾನವು “ಭಾರತ ಮತ್ತು ಭಾರತೀಯರ ಘನತೆಗೆ ಮಾಡಿದ ಅವಮಾನ” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಗುರುವಾರ ಹೇಳಿದ್ದಾರೆ.

ಸರ್ಕಾರವು ಅಮೆರಿಕಕ್ಕೆ ಸಂದೇಶವನ್ನು ನೀಡಬೇಕಾಗಿದೆ. ಅವಮಾನಕರ ರೀತಿಯಲ್ಲಿ ಗಡೀಪಾರು ಮಾಡಲು ಯಾವುದೇ ಹಕ್ಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಭಾರತೀಯರ ಗಡೀಪಾರು ಬಗ್ಗೆ ಕೇಳಿದಾಗ, “ಗಡೀಪಾರು ಮಾಡಿದ ರೀತಿಯ ಬಗ್ಗೆ ನಾವು ಪ್ರತಿಭಟಿಸುತ್ತಿದ್ದೇವೆ. ಅವರ ದೇಶದಲ್ಲಿ ಅಕ್ರಮವಾಗಿ ವಾಸಿಸುವ ಜನರನ್ನು ಗಡೀಪಾರು ಮಾಡಲು ಅವರಿಗೆ ಎಲ್ಲಾ ಕಾನೂನುಬದ್ಧ ಹಕ್ಕಿದೆ. ಅವರು ಭಾರತೀಯರು ಎಂದು ಸಾಬೀತಾದರೆ, ನಾವು ಅವರನ್ನು ಸ್ವೀಕರಿಸುವ ಬಾಧ್ಯತೆಯನ್ನು ಹೊಂದಿದ್ದೇವೆ. ಆದರೆ, ಅವರನ್ನು ಈ ರೀತಿ ಹಠಾತ್ತನೆ ಮಿಲಿಟರಿ ವಿಮಾನದಲ್ಲಿ ಮತ್ತು ಕೈಕೋಳದಲ್ಲಿ ಕಳುಹಿಸುವುದು ಭಾರತಕ್ಕೆ ಮಾಡಿದ ಅವಮಾನ, ಇದು ಭಾರತೀಯರ ಘನತೆಗೆ ಮಾಡಿದ ಅವಮಾನ ಮತ್ತು ನಾವು ಖಂಡಿತವಾಗಿಯೂ ಪ್ರತಿಭಟಿಸಬೇಕು” ಎಂದು ತರೂರ್ ಪ್ರತಿಪಾದಿಸಿದರು.

ಇದನ್ನೂ ಓದಿ; ಗಡೀಪಾರಾದವರನ್ನು ಬಂಧಿಸುವುದು ಭಾರತಕ್ಕೆ ಮಾಡಿದ ಅವಮಾನ: ಪಂಜಾಬ್ ಸಿಎಂ ಮಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...