Homeಮುಖಪುಟರಾಜ್ಯಪಾಲರು ಮೂರು ವರ್ಷಗಳಿಂದ ಮಸೂದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದೇಕೆ? ವಿವರಣೆ ಕೇಳಿದ ಸುಪ್ರೀಂ ಕೋರ್ಟ್

ರಾಜ್ಯಪಾಲರು ಮೂರು ವರ್ಷಗಳಿಂದ ಮಸೂದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದೇಕೆ? ವಿವರಣೆ ಕೇಳಿದ ಸುಪ್ರೀಂ ಕೋರ್ಟ್

ನ್ಯಾಯಾಲಯದ ಅಂಗಳದಲ್ಲಿ ತಮಿಳುನಾಡಿನ ರಾಜ್ಯಪಾಲ VS ಸರ್ಕಾರದ ತಿಕ್ಕಾಟ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ರಾಜ್ಯ ಸರ್ಕಾರದ ಹಲವು ಮಸೂದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡು ಒಪ್ಪಿಗೆ ನೀಡದೆ, ಅವುಗಳಲ್ಲಿ ಕೆಲವನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸುವುದಾಗಿ ಘೋಷಿಸಿದ್ದೇಕೆ? ಎಂದು ಸುಪ್ರೀಂ ಕೋರ್ಟ್ ಗುರುವಾರ(ಫೆ.6) ಪ್ರಶ್ನಿಸಿದೆ.

ಮಸೂದೆಗಳ ಕುರಿತು ನಿರ್ಧರಿಸಲು ರಾಜ್ಯಪಾಲರು “ತಮ್ಮದೇ ಕಾರ್ಯವಿಧಾನ ಅಳವಡಿಸಿಕೊಂಡಂತೆ ಕಾಣುತ್ತಿದೆ” ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಟೀಕಿಸಿದ್ದಾರೆ.

2020 ಮತ್ತು 2023ರ ನಡುವೆ ಅಂಗೀಕರಿಸಲಾದ 10 ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದೆ ಹಾಗೆಯೇ ಉಳಿಸಿಕೊಂಡಿರುವ ಹಿನ್ನೆಲೆ, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಎರಡು ರಿಟ್ ಅರ್ಜಿಗಳ ವಿಚಾರಣೆಯನ್ನು ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ ನಡೆಸುತ್ತಿದೆ.

“ರಾಜ್ಯಪಾಲರು ಮೂರು ವರ್ಷಗಳನ್ನು ತೆಗೆದುಕೊಂಡು ಕಂಡುಕೊಂಡ ಮಸೂದೆಗಳಲ್ಲಿನ ಅಂತಹ ಅಸಹ್ಯಕರವಾದ ವಿಷಯ ಯಾವುದು?” ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಮತ್ತು ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದು ಹಾಕುವ ನಿಬಂಧನೆಗಳನ್ನು ಒಳಗೊಂಡ 10 ಪುನರ್-ಜಾರಿಗೊಳಿಸಲಾದ ಮಸೂದೆಗಳನ್ನು ನವೆಂಬರ್ 18, 2023 ರಂದು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ. ರಾಷ್ಟ್ರಪತಿಗಳು ಒಂದನ್ನು ಅನುಮೋದಿಸಿದ್ದು, ಏಳನ್ನು ತಿರಸ್ಕರಿಸಿದ್ದಾರೆ ಮತ್ತು ಎರಡನ್ನು ಹಾಗೆಯೇ ಇಟ್ಟಿದ್ದಾರೆ.

ರಾಜ್ಯಪಾಲರು ಅತ್ತ ಮಸೂದೆಗಳಿಗೆ ಒಪ್ಪಿಗೆ ನೀಡದೆ, ಇತ್ತ ವಿಧಾನಸಭೆಗೆ ಹಿಂದಿರುಗಿಸದೆ
ಸಂವಿಧಾನದ 200ನೇ ವಿಧಿಯ ವಿರುದ್ದ ನಡೆದುಕೊಂಡಿದ್ದಾರೆ. ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವ ಅಥವಾ ತಿರಸ್ಕರಿಸುವ ರಾಜ್ಯಪಾಲರ ಅಧಿಕಾರವು ಸಾಂವಿಧಾನಿಕ ನಿಬಂಧನೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ರಾಜ್ಯಪಾಲರು ಮಸೂದೆಗಳಿಗೆ ಏಕೆ ಅಂಕಿತ ಹಾಕಿಲ್ಲ ಎಂಬುವುದನ್ನು ವಾಸ್ತವಿಕವಾಗಿ ಅಥವಾ ನಿರ್ಧಿಷ್ಟವಾಗಿ ತೋರಿಸಬೇಕು ಎಂದು ರಾಜ್ಯಪಾಲ ರವಿ ಅವರನ್ನು ಪ್ರತಿನಿಧಿಸಿದ್ದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರಿಗೆ ನ್ಯಾಯಮೂರ್ತಿ ಪರ್ದಿವಾಲಾ ಅವರು ಸೂಚಿಸಿದ್ದಾರೆ.

“ಕೆಲವು ಮೂಲ ಕಡತಗಳಿಂದ ಅಥವಾ ಇತರ ಕೆಲವು ದಾಖಲೆಗಳಿಂದ, ರಾಜ್ಯಪಾಲರ ಕಚೇರಿಯಲ್ಲಿ ಲಭ್ಯವಿರುವ ಕೆಲವು ಸಮಕಾಲೀನ ದಾಖಲೆಗಳಿಂದ ಏನನ್ನು ಪರಿಶೀಲಿಸಲಾಗಿದೆ, ಏನು ಚರ್ಚಿಸಲಾಗಿದೆ, ಏನೆಲ್ಲಾ ಲೋಪಗಳಿವೆ ಎಂಬುವುದರ ಕುರಿತು ನಮಗೆ ತೋರಿಸಿ” ಎಂದು ನ್ಯಾಯಾಧೀಶರು ಎಜಿಗೆ ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ.

ಪಂಜಾಬ್‌ ರಾಜ್ಯಕ್ಕೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ, ಮಸೂದೆಗಳನ್ನು ತಡೆ ಹಿಡಿಯುವ ಮೂಲಕ ವಿಧಾನಸಭೆಯನ್ನು ವೀಟೋ ಮಾಡಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ, ತಮಿಳುನಾಡು ರಾಜ್ಯಪಾಲರು ಮಸೂದೆಗಳನ್ನು ತಡೆ ಹಿಡಿದಿದ್ದಾರೆ ಎಂಬುವುದನ್ನು ನ್ಯಾಯಮೂರ್ತಿ ಪರ್ದಿವಾಲಾ ಗಮನಿಸಿದ್ದಾರೆ.

ನವೆಂಬರ್ 2023ರಲ್ಲಿ ಸುಪ್ರೀಂ ಕೋರ್ಟ್ ಆಗಿನ ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ತಮ್ಮ ಮುಂದೆ ಬಾಕಿ ಇರುವ ನಾಲ್ಕು ಮಸೂದೆಗಳ ಬಗ್ಗೆ ನಿರ್ಧರಿಸುವಂತೆ ನಿರ್ದೇಶಿಸಿತ್ತು. ಸಂಸದೀಯ ಪ್ರಜಾಪ್ರಭುತ್ವದಲ್ಲಿ ನಿಜವಾದ ಅಧಿಕಾರ ಚುನಾಯಿತ ಪ್ರತಿನಿಧಿಗಳ ಕೈಯಲ್ಲಿ ಇರುತ್ತದೆ. ರಾಜ್ಯಪಾಲರು ರಾಜ್ಯದ ನಾಮಮಾತ್ರ ಮುಖ್ಯಸ್ಥರು ಎಂದಿತ್ತು.

ರಾಜ್ಯಪಾಲರು ಮಸೂದೆಗಳಿಗೆ ಅನಿರ್ದಿಷ್ಟಾವಧಿಗೆ ಒಪ್ಪಿಗೆ ನೀಡದೆ ತಡೆಹಿಡಿಯುವ ಮೂಲಕ ರಾಜ್ಯವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದು ತಮಿಳುನಾಡು ರಾಜ್ಯ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ ಮುಂದೆ ವಾದಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್-ಹೈಕೋರ್ಟ್ ನ್ಯಾಯಾಧೀಶರ ವೇತನ ಹೆಚ್ಚಿಸುವ ಯಾವುದೇ ಪ್ರಸ್ತಾಪವಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...